AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುತೆರೆ ನಟಿಗೆ ಸ್ತನದ ಕ್ಯಾನ್ಸರ್; ಮೂರನೇ ಸ್ಟೇಜ್​ನಲ್ಲಿದೆ ಅಪಾಯಕಾರಿ ರೋಗ

ಸಾಮಾಜಿಕ ಜಾಲತಾಣದಲ್ಲಿ ಹಿನಾ ಖಾನ್ ಅವರು ಈ ಬಗ್ಗೆ ಪೋಸ್ಟ್ ಹಾಕಿದ್ದಾರೆ. ‘ನಾನು ಒಂದು ಪ್ರಮುಖ ಸುದ್ದಿ ಹಂಚಿಕೊಳ್ಳಬೇಕು. ನನಗೆ ಮೂರನೇ ಸ್ಟೇಜ್​ನ ಸ್ತನ ಕ್ಯಾನ್ಸರ್ ಇದೆ’ ಎಂದು ಹಿನಾ ಖಾನ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಬಲ ತುಂಬುವ ಕೆಲಸ ಆಗುತ್ತಿದೆ.

ಕಿರುತೆರೆ ನಟಿಗೆ ಸ್ತನದ ಕ್ಯಾನ್ಸರ್; ಮೂರನೇ ಸ್ಟೇಜ್​ನಲ್ಲಿದೆ ಅಪಾಯಕಾರಿ ರೋಗ
ಹಿನಾ ಖಾನ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Jun 30, 2024 | 8:34 PM

Share

ಖ್ಯಾತ ಹಿಂದಿ ಕಿರುತೆರೆ ನಟಿ ಹಿನಾ ಖಾನ್ ಅವರಿಗೆ ಸ್ತನದ ಕ್ಯಾನ್ಸರ್ ಪತ್ತೆ ಆಗಿದೆ. ಈ ರೋಗ ಮೂರನೇ ಹಂತದಲ್ಲಿ ಇದೆ. ಈ ಬಗ್ಗೆ ಅವರು ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ. ಅವರಿಗೆ ಕ್ಯಾನ್ಸರ್ ವಿರುದ್ಧ ಹೋರಾಡುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಫ್ಯಾನ್ಸ್ ಕೋರಿಕೊಂಡಿದ್ದಾರೆ. ಅವರು ಈ ರೋಗದ ವಿರುದ್ಧ ಜಯಸಿ ಬರಲಿ ಎಂದು ಫ್ಯಾನ್ಸ್ ಪ್ರಾರ್ಥಿಸುತ್ತಿದ್ದಾರೆ. ‘ಯೇ ರಿಷ್ತಾ ಕ್ಯಾ ಕೆಹ್ಲಾತಾ ಹೇ’, ‘ಕೌಸಟಿ ಜಿಂದಗಿ ಕೇ 2’ ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಹಿನಾ ಖಾನ್ ಅವರು ಈ ಬಗ್ಗೆ ಪೋಸ್ಟ್ ಹಾಕಿದ್ದಾರೆ. ‘ನಾನು ಒಂದು ಪ್ರಮುಖ ಸುದ್ದಿ ಹಂಚಿಕೊಳ್ಳಬೇಕು. ನನಗೆ ಮೂರನೇ ಸ್ಟೇಜ್​ನ ಸ್ತನ ಕ್ಯಾನ್ಸರ್ ಇದೆ’ ಎಂದು ಹಿನಾ ಖಾನ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ‘ನಾನು ಚೆನ್ನಾಗಿಯೇ ಇದ್ದೇನೆ. ನಾನು ಗಟ್ಟಿ ಇದ್ದೇನೆ. ಈ ರೋಗದಿಂದ ಹೊರ ಬರಲು ಪ್ರಯತ್ನಿಸುತ್ತಿದ್ದೇನೆ. ನನಗೆ ಚಿಕಿತ್ಸೆ ಕೊಡಿಸುವ ಕೆಲಸ ಶುರುವಾಗಿದೆ. ಮತ್ತಷ್ಟು ಗಟ್ಟಿಯಾಗಿ ಬರಲು ಏನೆಲ್ಲ ಬೇಕೋ ಅದೆಲ್ಲವನ್ನೂ ಮಾಡುತ್ತೇನೆ’ ಎಂದಿದ್ದಾರೆ ಹಿನಾ ಖಾನ್.

‘ನನಗೆ ಗೌರವ ಹಾಗೂ ಖಾಸಗಿತನವನ್ನು ನೀಡಿ. ನೀವು ನೀಡಿರುವ ಪ್ರೀತಿ ಹಾಗೂ ಆಶೀರ್ವಾದವನ್ನು ನಾನು ಪ್ರಶಂಶಿಸುತ್ತೇನೆ’ ಎಂದು ಅವರು ಬರೆದುಕೊಂಡಿದ್ದಾರೆ. ಹಿನಾಗೆ ಈಗ 36 ವರ್ಷ ವಯಸ್ಸು. ಹಿಂದಿಯಲ್ಲಿ ಕೆಲವು ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ. ಅವರು ಸಾಕಷ್ಟು ಪಾಸಿಟಿವ್ ಆಗಿದ್ದಾರೆ.

ಇದನ್ನೂ ಓದಿ:  ಶಾರುಖ್ ಖಾನ್-ಹಿರಾನಿ ಸಿನಿಮಾಗೆ ಆರಂಭದಲ್ಲೇ ಹಿನ್ನಡೆ; ಸಿನಿಮಾದಿಂದ ಹೊರ ನಡೆದ ಪ್ರಮುಖ ವ್ಯಕ್ತಿ

ಹಿನಾ ಅವರನ್ನು ಬೆಂಬಲಿಸಿ ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್​ಗಳನ್ನು ಹಾಕುತ್ತಿದ್ದಾರೆ. ಹಿನಾಗೆ ಕ್ಯಾನ್ಸರ್ ವಿರುದ್ಧ ಹೋರಾಡುವ ಶಕ್ತಿಯನ್ನು ಫ್ಯಾನ್ಸ್ ನೀಡಲಿ ಎಂದು ಅನೇಕರು ಕೋರಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:28 am, Sat, 29 June 24

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್