AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್​ನಲ್ಲಿ ದೆವ್ವದ ಕಾಟ? ಆ ಒಂದು ಘಟನೆಗೆ ಬೆಚ್ಚಿಬಿದ್ದ ಮನೆ ಮಂದಿ

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಒಂದಷ್ಟು ವಿಚಿತ್ರ ಘಟನೆಗಳು ನಡೆದಿವೆ. ಇದು ಮನೆ ಮಂದಿಯ ಆತಂಕಕ್ಕೆ ಕಾರಣ ಆಗಿದೆ. ದೊಡ್ಮನೆಯಲ್ಲಿ ಇದ್ದಕ್ಕಿದ್ದಂತೆ ಕೆಲವು ಟೀ ಕಪ್​ಗಳು ಒಡೆದು ಹೋಗುತ್ತಿವೆ. ಮೇಲೆ ಇಟ್ಟಂಥ ಕಪ್​ಗಳು ಏಕಾಏಕಿ ನೆಲಕ್ಕೆ ಬೀಳುತ್ತಿವೆ.

‘ಬಿಗ್ ಬಾಸ್​ನಲ್ಲಿ ದೆವ್ವದ ಕಾಟ? ಆ ಒಂದು ಘಟನೆಗೆ ಬೆಚ್ಚಿಬಿದ್ದ ಮನೆ ಮಂದಿ
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Oct 10, 2024 | 7:27 AM

Share

ದೆವ್ವ ಇದೆ ಅಥವಾ ಇಲ್ಲ ಎನ್ನುವ ಬಗ್ಗೆ ಚರ್ಚೆಗಳು ಆಗುತ್ತಲೇ ಇರುತ್ತವೆ. ಕೆಲವರು ದೆವ್ವಗಳು ಇವೆ ಎಂದು ನಂಬಿದರೆ ಇನ್ನೂ ಕೆಲವರು ದೆವ್ವ ಇಲ್ಲ ಎಂದು ವಾದಿಸುತ್ತಾರೆ. ಈಗ ಬಿಗ್ ಬಾಸ್ ಮನೆಯಲ್ಲಿ ದೆವ್ವ ಇದೆಯೇ ಎನ್ನುವ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣ ಆಗುವಂಥ ಘಟನೆಗಳು ಕೂಡ ನಡೆಯುತ್ತಿವೆ. ಅಷ್ಟಕ್ಕೂ ಅಲ್ಲಿ ಆಗಿದ್ದು ಏನು? ಮನೆ ಮಂದಿಗೆ ಭಯ ಮೂಡಲು ಕಾರಣ ಏನು ಎಂಬ ಪ್ರಶ್ನೆ ಎದುರಾಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಒಂದಷ್ಟು ವಿಚಿತ್ರ ಘಟನೆಗಳು ನಡೆದಿವೆ. ಇದು ಮನೆ ಮಂದಿಯ ಆತಂಕಕ್ಕೆ ಕಾರಣ ಆಗಿದೆ. ದೊಡ್ಮನೆಯಲ್ಲಿ ಇದ್ದಕ್ಕಿದ್ದಂತೆ ಕೆಲವು ಟೀ ಕಪ್​ಗಳು ಒಡೆದು ಹೋಗುತ್ತಿವೆ. ಮೇಲೆ ಇಟ್ಟಂಥ ಕಪ್​ಗಳು ಏಕಾಏಕಿ ನೆಲಕ್ಕೆ ಬೀಳುತ್ತಿವೆ.

ಅಕ್ಟೋಬರ್ 9ರ ಎಪಿಸೋಡ್​ನಲ್ಲೂ ಇದೇ ರೀತಿ ಆಗಿದೆ. ಮೇಲೆ ಇಟ್ಟಂಥ ಕಪ್ ನೆಲಕ್ಕೆ ಬಿದ್ದು ಒಡೆದು ಹೋಗಿದೆ. ಇದರಿಂದ ಮನೆ ಮಂದಿ ಆತಂಕಗೊಂಡಿದ್ದಾರೆ. ‘ಮನೆಯಲ್ಲಿ ದೆವ್ವ ಇದೆಯೇನೋ ಅನಿಸುತ್ತಿದೆ’ ಎಂದು ಕೆಲವರು ಹೇಳಿದ್ದಾರೆ. ಇದನ್ನು ಕೇಳುತ್ತಿದ್ದಂತೆ ಹಂಸ ಅವರು ಆತಂಗೊಂಡರು. ‘ಹಾಗೆಲ್ಲ ಹೇಳಬೇಡಿ ಭಯ ಆಗುತ್ತದೆ’ ಎಂದರು.

ಇದನ್ನೂ ಓದಿ: ಜಗದೀಶ್ ಅಲ್ಲ, ಬಿಗ್ ಬಾಸ್​​ನಲ್ಲಿರೋ ಈ ಸ್ಪರ್ಧಿಯ ವಿರುದ್ಧ ವೀಕ್ಷಕರಿಗೆ ಎದ್ದಿದೆ ಅಸಮಾಧಾನ 

ಇದಾದ ಬಳಿಕ ಅಲ್ಲಿದ್ದವರು, ‘ವಾತಾವರಣದಲ್ಲಿ ಪ್ಲಸ್ ಹಾಗೂ ಮೈನಸ್ ಎರಡೂ ಇರುತ್ತದೆ’ ಎಂದರು. ಇದರಿಂದ ಹಂಸಾಗೆ ಮತ್ತಷ್ಟು ಭಯ ಆಯಿತು. ಇದನ್ನು ಕೇಳಿ ಮನೆಯಲ್ಲಿ ಆತಂಕದ ವಾತಾವರಣ ಮೂಡಿತು. ಅಲ್ಲಿಯೇ ಇದ್ದ ಮಂಜು ಅವರು ಆ ರೀತಿ ಏನೂ ಇಲ್ಲ ಎಂದು ಸಮಾಧಾನ ಮಾಡಿದರು. ಕಪ್ ಒಡೆಯಲು ಕಾರಣ ಏನು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಕಟ್ಟೆಯ ಅಂಚಲ್ಲಿ ಇಟ್ಟ ಕಾರಣಕ್ಕೂ ಕಪ್ ಒಡೆದಿರಬಹುದು ಎಂದು ಕೆಲವರು ಊಹಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ