AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ತಮಿಳು ವಿನ್ನರ್​ಗೆ ಸಿಕ್ಕ ಮೊತ್ತವೆಷ್ಟು? ರನ್ನರ್ ಅಪ್​ಗೆ ಸಿಕ್ಕಿದ್ದೆಷ್ಟು?

Bigg Boss Winner: ತಮಿಳು ಬಿಗ್​ಬಾಸ್ ಸೀಸನ್ 7 ನಿನ್ನೆ (ಜನವರಿ 14) ಮುಗಿದಿದೆ. ಅರ್ಚನಾ ರವಿಚಂದ್ರನ್ ಗೆದ್ದಿದ್ದಾರೆ. ಅಂದಹಾಗೆ ವಿಜೇತರಿಗೆ ಸಿಕ್ಕ ಬಹುಮಾನದ ಮೊತ್ತವೆಷ್ಟು? ರನ್ನರ್​ ಅಪ್​ಗೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ.

ಬಿಗ್​ಬಾಸ್ ತಮಿಳು ವಿನ್ನರ್​ಗೆ ಸಿಕ್ಕ ಮೊತ್ತವೆಷ್ಟು? ರನ್ನರ್ ಅಪ್​ಗೆ ಸಿಕ್ಕಿದ್ದೆಷ್ಟು?
ಮಂಜುನಾಥ ಸಿ.
|

Updated on: Jan 15, 2024 | 5:33 PM

Share

ಬಿಗ್​ಬಾಸ್ (BiggBoss) ಕನ್ನಡ ಸೀಸನ್ 10ರ ಫಿನಾಲೆಗೆ ಕೆಲವೇ ದಿನಗಳು ಬಾಕಿ ಇದೆ. ಇದರ ನಡುವೆ ನಿನ್ನೆಯಷ್ಟೆ ತಮಿಳು ಬಿಗ್​ಬಾಸ್ ಸೀಸನ್ 07ರ ಫಿನಾಲೆ ನೆರವೇರಿದೆ. ಮೊದಲ ಬಾರಿಗೆ ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಮನೆಗೆ ಹೋದ ವಿಜೆ ಅರ್ಚನಾ ಅಲಿಯಾಸ್ ಅರ್ಚನಾ ರವಿಚಂದ್ರನ್ ವಿಜೇತರಾಗಿದ್ದಾರೆ. ಮಣಿಚಂದ್ರನ್ ಮೊದಲ ರನ್ನರ್ ಅಪ್ ಆಗಿದ್ದಾರೆ. ಅಂದಹಾಗೆ ವಿಜೇತರಿಗೆ ಹಾಗೂ ರನ್ನರ್​ ಅಪ್​ಗೆ ಸಿಕ್ಕ ಬಹುಮಾನದ ಮೊತ್ತವೆಷ್ಟು? ಇಲ್ಲಿದೆ ಮಾಹಿತಿ.

ವೈಲ್ಡ್ ಕಾರ್ಡ್ ಎಂಟ್ರಿ ಪಡೆದು 28ನೇ ದಿನಕ್ಕೆ ಮನೆಗೆ ಕಾಲಿಟ್ಟ ಅರ್ಚನಾ ರವಿಚಂದ್ರನ್ 77 ದಿನಗಳ ಕಾಲ ಮನೆಯಲ್ಲಿದ್ದರು. ಅದ್ಭುತವಾಗಿ ಆಡಿ ವಿಜೇತರಾದರು. ವಿಜೇತರಾದ ಅರ್ಚನಾಗೆ ಬಿಗ್​ಬಾಸ್ ಟ್ರೋಫಿಯ ಜೊತೆಗೆ 50 ಲಕ್ಷ ರೂಪಾಯಿ ನಗದು ಬಹುಮಾನ, ಒಂದು ಮಾರುತಿ ಸ್ವಿಫ್ಟ್ ಗ್ರಾಂಡ್ ವಿಟಾರಾ ಕಾರು ನೀಡಲಾಗಿದೆ. ಮಾರುತಿ ಸ್ವಿಫ್ಟ್ ಗ್ರಾಂಡ್ ವಿಟಾರಾ ಕಾರಿನ ಬೇಸಿಕ್ ಬೆಲೆಯೇ 11 ಲಕ್ಷ ರೂಪಾಯಿಗಳಿವೆ. ಇದರ ಜೊತೆಗೆ 15 ಲಕ್ಷ ಮೌಲ್ಯದ ಸೈಟು ಒಂದನ್ನು ಸಹ ನೀಡಲಾಗಿದೆ ಎಂಬ ಸುದ್ದಿಯೂ ಇದೆ. ಈ ಬಗ್ಗೆ ಸ್ಪಷ್ಟತೆ ಇಲ್ಲ.

ಇದನ್ನೂ ಓದಿ:ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಬಿಗ್​ಬಾಸ್ ಗೆದ್ದ ಅರ್ಚನಾ ರವಿಚಂದ್ರನ್

ಇನ್ನು ರನ್ನರ್ ಅಪ್ ಆದ ಮಣಿಚಂದ್ರನ್​ಗೆ ಯಾವುದೇ ಟ್ರೋಫಿ, ನಗದು ಬಹುಮಾನ ಯಾವುದೂ ಸಹ ಲಭಿಸಿಲ್ಲ. ಹಾಗೆಂದು ಅವರು ಬರಿಗೈಲಿ ಹೋಗಿದ್ದೇನಿಲ್ಲ. ಬಿಗ್​ಬಾಸ್ ಮನೆಯಲ್ಲಿ ಅವರ ಸಂಭಾವನೆಯೇ ಹೆಚ್ಚು ಎನ್ನಲಾಗುತ್ತಿದೆ. ವಾರಕ್ಕೆ ಸುಮಾರು 2 ಲಕ್ಷ ರೂಪಾಯಿಗಳನ್ನು ಅವರು ಸಂಭಾವನೆಯಾಗಿ ಪಡೆಯುತ್ತಿದ್ದರು ಎಂಬ ಮಾಹಿತಿ ಇದೆ.

ಕನ್ನಡ ಬಿಗ್​ಬಾಸ್ ನಲ್ಲಿ ಈ ಬಾರಿ ವಿಜೇತರಿಗೆ 45 ಲಕ್ಷ ರೂಪಾಯಿ ಹಣ ನೀಡಲಾಗುತ್ತದೆ. ಜೊತೆಗೆ ಒಂದು ಮಾರುತಿ ಸುಜುಕಿ ಗ್ರಾಂಡ್ ವಿಟಾರ ಕಾರು ಲಭಿಸಲಿದೆ. ನಮ್ಮಲ್ಲಿಯೂ ಸಹ ರನ್ನರ್ ಅಪ್​ಗೆ ಯಾವುದೇ ಬಹುಮಾನ ನೀಡುವುದು ಅನುಮಾನ. ಕಳೆದ ಬಿಗ್​ಬಾಸ್​ನಲ್ಲಿ ರನ್ನರ್ ಅಪ್​ಗೆ ಐದು ಲಕ್ಷ ರೂಪಾಯಿ ನಗದು ಬಹುಮಾನವನ್ನು ಬ್ರ್ಯಾಂಡ್ ಒಂದರ ಮೂಲಕ ನೀಡಲಾಗಿತ್ತು. ಈ ಬಾರಿಯೂ ಹಾಗೆಯೇ ಆಗುವ ನಿರೀಕ್ಷೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ