AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ತಮಿಳು ವಿನ್ನರ್​ಗೆ ಸಿಕ್ಕ ಮೊತ್ತವೆಷ್ಟು? ರನ್ನರ್ ಅಪ್​ಗೆ ಸಿಕ್ಕಿದ್ದೆಷ್ಟು?

Bigg Boss Winner: ತಮಿಳು ಬಿಗ್​ಬಾಸ್ ಸೀಸನ್ 7 ನಿನ್ನೆ (ಜನವರಿ 14) ಮುಗಿದಿದೆ. ಅರ್ಚನಾ ರವಿಚಂದ್ರನ್ ಗೆದ್ದಿದ್ದಾರೆ. ಅಂದಹಾಗೆ ವಿಜೇತರಿಗೆ ಸಿಕ್ಕ ಬಹುಮಾನದ ಮೊತ್ತವೆಷ್ಟು? ರನ್ನರ್​ ಅಪ್​ಗೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ.

ಬಿಗ್​ಬಾಸ್ ತಮಿಳು ವಿನ್ನರ್​ಗೆ ಸಿಕ್ಕ ಮೊತ್ತವೆಷ್ಟು? ರನ್ನರ್ ಅಪ್​ಗೆ ಸಿಕ್ಕಿದ್ದೆಷ್ಟು?
ಮಂಜುನಾಥ ಸಿ.
|

Updated on: Jan 15, 2024 | 5:33 PM

Share

ಬಿಗ್​ಬಾಸ್ (BiggBoss) ಕನ್ನಡ ಸೀಸನ್ 10ರ ಫಿನಾಲೆಗೆ ಕೆಲವೇ ದಿನಗಳು ಬಾಕಿ ಇದೆ. ಇದರ ನಡುವೆ ನಿನ್ನೆಯಷ್ಟೆ ತಮಿಳು ಬಿಗ್​ಬಾಸ್ ಸೀಸನ್ 07ರ ಫಿನಾಲೆ ನೆರವೇರಿದೆ. ಮೊದಲ ಬಾರಿಗೆ ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಮನೆಗೆ ಹೋದ ವಿಜೆ ಅರ್ಚನಾ ಅಲಿಯಾಸ್ ಅರ್ಚನಾ ರವಿಚಂದ್ರನ್ ವಿಜೇತರಾಗಿದ್ದಾರೆ. ಮಣಿಚಂದ್ರನ್ ಮೊದಲ ರನ್ನರ್ ಅಪ್ ಆಗಿದ್ದಾರೆ. ಅಂದಹಾಗೆ ವಿಜೇತರಿಗೆ ಹಾಗೂ ರನ್ನರ್​ ಅಪ್​ಗೆ ಸಿಕ್ಕ ಬಹುಮಾನದ ಮೊತ್ತವೆಷ್ಟು? ಇಲ್ಲಿದೆ ಮಾಹಿತಿ.

ವೈಲ್ಡ್ ಕಾರ್ಡ್ ಎಂಟ್ರಿ ಪಡೆದು 28ನೇ ದಿನಕ್ಕೆ ಮನೆಗೆ ಕಾಲಿಟ್ಟ ಅರ್ಚನಾ ರವಿಚಂದ್ರನ್ 77 ದಿನಗಳ ಕಾಲ ಮನೆಯಲ್ಲಿದ್ದರು. ಅದ್ಭುತವಾಗಿ ಆಡಿ ವಿಜೇತರಾದರು. ವಿಜೇತರಾದ ಅರ್ಚನಾಗೆ ಬಿಗ್​ಬಾಸ್ ಟ್ರೋಫಿಯ ಜೊತೆಗೆ 50 ಲಕ್ಷ ರೂಪಾಯಿ ನಗದು ಬಹುಮಾನ, ಒಂದು ಮಾರುತಿ ಸ್ವಿಫ್ಟ್ ಗ್ರಾಂಡ್ ವಿಟಾರಾ ಕಾರು ನೀಡಲಾಗಿದೆ. ಮಾರುತಿ ಸ್ವಿಫ್ಟ್ ಗ್ರಾಂಡ್ ವಿಟಾರಾ ಕಾರಿನ ಬೇಸಿಕ್ ಬೆಲೆಯೇ 11 ಲಕ್ಷ ರೂಪಾಯಿಗಳಿವೆ. ಇದರ ಜೊತೆಗೆ 15 ಲಕ್ಷ ಮೌಲ್ಯದ ಸೈಟು ಒಂದನ್ನು ಸಹ ನೀಡಲಾಗಿದೆ ಎಂಬ ಸುದ್ದಿಯೂ ಇದೆ. ಈ ಬಗ್ಗೆ ಸ್ಪಷ್ಟತೆ ಇಲ್ಲ.

ಇದನ್ನೂ ಓದಿ:ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಬಿಗ್​ಬಾಸ್ ಗೆದ್ದ ಅರ್ಚನಾ ರವಿಚಂದ್ರನ್

ಇನ್ನು ರನ್ನರ್ ಅಪ್ ಆದ ಮಣಿಚಂದ್ರನ್​ಗೆ ಯಾವುದೇ ಟ್ರೋಫಿ, ನಗದು ಬಹುಮಾನ ಯಾವುದೂ ಸಹ ಲಭಿಸಿಲ್ಲ. ಹಾಗೆಂದು ಅವರು ಬರಿಗೈಲಿ ಹೋಗಿದ್ದೇನಿಲ್ಲ. ಬಿಗ್​ಬಾಸ್ ಮನೆಯಲ್ಲಿ ಅವರ ಸಂಭಾವನೆಯೇ ಹೆಚ್ಚು ಎನ್ನಲಾಗುತ್ತಿದೆ. ವಾರಕ್ಕೆ ಸುಮಾರು 2 ಲಕ್ಷ ರೂಪಾಯಿಗಳನ್ನು ಅವರು ಸಂಭಾವನೆಯಾಗಿ ಪಡೆಯುತ್ತಿದ್ದರು ಎಂಬ ಮಾಹಿತಿ ಇದೆ.

ಕನ್ನಡ ಬಿಗ್​ಬಾಸ್ ನಲ್ಲಿ ಈ ಬಾರಿ ವಿಜೇತರಿಗೆ 45 ಲಕ್ಷ ರೂಪಾಯಿ ಹಣ ನೀಡಲಾಗುತ್ತದೆ. ಜೊತೆಗೆ ಒಂದು ಮಾರುತಿ ಸುಜುಕಿ ಗ್ರಾಂಡ್ ವಿಟಾರ ಕಾರು ಲಭಿಸಲಿದೆ. ನಮ್ಮಲ್ಲಿಯೂ ಸಹ ರನ್ನರ್ ಅಪ್​ಗೆ ಯಾವುದೇ ಬಹುಮಾನ ನೀಡುವುದು ಅನುಮಾನ. ಕಳೆದ ಬಿಗ್​ಬಾಸ್​ನಲ್ಲಿ ರನ್ನರ್ ಅಪ್​ಗೆ ಐದು ಲಕ್ಷ ರೂಪಾಯಿ ನಗದು ಬಹುಮಾನವನ್ನು ಬ್ರ್ಯಾಂಡ್ ಒಂದರ ಮೂಲಕ ನೀಡಲಾಗಿತ್ತು. ಈ ಬಾರಿಯೂ ಹಾಗೆಯೇ ಆಗುವ ನಿರೀಕ್ಷೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್