AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುತೆರೆ ನಟಿಗೆ ಸ್ತನದ ಕ್ಯಾನ್ಸರ್; ಮೂರನೇ ಸ್ಟೇಜ್​ನಲ್ಲಿದೆ ಅಪಾಯಕಾರಿ ರೋಗ

ಸಾಮಾಜಿಕ ಜಾಲತಾಣದಲ್ಲಿ ಹಿನಾ ಖಾನ್ ಅವರು ಈ ಬಗ್ಗೆ ಪೋಸ್ಟ್ ಹಾಕಿದ್ದಾರೆ. ‘ನಾನು ಒಂದು ಪ್ರಮುಖ ಸುದ್ದಿ ಹಂಚಿಕೊಳ್ಳಬೇಕು. ನನಗೆ ಮೂರನೇ ಸ್ಟೇಜ್​ನ ಸ್ತನ ಕ್ಯಾನ್ಸರ್ ಇದೆ’ ಎಂದು ಹಿನಾ ಖಾನ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಬಲ ತುಂಬುವ ಕೆಲಸ ಆಗುತ್ತಿದೆ.

ಕಿರುತೆರೆ ನಟಿಗೆ ಸ್ತನದ ಕ್ಯಾನ್ಸರ್; ಮೂರನೇ ಸ್ಟೇಜ್​ನಲ್ಲಿದೆ ಅಪಾಯಕಾರಿ ರೋಗ
ಹಿನಾ ಖಾನ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Jun 30, 2024 | 8:34 PM

Share

ಖ್ಯಾತ ಹಿಂದಿ ಕಿರುತೆರೆ ನಟಿ ಹಿನಾ ಖಾನ್ ಅವರಿಗೆ ಸ್ತನದ ಕ್ಯಾನ್ಸರ್ ಪತ್ತೆ ಆಗಿದೆ. ಈ ರೋಗ ಮೂರನೇ ಹಂತದಲ್ಲಿ ಇದೆ. ಈ ಬಗ್ಗೆ ಅವರು ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ. ಅವರಿಗೆ ಕ್ಯಾನ್ಸರ್ ವಿರುದ್ಧ ಹೋರಾಡುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಫ್ಯಾನ್ಸ್ ಕೋರಿಕೊಂಡಿದ್ದಾರೆ. ಅವರು ಈ ರೋಗದ ವಿರುದ್ಧ ಜಯಸಿ ಬರಲಿ ಎಂದು ಫ್ಯಾನ್ಸ್ ಪ್ರಾರ್ಥಿಸುತ್ತಿದ್ದಾರೆ. ‘ಯೇ ರಿಷ್ತಾ ಕ್ಯಾ ಕೆಹ್ಲಾತಾ ಹೇ’, ‘ಕೌಸಟಿ ಜಿಂದಗಿ ಕೇ 2’ ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಹಿನಾ ಖಾನ್ ಅವರು ಈ ಬಗ್ಗೆ ಪೋಸ್ಟ್ ಹಾಕಿದ್ದಾರೆ. ‘ನಾನು ಒಂದು ಪ್ರಮುಖ ಸುದ್ದಿ ಹಂಚಿಕೊಳ್ಳಬೇಕು. ನನಗೆ ಮೂರನೇ ಸ್ಟೇಜ್​ನ ಸ್ತನ ಕ್ಯಾನ್ಸರ್ ಇದೆ’ ಎಂದು ಹಿನಾ ಖಾನ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ‘ನಾನು ಚೆನ್ನಾಗಿಯೇ ಇದ್ದೇನೆ. ನಾನು ಗಟ್ಟಿ ಇದ್ದೇನೆ. ಈ ರೋಗದಿಂದ ಹೊರ ಬರಲು ಪ್ರಯತ್ನಿಸುತ್ತಿದ್ದೇನೆ. ನನಗೆ ಚಿಕಿತ್ಸೆ ಕೊಡಿಸುವ ಕೆಲಸ ಶುರುವಾಗಿದೆ. ಮತ್ತಷ್ಟು ಗಟ್ಟಿಯಾಗಿ ಬರಲು ಏನೆಲ್ಲ ಬೇಕೋ ಅದೆಲ್ಲವನ್ನೂ ಮಾಡುತ್ತೇನೆ’ ಎಂದಿದ್ದಾರೆ ಹಿನಾ ಖಾನ್.

‘ನನಗೆ ಗೌರವ ಹಾಗೂ ಖಾಸಗಿತನವನ್ನು ನೀಡಿ. ನೀವು ನೀಡಿರುವ ಪ್ರೀತಿ ಹಾಗೂ ಆಶೀರ್ವಾದವನ್ನು ನಾನು ಪ್ರಶಂಶಿಸುತ್ತೇನೆ’ ಎಂದು ಅವರು ಬರೆದುಕೊಂಡಿದ್ದಾರೆ. ಹಿನಾಗೆ ಈಗ 36 ವರ್ಷ ವಯಸ್ಸು. ಹಿಂದಿಯಲ್ಲಿ ಕೆಲವು ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ. ಅವರು ಸಾಕಷ್ಟು ಪಾಸಿಟಿವ್ ಆಗಿದ್ದಾರೆ.

ಇದನ್ನೂ ಓದಿ:  ಶಾರುಖ್ ಖಾನ್-ಹಿರಾನಿ ಸಿನಿಮಾಗೆ ಆರಂಭದಲ್ಲೇ ಹಿನ್ನಡೆ; ಸಿನಿಮಾದಿಂದ ಹೊರ ನಡೆದ ಪ್ರಮುಖ ವ್ಯಕ್ತಿ

ಹಿನಾ ಅವರನ್ನು ಬೆಂಬಲಿಸಿ ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್​ಗಳನ್ನು ಹಾಕುತ್ತಿದ್ದಾರೆ. ಹಿನಾಗೆ ಕ್ಯಾನ್ಸರ್ ವಿರುದ್ಧ ಹೋರಾಡುವ ಶಕ್ತಿಯನ್ನು ಫ್ಯಾನ್ಸ್ ನೀಡಲಿ ಎಂದು ಅನೇಕರು ಕೋರಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:28 am, Sat, 29 June 24

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್