AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಬಿಗ್​ಬಾಸ್ ಗೆದ್ದ ಪ್ರಶಾಂತ್​ಗೆ ಸಿಕ್ಕ ಮೊತ್ತವೆಷ್ಟು? ರನ್ನರ್ ಅಪ್​ಗೆ ಸಿಕ್ಕಿದ್ದೆಷ್ಟು?

Bigg Boss: ತೆಲುಗು ಬಿಗ್​ಬಾಸ್ ಸೀಸನ್ 7 ಇತ್ತೀಚೆಗಷ್ಟೆ ಮುಗಿದಿದೆ, ರೈತ ಯುವಕ ಪಲ್ಲವಿ ಪ್ರಶಾಂತ್ ಗೆದ್ದಿದ್ದಾರೆ. ಅಂದಹಾಗೆ ಅವರಿಗೆ ಸಿಕ್ಕ ಬಹುಮಾನದ ಮೊತ್ತವೆಷ್ಟು?

ತೆಲುಗು ಬಿಗ್​ಬಾಸ್ ಗೆದ್ದ ಪ್ರಶಾಂತ್​ಗೆ ಸಿಕ್ಕ ಮೊತ್ತವೆಷ್ಟು? ರನ್ನರ್ ಅಪ್​ಗೆ ಸಿಕ್ಕಿದ್ದೆಷ್ಟು?
ಮಂಜುನಾಥ ಸಿ.
|

Updated on: Dec 19, 2023 | 5:44 PM

Share

ಬಿಗ್​ಬಾಸ್ (BiggBoss) ಕನ್ನಡ ಸೀಸನ್ 10 ಚಾಲ್ತಿಯಲ್ಲಿದೆ. ಫಿನಾಲೆಗೆ ಇನ್ನು ಸುಮಾರು 30 ದಿನಗಳು ಬಾಕಿ ಇದೆ. ತೆಲುಗು ಬಿಗ್​ಬಾಸ್ ಕಳೆದ ಶನಿವಾರವಷ್ಟೆ ಮುಗಿದಿದ್ದು, ಯುವ ರೈತ ಪಲ್ಲವಿ ಪ್ರಶಾಂತ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸೀಸನ್ ಪ್ರಾರಂಭವಾದಾಗಿನಿಂದಲೂ ಜನರನ್ನು ರಂಜಿಸುತ್ತಾ, ಟಾಸ್ಕ್​ಗಳಲ್ಲಿ ಜೀವವನ್ನೇ ಒತ್ತೆ ಇಟ್ಟು ಆಡುತ್ತಿದ್ದ ಪಲ್ಲವಿ ಪ್ರಶಾಂತ್​ ವೀಕ್ಷಕರ ಮನ ಗೆದ್ದಿದ್ದರು, ಕೋಟ್ಯಂತರ ಮಂದಿ ರೈತರು, ರೈತರ ಮಕ್ಕಳು ಪಲ್ಲವಿ ಪ್ರಶಾಂತ್ ಅನ್ನು ತಮ್ಮ ಪ್ರತಿನಿಧಿ ಎಂದೇ ನಂಬಿದ್ದರು, ಕೊನೆಗೆ ಪಲ್ಲವಿ ಪ್ರಶಾಂತ್ ಗೆದ್ದಿದ್ದಾರೆ.

ಫಿನಾಲೆ ದಿನ ಬರೋಬ್ಬರಿ ಆರು ಮಂದಿ ಉಳಿದುಕೊಂಡಿದ್ದರು. ಅವರಲ್ಲಿ ಇಬ್ಬರು ಮೊದಲಿಗೆ ಎಲಿಮಿನೇಟ್ ಆದರು. ಬಳಿಕ ನಾಲ್ಕು ಮಂದಿ ಉಳಿದಿದ್ದರು. ಅವರಲ್ಲಿ ಒಬ್ಬರು ಗೋಲ್ಡನ್ ಸೂಟ್​ಕೇಸ್​ ತೆಗೆದುಕೊಂಡು ಶೋನಿಂದ ಹೊರಗೆ ಬಂದರು. ಉಳಿದ ಮೂವರಲ್ಲಿ, ಶಿವಾಜಿ ಸಹ ಎಲಿಮಿನೇಟ್ ಆದರು. ಕೊನೆಗೆ ಅಮರ್​ದೀಪ್ ಹಾಗೂ ಪ್ರಶಾಂತ್ ಉಳಿದಿದ್ದು, ಪಲ್ಲವಿ ಪ್ರಶಾಂತ್ ವಿಜೇತ ಎನಿಸಿಕೊಂಡರು.

ಇದನ್ನೂ ಓದಿ:ತೆಲುಗು ಬಿಗ್​ಬಾಸ್ ವಿನ್ನರ್-ರನ್ನರ್ ಅಪ್ ಅಭಿಮಾನಿಗಳ ನಡುವೆ ಗಲಾಟೆ, ಕಾರು, ಬಸ್ಸುಗಳು ಜಖಂ

ಫಿನಾಲೆ ಗೆದ್ದ ಪಲ್ಲವಿ ಪ್ರಶಾಂತ್​ಗೆ ಬರೋಬ್ಬರಿ 35 ಲಕ್ಷ ರೂಪಾಯಿ ನಗದು ಬಹುಮಾನ ಮತ್ತು ಟ್ರೋಫಿ ನೀಡಲಾಯ್ತು. ಅಸಲಿಗೆ ಪ್ರೈಜ್ ಮನಿ 50 ಲಕ್ಷ ರೂಪಾಯಿಗಳಾಗಿತ್ತು. ಆದರೆ ಗೋಲ್ಡನ್ ಸೂಟ್​ಕೇಸ್​ನಲ್ಲಿ ಯಾವರ್​ಗೆ 15 ಲಕ್ಷ ಹಣ ನೀಡಲಾಯ್ತು. ಹಾಗಾಗಿ 50 ಲಕ್ಷ ರೂಪಾಯಿ ಹಣದ ಬದಲಿಗೆ ಪಲ್ಲವಿ ಪ್ರಶಾಂತ್​ಗೆ 35 ಲಕ್ಷ ರೂಪಾಯಿ ನೀಡಲಾಯ್ತು.

ರನ್ನರ್ ಅಪ್ ಅಮರ್​ದೀಪ್​ಗೆ ಯಾವುದೇ ಬಹುಮಾನದ ಹಣ ನೀಡಲಾಗಲಿಲ್ಲ ಆದರೆ ಆತನಿಗೆ ಅವರ ಅತ್ಯಂತ ಅಚ್ಚುಮೆಚ್ಚಿನ ನಟ ರವಿತೇಜ ಅವರ ಮುಂದಿನ ಸಿನಿಮಾದಲ್ಲಿ ನಟಿಸುವ ಅವಕಾಶ ದೊರಕಿತು. ಸ್ವತಃ ರವಿತೇಜ ವೇದಿಕೆ ಮೇಲೆ ಬಂದು ತಮ್ಮ ಮುಂದಿನ ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ಹೇಳಿದರು. ಎರಡನೇ ರನ್ನರ್ ಅಪ್ ಆದ ಶಿವಾಜಿ ಅವರಿಗೆ ಯಾವುದೇ ಬಹುಮಾನದ ಹಣ ಸಿಗಲಿಲ್ಲವಾದರೂ, ಇಡೀ ಬಿಗ್​ಬಾಸ್​ನಲ್ಲಿ ಅತಿ ಹಚ್ಚು ಸಂಭಾವನೆ ಶಿವಾಜಿ ಅವರಿಗೆ ದೊರಕಿತು ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​