AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್​ 8ರಿಂದ ಹಿಂದಿ ಬಿಗ್​ ಬಾಸ್​ ಸೀಸನ್​ 15; ಆದರೆ, ಟಿವಿಯಲ್ಲಿ ಇದನ್ನು ನೋಡೋಕಾಗಲ್ಲ

ವೂಟ್​ ಆ್ಯಪ್​ಗೆ ಈ ಬಾರಿ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತಿದೆ. ಬಿಗ್​ ಬಾಸ್​ ಒಟಿಟಿಯನ್ನು ವೂಟ್​ ಪರಿಚಯಿಸಿದೆ. ಮೊದಲು ಆರು ವಾರದ ಎಪಿಸೋಡ್​ಗಳು ವೂಟ್​ನಲ್ಲಿ ಮಾತ್ರ ಪ್ರಸಾರವಾಗಲಿದ್ದು ನಂತರ ಟಿವಿಗೆ ಶಿಫ್ಟ್​ ಆಗಲಿದೆ.

ಆಗಸ್ಟ್​ 8ರಿಂದ ಹಿಂದಿ ಬಿಗ್​ ಬಾಸ್​ ಸೀಸನ್​ 15; ಆದರೆ, ಟಿವಿಯಲ್ಲಿ ಇದನ್ನು ನೋಡೋಕಾಗಲ್ಲ
ಸಲ್ಮಾನ್​ ಖಾನ್
TV9 Web
| Edited By: |

Updated on:Jul 21, 2021 | 7:55 PM

Share

ಹಿಂದಿ ಬಿಗ್​ ಬಾಸ್​ ಸೀಸನ್​ 15 ಯಾವಾಗ ಆರಂಭಗೊಳ್ಳಲಿದೆ ಎನ್ನುವ ಪ್ರಶ್ನೆ ಹರಿದಾಡಿತ್ತು. ಇದಕ್ಕೆ ಈಗ ಉತ್ತರ ಸಿಕ್ಕಿದೆ. ಆಗಸ್ಟ್​ 8ರಿಂದ ಈ ಶೋ ಆರಂಭಗೊಳ್ಳುತ್ತಿದೆ. ಬಿಗ್​ ಬಾಸ್​ ಮನೆ ಸೇರುವ ಸ್ಪರ್ಧಿಗಳು ಯಾರ್ಯಾರು ಎನ್ನುವ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ಆಗುತ್ತಿವೆ.

ವೂಟ್​ ಆ್ಯಪ್​ಗೆ ಈ ಬಾರಿ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತಿದೆ. ಬಿಗ್​ ಬಾಸ್​ ಒಟಿಟಿಯನ್ನು ವೂಟ್​ ಪರಿಚಯಿಸಿದೆ. ಮೊದಲು ಆರು ವಾರದ ಎಪಿಸೋಡ್​ಗಳು ವೂಟ್​ನಲ್ಲಿ ಮಾತ್ರ ಪ್ರಸಾರವಾಗಲಿದ್ದು ನಂತರ ಟಿವಿಗೆ ಶಿಫ್ಟ್​ ಆಗಲಿದೆ. ಒಟಿಟಿ ಹಾಗೂ ಟಿವಿಯಲ್ಲಿ ಪ್ರಸಾರವಾಗುವ ಶೋಅನ್ನು ಸಲ್ಮಾನ್​ ಖಾನ್​ ಅವರೇ ನಡೆಸಿಕೊಡಲಿದ್ದಾರೆ.

ಸಾಮಾನ್ಯವಾಗಿ ಬಿಗ್​ ಬಾಸ್ ಪ್ರತೀ ಸೀಸನ್​ 100ರಿಂದ 120 ದಿನಗಳ ಕಾಲ ನಡೆಯುತ್ತದೆ. ಅಂದರೆ ನಾಲ್ಕು ತಿಂಗಳಿಗೆ ಬಿಗ್​ ಬಾಸ್​ ಪೂರ್ಣಗೊಳ್ಳುತ್ತದೆ. ಆದರೆ, ಈಗ ಇದನ್ನು ಎರಡು ತಿಂಗಳು ಹೆಚ್ಚುವರಿಯಾಗಿ ನಡೆಸೋಕೆ ವಾಹಿನಿ ನಿರ್ಧರಿಸಿದೆ ಎನ್ನಲಾಗುತ್ತಿದೆ. ಇದು ತುಂಬಾನೇ ದೀರ್ಘ ಎನಿಸಿರುವುದರಿಂದ ಮೊದಲ ಆರು ವಾರ ಈ ಶೋ ಅನ್ನು ಒಟಿಟಿಯಲ್ಲಿ ಪ್ರಸಾರ ಮಾಡುವ ನಿರ್ಧಾರಕ್ಕೆ ಬರಲಾಗಿದೆ.

View this post on Instagram

A post shared by Voot (@voot)

ಬಿಗ್​ ಬಾಸ್​ ಮನೆ ಪ್ರವೇಶಿಸುವವರು ಯಾರು ಎನ್ನುವ ಬಗ್ಗೆ ಚರ್ಚೆ ಜೋರಾಗಿದೆ. ನಟಿ ರಿಯಾ ಚಕ್ರವರ್ತಿ ಕೂಡ ಬಿಗ್​ ಬಾಸ್​ ಮನೆ ಪ್ರವೇಶಿಸಲಿದ್ದಾರಂತೆ. ಸುಶಾಂತ್​ ಸಿಂಗ್ ಸಾವಿನ ನಂತರದಲ್ಲಿ ರಿಯಾ ಚಕ್ರವರ್ತಿ ಹೆಸರು ಮುನ್ನೆಲೆಗೆ ಬಂದಿತ್ತು. ರಿಯಾ ಹಾಗೂ ಸುಶಾಂತ್​ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ಇವರ ನಡುವಿನ ಪ್ರೀತಿ ಮುರಿದು ಬಿದ್ದಿತ್ತು. ಸುಶಾಂತ್​ ಸಾವಿನ ಪ್ರಕರಣದ ತನಿಖೆ ವೇಳೆ ರಿಯಾ ವಿಚಾರಣೆ ಮಾಡಲಾಗಿತ್ತು. ನಂತರ ಅವರನ್ನು ಅರೆಸ್ಟ್​ ಕೂಡ ಮಾಡಲಾಗಿತ್ತು. ಈಗ ಅವರು, ಜೈಲಿನಿಂದ ಜಾಮೀನು ಪಡೆದು ಹೊರ ಬಂದಿದ್ದಾರೆ. ಬಿಗ್​ ಬಾಸ್ ತಂಡದವರು ರಿಯಾ ಅವರನ್ನು ಅಪ್ರೋಚ್​ ಮಾಡಿದ್ದಾರೆ ಎನ್ನಲಾಗಿದೆ. ರಿಯಾ ಮಾತ್ರವಲ್ಲದೆ, ಸಾಕಷ್ಟು ಜನರ ಹೆಸರು ಕೇಳಿ ಬರುತ್ತಿದೆ. ಇವರಲ್ಲಿ ಯಾರ್ಯಾರು ಬಿಗ್​ ಬಾಸ್​ ಮನೆ ಒಳಗೆ ಹೋಗುತ್ತಾರೆ ಎನ್ನುವ ಕುತೂಹಲ ಸದ್ಯದ್ದು.

ಇದನ್ನೂ ಓದಿ: ದಬಾಂಗ್​ ಸರಣಿ ವಿಚಾರದಲ್ಲಿ ದೊಡ್ಡ ರಿಸ್ಕ್​ ತೆಗೆದುಕೊಳ್ಳುತ್ತಿದ್ದಾರೆ ಸಲ್ಮಾನ್​ ಖಾನ್

Published On - 7:54 pm, Wed, 21 July 21

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!