AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ತಮಿಳು ವಿನ್ನರ್​ಗೆ ಸಿಕ್ಕ ಮೊತ್ತವೆಷ್ಟು? ರನ್ನರ್ ಅಪ್​ಗೆ ಸಿಕ್ಕಿದ್ದೆಷ್ಟು?

Bigg Boss Winner: ತಮಿಳು ಬಿಗ್​ಬಾಸ್ ಸೀಸನ್ 7 ನಿನ್ನೆ (ಜನವರಿ 14) ಮುಗಿದಿದೆ. ಅರ್ಚನಾ ರವಿಚಂದ್ರನ್ ಗೆದ್ದಿದ್ದಾರೆ. ಅಂದಹಾಗೆ ವಿಜೇತರಿಗೆ ಸಿಕ್ಕ ಬಹುಮಾನದ ಮೊತ್ತವೆಷ್ಟು? ರನ್ನರ್​ ಅಪ್​ಗೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ.

ಬಿಗ್​ಬಾಸ್ ತಮಿಳು ವಿನ್ನರ್​ಗೆ ಸಿಕ್ಕ ಮೊತ್ತವೆಷ್ಟು? ರನ್ನರ್ ಅಪ್​ಗೆ ಸಿಕ್ಕಿದ್ದೆಷ್ಟು?
ಮಂಜುನಾಥ ಸಿ.
|

Updated on: Jan 15, 2024 | 5:33 PM

Share

ಬಿಗ್​ಬಾಸ್ (BiggBoss) ಕನ್ನಡ ಸೀಸನ್ 10ರ ಫಿನಾಲೆಗೆ ಕೆಲವೇ ದಿನಗಳು ಬಾಕಿ ಇದೆ. ಇದರ ನಡುವೆ ನಿನ್ನೆಯಷ್ಟೆ ತಮಿಳು ಬಿಗ್​ಬಾಸ್ ಸೀಸನ್ 07ರ ಫಿನಾಲೆ ನೆರವೇರಿದೆ. ಮೊದಲ ಬಾರಿಗೆ ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಮನೆಗೆ ಹೋದ ವಿಜೆ ಅರ್ಚನಾ ಅಲಿಯಾಸ್ ಅರ್ಚನಾ ರವಿಚಂದ್ರನ್ ವಿಜೇತರಾಗಿದ್ದಾರೆ. ಮಣಿಚಂದ್ರನ್ ಮೊದಲ ರನ್ನರ್ ಅಪ್ ಆಗಿದ್ದಾರೆ. ಅಂದಹಾಗೆ ವಿಜೇತರಿಗೆ ಹಾಗೂ ರನ್ನರ್​ ಅಪ್​ಗೆ ಸಿಕ್ಕ ಬಹುಮಾನದ ಮೊತ್ತವೆಷ್ಟು? ಇಲ್ಲಿದೆ ಮಾಹಿತಿ.

ವೈಲ್ಡ್ ಕಾರ್ಡ್ ಎಂಟ್ರಿ ಪಡೆದು 28ನೇ ದಿನಕ್ಕೆ ಮನೆಗೆ ಕಾಲಿಟ್ಟ ಅರ್ಚನಾ ರವಿಚಂದ್ರನ್ 77 ದಿನಗಳ ಕಾಲ ಮನೆಯಲ್ಲಿದ್ದರು. ಅದ್ಭುತವಾಗಿ ಆಡಿ ವಿಜೇತರಾದರು. ವಿಜೇತರಾದ ಅರ್ಚನಾಗೆ ಬಿಗ್​ಬಾಸ್ ಟ್ರೋಫಿಯ ಜೊತೆಗೆ 50 ಲಕ್ಷ ರೂಪಾಯಿ ನಗದು ಬಹುಮಾನ, ಒಂದು ಮಾರುತಿ ಸ್ವಿಫ್ಟ್ ಗ್ರಾಂಡ್ ವಿಟಾರಾ ಕಾರು ನೀಡಲಾಗಿದೆ. ಮಾರುತಿ ಸ್ವಿಫ್ಟ್ ಗ್ರಾಂಡ್ ವಿಟಾರಾ ಕಾರಿನ ಬೇಸಿಕ್ ಬೆಲೆಯೇ 11 ಲಕ್ಷ ರೂಪಾಯಿಗಳಿವೆ. ಇದರ ಜೊತೆಗೆ 15 ಲಕ್ಷ ಮೌಲ್ಯದ ಸೈಟು ಒಂದನ್ನು ಸಹ ನೀಡಲಾಗಿದೆ ಎಂಬ ಸುದ್ದಿಯೂ ಇದೆ. ಈ ಬಗ್ಗೆ ಸ್ಪಷ್ಟತೆ ಇಲ್ಲ.

ಇದನ್ನೂ ಓದಿ:ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಬಿಗ್​ಬಾಸ್ ಗೆದ್ದ ಅರ್ಚನಾ ರವಿಚಂದ್ರನ್

ಇನ್ನು ರನ್ನರ್ ಅಪ್ ಆದ ಮಣಿಚಂದ್ರನ್​ಗೆ ಯಾವುದೇ ಟ್ರೋಫಿ, ನಗದು ಬಹುಮಾನ ಯಾವುದೂ ಸಹ ಲಭಿಸಿಲ್ಲ. ಹಾಗೆಂದು ಅವರು ಬರಿಗೈಲಿ ಹೋಗಿದ್ದೇನಿಲ್ಲ. ಬಿಗ್​ಬಾಸ್ ಮನೆಯಲ್ಲಿ ಅವರ ಸಂಭಾವನೆಯೇ ಹೆಚ್ಚು ಎನ್ನಲಾಗುತ್ತಿದೆ. ವಾರಕ್ಕೆ ಸುಮಾರು 2 ಲಕ್ಷ ರೂಪಾಯಿಗಳನ್ನು ಅವರು ಸಂಭಾವನೆಯಾಗಿ ಪಡೆಯುತ್ತಿದ್ದರು ಎಂಬ ಮಾಹಿತಿ ಇದೆ.

ಕನ್ನಡ ಬಿಗ್​ಬಾಸ್ ನಲ್ಲಿ ಈ ಬಾರಿ ವಿಜೇತರಿಗೆ 45 ಲಕ್ಷ ರೂಪಾಯಿ ಹಣ ನೀಡಲಾಗುತ್ತದೆ. ಜೊತೆಗೆ ಒಂದು ಮಾರುತಿ ಸುಜುಕಿ ಗ್ರಾಂಡ್ ವಿಟಾರ ಕಾರು ಲಭಿಸಲಿದೆ. ನಮ್ಮಲ್ಲಿಯೂ ಸಹ ರನ್ನರ್ ಅಪ್​ಗೆ ಯಾವುದೇ ಬಹುಮಾನ ನೀಡುವುದು ಅನುಮಾನ. ಕಳೆದ ಬಿಗ್​ಬಾಸ್​ನಲ್ಲಿ ರನ್ನರ್ ಅಪ್​ಗೆ ಐದು ಲಕ್ಷ ರೂಪಾಯಿ ನಗದು ಬಹುಮಾನವನ್ನು ಬ್ರ್ಯಾಂಡ್ ಒಂದರ ಮೂಲಕ ನೀಡಲಾಗಿತ್ತು. ಈ ಬಾರಿಯೂ ಹಾಗೆಯೇ ಆಗುವ ನಿರೀಕ್ಷೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ