AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುತೆರೆಯ ಖ್ಯಾತ ನಟ ವಿಕಾಸ್​ ಸೇಥಿ ಹೃದಯಾಘಾತದಿಂದ ನಿಧನ; ಹಬ್ಬದ ನಡುವೆ ಕಹಿಸುದ್ದಿ

ಖ್ಯಾತ ನಟ ವಿಕಾಸ್​ ಸೇಥಿ ಅವರಿಗೆ ಆರ್ಥಿಕ ತೊಂದರೆ ಉಂಟಾಗಿತ್ತು ಎನ್ನಲಾಗಿದೆ. ಇತ್ತೀಚಿನ ದಿನಗಳಲ್ಲಿ ಅವರು ಖಿನ್ನತೆಗೆ ಒಳಗಾಗಿದ್ದರು ಎಂಬ ಮಾಹಿತಿ ಕೇಳಿಬಂದಿದೆ. ಭಾನುವಾರ (ಸೆಪ್ಟೆಂಬರ್​ 8) ಮಲಗಿರುವಾಗಲೇ 48ರ ಪ್ರಾಯದ ವಿಕಾಸ್​ ಸೇಥಿ ಅವರಿಗೆ ಹೃದಯಾಘಾತ ಆಗಿದೆ. ಮುಂಬೈನಲ್ಲಿ ಅವರ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಆ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ..

ಕಿರುತೆರೆಯ ಖ್ಯಾತ ನಟ ವಿಕಾಸ್​ ಸೇಥಿ ಹೃದಯಾಘಾತದಿಂದ ನಿಧನ; ಹಬ್ಬದ ನಡುವೆ ಕಹಿಸುದ್ದಿ
ವಿಕಾಸ್​ ಸೇಥಿ
ಮದನ್​ ಕುಮಾರ್​
|

Updated on: Sep 08, 2024 | 4:17 PM

Share

ಹಿಂದಿ ಸಿನಿಮಾ ಹಾಗೂ ಸೀರಿಯಲ್​ಗಳಲ್ಲಿ ನಟಿಸಿ ಜನಪ್ರಿಯತೆ ಪಡೆದಿದ್ದ ನಟ ವಿಕಾಸ್​ ಸೇಥಿ ಅವರ ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ಇಂದು (ಸೆಪ್ಟೆಂಬರ್​ 8) ಕೊನೆಯುಸಿರು ಎಳೆದಿದ್ದಾರೆ. ವಿಕಾಸ್ ಸೇಥಿ ಅವರಿಗೆ 48 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ಅನೇಕ ಸೆಲೆಬ್ರಿಟಿಗಳು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಗೌರಿ-ಗಣೇಶ ಹಬ್ಬದ ಸಂಭ್ರಮದಲ್ಲಿ ಇದ್ದ ಎಲ್ಲರಿಗೂ ಈ ಸುದ್ದಿ ಕೇಳಿ ಶಾಕ್​ ಆಗಿದೆ. ಹಬ್ಬದ ನಡುವೆ ಸೂತಕದ ಛಾಯೆ ಆವರಿಸಿದೆ. ವಿಕಾಸ್​ ಸೇಥಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅನೇಕರು ಪ್ರಾರ್ಥಿಸಿದ್ದಾರೆ.

ನಿದ್ರೆಯಲ್ಲಿ ಇರುವಾಗಲೇ ವಿಕಾಸ್​ ಸೇಥಿ ಅವರಿಗೆ ಹೃದಯಾಘಾತ ಆಗಿದೆ. ಬಳಿಕ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಷ್ಟರಲ್ಲಾಗಲೇ ಅವರ ಉಸಿರು ನಿಂತಿತ್ತು. ಈ ವಿಷಯ ತಿಳಿದ ಅವರ ಅಭಿಮಾನಿಗಳಿಗೆ ತೀವ್ರ ನೋವಾಗಿದೆ. ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ವಿಕಾಸ್ ಸೇಥಿ ಅವರು ಸಕ್ರಿಯರಾಗಿದ್ದಾರೆ. ಸೀರಿಯಲ್​ಗಳು ಮಾತ್ರವಲ್ಲದೇ ರಿಯಾಲಿಟಿ ಶೋಗಳಲ್ಲೂ ಸ್ಪರ್ಧಿಸಿ ಅವರು ಹೆಸರು ಗಳಿಸಿದ್ದರು.

ಕ್ಯೂಂಕಿ ಸಾಸ್ ಬಿ ಕಭಿ ಬಹು ಥಿ, ಕಸೌಟಿ ಜಿಂದಗಿ ಕೆ, ಕಹಿ ತೋ ಹೋಗಾ, ಕೆ. ಸ್ಟ್ರೀಟ್​ ಪಾಲಿ ಹಿಲ್​, ಹಮಾರಿ ಬೇಟಿಯೋಂಕಾ ವಿವಾಹ್, ಡರ್​ ಸಬ್ಕೋ ಲಗ್ತಾ ಹೈ, ಸಂಸ್ಕಾರ್​ ಲಕ್ಷ್ಮಿ, ಸರುರಾಲ್​ ಸಿಮರ್​ ಕಾ ಮುಂತಾದ ಧಾರಾವಾಹಿಗಳಲ್ಲಿ ವಿಕಾಸ್​ ಸೇಥಿ ನಟಿಸಿದ್ದರು. ‘ದೀವಾನಾಪನ್​’, ‘ಕಭಿ ಖುಷಿ ಕಭಿ ಗಮ್​’, ‘ಓಪ್ಸ್​’, ‘ಇಸ್ಮಾರ್ಟ್​ ಶಂಕರ್​’ ಮುಂತಾದ ಸಿನಿಮಾಗಳಲ್ಲಿ ಕೂಡ ವಿಕಾಸ್​ ಸೇಥಿ ಅವರು ಅಭಿನಯಿಸಿದ್ದರು.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಹೃದಯಾಘಾತ, ಜೀವ ಉಳಿಸಲು ವೈದ್ಯರ ಹೋರಾಟ ಹೇಗಿತ್ತು ನೋಡಿ…

2021ರಲ್ಲಿ ವಿಕಾಸ್​ ಸೇಥಿ ಅವರಿಗೆ ಕಾಲಿನ ಸರ್ಜರಿ ಆಗಿತ್ತು. ಸೋಶಿಯಲ್​ ಮೀಡಿಯಾದಲ್ಲಿ ಫಿಟ್ನೆಸ್​ ಬಗ್ಗೆ ಅವರು ಹಲವು ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಸ್ವಂತ ನಿರ್ಮಾಣ ಸಂಸ್ಥೆಯನ್ನು ಅವರು ಆರಂಭಿಸಿದ್ದರು. ಇತ್ತೀಚೆಗೆ ವಿಕಾಸ್​ ಸೇಥಿ ಅವರಿಗೆ ಹಣಕಾಸಿನ ತೊಂದರೆ ಆಗಿತ್ತು ಎನ್ನಲಾಗಿದೆ. ಆ ಕಾರಣದಿಂದ ಅವರು ಖಿನ್ನತೆಗೆ ಒಳಗಾಗಿದ್ದರು ಎಂಬ ಮಾತು ಕೂಡ ಕೇಳಿಬರುತ್ತಿದೆ. ಈ ಬಗ್ಗೆ ಕುಟುಂಬದವರ ಕಡೆಯಿಂದ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್