AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್​ನಲ್ಲಿ ದೆವ್ವದ ಕಾಟ? ಆ ಒಂದು ಘಟನೆಗೆ ಬೆಚ್ಚಿಬಿದ್ದ ಮನೆ ಮಂದಿ

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಒಂದಷ್ಟು ವಿಚಿತ್ರ ಘಟನೆಗಳು ನಡೆದಿವೆ. ಇದು ಮನೆ ಮಂದಿಯ ಆತಂಕಕ್ಕೆ ಕಾರಣ ಆಗಿದೆ. ದೊಡ್ಮನೆಯಲ್ಲಿ ಇದ್ದಕ್ಕಿದ್ದಂತೆ ಕೆಲವು ಟೀ ಕಪ್​ಗಳು ಒಡೆದು ಹೋಗುತ್ತಿವೆ. ಮೇಲೆ ಇಟ್ಟಂಥ ಕಪ್​ಗಳು ಏಕಾಏಕಿ ನೆಲಕ್ಕೆ ಬೀಳುತ್ತಿವೆ.

‘ಬಿಗ್ ಬಾಸ್​ನಲ್ಲಿ ದೆವ್ವದ ಕಾಟ? ಆ ಒಂದು ಘಟನೆಗೆ ಬೆಚ್ಚಿಬಿದ್ದ ಮನೆ ಮಂದಿ
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Oct 10, 2024 | 7:27 AM

Share

ದೆವ್ವ ಇದೆ ಅಥವಾ ಇಲ್ಲ ಎನ್ನುವ ಬಗ್ಗೆ ಚರ್ಚೆಗಳು ಆಗುತ್ತಲೇ ಇರುತ್ತವೆ. ಕೆಲವರು ದೆವ್ವಗಳು ಇವೆ ಎಂದು ನಂಬಿದರೆ ಇನ್ನೂ ಕೆಲವರು ದೆವ್ವ ಇಲ್ಲ ಎಂದು ವಾದಿಸುತ್ತಾರೆ. ಈಗ ಬಿಗ್ ಬಾಸ್ ಮನೆಯಲ್ಲಿ ದೆವ್ವ ಇದೆಯೇ ಎನ್ನುವ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣ ಆಗುವಂಥ ಘಟನೆಗಳು ಕೂಡ ನಡೆಯುತ್ತಿವೆ. ಅಷ್ಟಕ್ಕೂ ಅಲ್ಲಿ ಆಗಿದ್ದು ಏನು? ಮನೆ ಮಂದಿಗೆ ಭಯ ಮೂಡಲು ಕಾರಣ ಏನು ಎಂಬ ಪ್ರಶ್ನೆ ಎದುರಾಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಒಂದಷ್ಟು ವಿಚಿತ್ರ ಘಟನೆಗಳು ನಡೆದಿವೆ. ಇದು ಮನೆ ಮಂದಿಯ ಆತಂಕಕ್ಕೆ ಕಾರಣ ಆಗಿದೆ. ದೊಡ್ಮನೆಯಲ್ಲಿ ಇದ್ದಕ್ಕಿದ್ದಂತೆ ಕೆಲವು ಟೀ ಕಪ್​ಗಳು ಒಡೆದು ಹೋಗುತ್ತಿವೆ. ಮೇಲೆ ಇಟ್ಟಂಥ ಕಪ್​ಗಳು ಏಕಾಏಕಿ ನೆಲಕ್ಕೆ ಬೀಳುತ್ತಿವೆ.

ಅಕ್ಟೋಬರ್ 9ರ ಎಪಿಸೋಡ್​ನಲ್ಲೂ ಇದೇ ರೀತಿ ಆಗಿದೆ. ಮೇಲೆ ಇಟ್ಟಂಥ ಕಪ್ ನೆಲಕ್ಕೆ ಬಿದ್ದು ಒಡೆದು ಹೋಗಿದೆ. ಇದರಿಂದ ಮನೆ ಮಂದಿ ಆತಂಕಗೊಂಡಿದ್ದಾರೆ. ‘ಮನೆಯಲ್ಲಿ ದೆವ್ವ ಇದೆಯೇನೋ ಅನಿಸುತ್ತಿದೆ’ ಎಂದು ಕೆಲವರು ಹೇಳಿದ್ದಾರೆ. ಇದನ್ನು ಕೇಳುತ್ತಿದ್ದಂತೆ ಹಂಸ ಅವರು ಆತಂಗೊಂಡರು. ‘ಹಾಗೆಲ್ಲ ಹೇಳಬೇಡಿ ಭಯ ಆಗುತ್ತದೆ’ ಎಂದರು.

ಇದನ್ನೂ ಓದಿ: ಜಗದೀಶ್ ಅಲ್ಲ, ಬಿಗ್ ಬಾಸ್​​ನಲ್ಲಿರೋ ಈ ಸ್ಪರ್ಧಿಯ ವಿರುದ್ಧ ವೀಕ್ಷಕರಿಗೆ ಎದ್ದಿದೆ ಅಸಮಾಧಾನ 

ಇದಾದ ಬಳಿಕ ಅಲ್ಲಿದ್ದವರು, ‘ವಾತಾವರಣದಲ್ಲಿ ಪ್ಲಸ್ ಹಾಗೂ ಮೈನಸ್ ಎರಡೂ ಇರುತ್ತದೆ’ ಎಂದರು. ಇದರಿಂದ ಹಂಸಾಗೆ ಮತ್ತಷ್ಟು ಭಯ ಆಯಿತು. ಇದನ್ನು ಕೇಳಿ ಮನೆಯಲ್ಲಿ ಆತಂಕದ ವಾತಾವರಣ ಮೂಡಿತು. ಅಲ್ಲಿಯೇ ಇದ್ದ ಮಂಜು ಅವರು ಆ ರೀತಿ ಏನೂ ಇಲ್ಲ ಎಂದು ಸಮಾಧಾನ ಮಾಡಿದರು. ಕಪ್ ಒಡೆಯಲು ಕಾರಣ ಏನು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಕಟ್ಟೆಯ ಅಂಚಲ್ಲಿ ಇಟ್ಟ ಕಾರಣಕ್ಕೂ ಕಪ್ ಒಡೆದಿರಬಹುದು ಎಂದು ಕೆಲವರು ಊಹಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್