ಕಿರುತೆರೆ ನಟಿಗೆ ಸ್ತನದ ಕ್ಯಾನ್ಸರ್; ಮೂರನೇ ಸ್ಟೇಜ್​ನಲ್ಲಿದೆ ಅಪಾಯಕಾರಿ ರೋಗ

ಸಾಮಾಜಿಕ ಜಾಲತಾಣದಲ್ಲಿ ಹಿನಾ ಖಾನ್ ಅವರು ಈ ಬಗ್ಗೆ ಪೋಸ್ಟ್ ಹಾಕಿದ್ದಾರೆ. ‘ನಾನು ಒಂದು ಪ್ರಮುಖ ಸುದ್ದಿ ಹಂಚಿಕೊಳ್ಳಬೇಕು. ನನಗೆ ಮೂರನೇ ಸ್ಟೇಜ್​ನ ಸ್ತನ ಕ್ಯಾನ್ಸರ್ ಇದೆ’ ಎಂದು ಹಿನಾ ಖಾನ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಬಲ ತುಂಬುವ ಕೆಲಸ ಆಗುತ್ತಿದೆ.

ಕಿರುತೆರೆ ನಟಿಗೆ ಸ್ತನದ ಕ್ಯಾನ್ಸರ್; ಮೂರನೇ ಸ್ಟೇಜ್​ನಲ್ಲಿದೆ ಅಪಾಯಕಾರಿ ರೋಗ
ಹಿನಾ ಖಾನ್
Follow us
| Updated By: ರಾಜೇಶ್ ದುಗ್ಗುಮನೆ

Updated on:Jun 30, 2024 | 8:34 PM

ಖ್ಯಾತ ಹಿಂದಿ ಕಿರುತೆರೆ ನಟಿ ಹಿನಾ ಖಾನ್ ಅವರಿಗೆ ಸ್ತನದ ಕ್ಯಾನ್ಸರ್ ಪತ್ತೆ ಆಗಿದೆ. ಈ ರೋಗ ಮೂರನೇ ಹಂತದಲ್ಲಿ ಇದೆ. ಈ ಬಗ್ಗೆ ಅವರು ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ. ಅವರಿಗೆ ಕ್ಯಾನ್ಸರ್ ವಿರುದ್ಧ ಹೋರಾಡುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಫ್ಯಾನ್ಸ್ ಕೋರಿಕೊಂಡಿದ್ದಾರೆ. ಅವರು ಈ ರೋಗದ ವಿರುದ್ಧ ಜಯಸಿ ಬರಲಿ ಎಂದು ಫ್ಯಾನ್ಸ್ ಪ್ರಾರ್ಥಿಸುತ್ತಿದ್ದಾರೆ. ‘ಯೇ ರಿಷ್ತಾ ಕ್ಯಾ ಕೆಹ್ಲಾತಾ ಹೇ’, ‘ಕೌಸಟಿ ಜಿಂದಗಿ ಕೇ 2’ ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಹಿನಾ ಖಾನ್ ಅವರು ಈ ಬಗ್ಗೆ ಪೋಸ್ಟ್ ಹಾಕಿದ್ದಾರೆ. ‘ನಾನು ಒಂದು ಪ್ರಮುಖ ಸುದ್ದಿ ಹಂಚಿಕೊಳ್ಳಬೇಕು. ನನಗೆ ಮೂರನೇ ಸ್ಟೇಜ್​ನ ಸ್ತನ ಕ್ಯಾನ್ಸರ್ ಇದೆ’ ಎಂದು ಹಿನಾ ಖಾನ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ‘ನಾನು ಚೆನ್ನಾಗಿಯೇ ಇದ್ದೇನೆ. ನಾನು ಗಟ್ಟಿ ಇದ್ದೇನೆ. ಈ ರೋಗದಿಂದ ಹೊರ ಬರಲು ಪ್ರಯತ್ನಿಸುತ್ತಿದ್ದೇನೆ. ನನಗೆ ಚಿಕಿತ್ಸೆ ಕೊಡಿಸುವ ಕೆಲಸ ಶುರುವಾಗಿದೆ. ಮತ್ತಷ್ಟು ಗಟ್ಟಿಯಾಗಿ ಬರಲು ಏನೆಲ್ಲ ಬೇಕೋ ಅದೆಲ್ಲವನ್ನೂ ಮಾಡುತ್ತೇನೆ’ ಎಂದಿದ್ದಾರೆ ಹಿನಾ ಖಾನ್.

‘ನನಗೆ ಗೌರವ ಹಾಗೂ ಖಾಸಗಿತನವನ್ನು ನೀಡಿ. ನೀವು ನೀಡಿರುವ ಪ್ರೀತಿ ಹಾಗೂ ಆಶೀರ್ವಾದವನ್ನು ನಾನು ಪ್ರಶಂಶಿಸುತ್ತೇನೆ’ ಎಂದು ಅವರು ಬರೆದುಕೊಂಡಿದ್ದಾರೆ. ಹಿನಾಗೆ ಈಗ 36 ವರ್ಷ ವಯಸ್ಸು. ಹಿಂದಿಯಲ್ಲಿ ಕೆಲವು ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ. ಅವರು ಸಾಕಷ್ಟು ಪಾಸಿಟಿವ್ ಆಗಿದ್ದಾರೆ.

ಇದನ್ನೂ ಓದಿ:  ಶಾರುಖ್ ಖಾನ್-ಹಿರಾನಿ ಸಿನಿಮಾಗೆ ಆರಂಭದಲ್ಲೇ ಹಿನ್ನಡೆ; ಸಿನಿಮಾದಿಂದ ಹೊರ ನಡೆದ ಪ್ರಮುಖ ವ್ಯಕ್ತಿ

ಹಿನಾ ಅವರನ್ನು ಬೆಂಬಲಿಸಿ ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್​ಗಳನ್ನು ಹಾಕುತ್ತಿದ್ದಾರೆ. ಹಿನಾಗೆ ಕ್ಯಾನ್ಸರ್ ವಿರುದ್ಧ ಹೋರಾಡುವ ಶಕ್ತಿಯನ್ನು ಫ್ಯಾನ್ಸ್ ನೀಡಲಿ ಎಂದು ಅನೇಕರು ಕೋರಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:28 am, Sat, 29 June 24

ತಾಜಾ ಸುದ್ದಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ