AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ತಮಿಳು ವಿನ್ನರ್​ಗೆ ಸಿಕ್ಕ ಮೊತ್ತವೆಷ್ಟು? ರನ್ನರ್ ಅಪ್​ಗೆ ಸಿಕ್ಕಿದ್ದೆಷ್ಟು?

Bigg Boss Winner: ತಮಿಳು ಬಿಗ್​ಬಾಸ್ ಸೀಸನ್ 7 ನಿನ್ನೆ (ಜನವರಿ 14) ಮುಗಿದಿದೆ. ಅರ್ಚನಾ ರವಿಚಂದ್ರನ್ ಗೆದ್ದಿದ್ದಾರೆ. ಅಂದಹಾಗೆ ವಿಜೇತರಿಗೆ ಸಿಕ್ಕ ಬಹುಮಾನದ ಮೊತ್ತವೆಷ್ಟು? ರನ್ನರ್​ ಅಪ್​ಗೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ.

ಬಿಗ್​ಬಾಸ್ ತಮಿಳು ವಿನ್ನರ್​ಗೆ ಸಿಕ್ಕ ಮೊತ್ತವೆಷ್ಟು? ರನ್ನರ್ ಅಪ್​ಗೆ ಸಿಕ್ಕಿದ್ದೆಷ್ಟು?
ಮಂಜುನಾಥ ಸಿ.
|

Updated on: Jan 15, 2024 | 5:33 PM

Share

ಬಿಗ್​ಬಾಸ್ (BiggBoss) ಕನ್ನಡ ಸೀಸನ್ 10ರ ಫಿನಾಲೆಗೆ ಕೆಲವೇ ದಿನಗಳು ಬಾಕಿ ಇದೆ. ಇದರ ನಡುವೆ ನಿನ್ನೆಯಷ್ಟೆ ತಮಿಳು ಬಿಗ್​ಬಾಸ್ ಸೀಸನ್ 07ರ ಫಿನಾಲೆ ನೆರವೇರಿದೆ. ಮೊದಲ ಬಾರಿಗೆ ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಮನೆಗೆ ಹೋದ ವಿಜೆ ಅರ್ಚನಾ ಅಲಿಯಾಸ್ ಅರ್ಚನಾ ರವಿಚಂದ್ರನ್ ವಿಜೇತರಾಗಿದ್ದಾರೆ. ಮಣಿಚಂದ್ರನ್ ಮೊದಲ ರನ್ನರ್ ಅಪ್ ಆಗಿದ್ದಾರೆ. ಅಂದಹಾಗೆ ವಿಜೇತರಿಗೆ ಹಾಗೂ ರನ್ನರ್​ ಅಪ್​ಗೆ ಸಿಕ್ಕ ಬಹುಮಾನದ ಮೊತ್ತವೆಷ್ಟು? ಇಲ್ಲಿದೆ ಮಾಹಿತಿ.

ವೈಲ್ಡ್ ಕಾರ್ಡ್ ಎಂಟ್ರಿ ಪಡೆದು 28ನೇ ದಿನಕ್ಕೆ ಮನೆಗೆ ಕಾಲಿಟ್ಟ ಅರ್ಚನಾ ರವಿಚಂದ್ರನ್ 77 ದಿನಗಳ ಕಾಲ ಮನೆಯಲ್ಲಿದ್ದರು. ಅದ್ಭುತವಾಗಿ ಆಡಿ ವಿಜೇತರಾದರು. ವಿಜೇತರಾದ ಅರ್ಚನಾಗೆ ಬಿಗ್​ಬಾಸ್ ಟ್ರೋಫಿಯ ಜೊತೆಗೆ 50 ಲಕ್ಷ ರೂಪಾಯಿ ನಗದು ಬಹುಮಾನ, ಒಂದು ಮಾರುತಿ ಸ್ವಿಫ್ಟ್ ಗ್ರಾಂಡ್ ವಿಟಾರಾ ಕಾರು ನೀಡಲಾಗಿದೆ. ಮಾರುತಿ ಸ್ವಿಫ್ಟ್ ಗ್ರಾಂಡ್ ವಿಟಾರಾ ಕಾರಿನ ಬೇಸಿಕ್ ಬೆಲೆಯೇ 11 ಲಕ್ಷ ರೂಪಾಯಿಗಳಿವೆ. ಇದರ ಜೊತೆಗೆ 15 ಲಕ್ಷ ಮೌಲ್ಯದ ಸೈಟು ಒಂದನ್ನು ಸಹ ನೀಡಲಾಗಿದೆ ಎಂಬ ಸುದ್ದಿಯೂ ಇದೆ. ಈ ಬಗ್ಗೆ ಸ್ಪಷ್ಟತೆ ಇಲ್ಲ.

ಇದನ್ನೂ ಓದಿ:ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಬಿಗ್​ಬಾಸ್ ಗೆದ್ದ ಅರ್ಚನಾ ರವಿಚಂದ್ರನ್

ಇನ್ನು ರನ್ನರ್ ಅಪ್ ಆದ ಮಣಿಚಂದ್ರನ್​ಗೆ ಯಾವುದೇ ಟ್ರೋಫಿ, ನಗದು ಬಹುಮಾನ ಯಾವುದೂ ಸಹ ಲಭಿಸಿಲ್ಲ. ಹಾಗೆಂದು ಅವರು ಬರಿಗೈಲಿ ಹೋಗಿದ್ದೇನಿಲ್ಲ. ಬಿಗ್​ಬಾಸ್ ಮನೆಯಲ್ಲಿ ಅವರ ಸಂಭಾವನೆಯೇ ಹೆಚ್ಚು ಎನ್ನಲಾಗುತ್ತಿದೆ. ವಾರಕ್ಕೆ ಸುಮಾರು 2 ಲಕ್ಷ ರೂಪಾಯಿಗಳನ್ನು ಅವರು ಸಂಭಾವನೆಯಾಗಿ ಪಡೆಯುತ್ತಿದ್ದರು ಎಂಬ ಮಾಹಿತಿ ಇದೆ.

ಕನ್ನಡ ಬಿಗ್​ಬಾಸ್ ನಲ್ಲಿ ಈ ಬಾರಿ ವಿಜೇತರಿಗೆ 45 ಲಕ್ಷ ರೂಪಾಯಿ ಹಣ ನೀಡಲಾಗುತ್ತದೆ. ಜೊತೆಗೆ ಒಂದು ಮಾರುತಿ ಸುಜುಕಿ ಗ್ರಾಂಡ್ ವಿಟಾರ ಕಾರು ಲಭಿಸಲಿದೆ. ನಮ್ಮಲ್ಲಿಯೂ ಸಹ ರನ್ನರ್ ಅಪ್​ಗೆ ಯಾವುದೇ ಬಹುಮಾನ ನೀಡುವುದು ಅನುಮಾನ. ಕಳೆದ ಬಿಗ್​ಬಾಸ್​ನಲ್ಲಿ ರನ್ನರ್ ಅಪ್​ಗೆ ಐದು ಲಕ್ಷ ರೂಪಾಯಿ ನಗದು ಬಹುಮಾನವನ್ನು ಬ್ರ್ಯಾಂಡ್ ಒಂದರ ಮೂಲಕ ನೀಡಲಾಗಿತ್ತು. ಈ ಬಾರಿಯೂ ಹಾಗೆಯೇ ಆಗುವ ನಿರೀಕ್ಷೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!