AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವನು ನನ್ನ ಬಾಯ್​ಫ್ರೆಂಡ್​ ಅಲ್ಲ, ಇನ್ನು ಮಾತನಾಡಲ್ಲ’; ಶಪಥ ಮಾಡಿದ ಸಂಗೀತಾ  

ಊಟದ ವಿಚಾರದಲ್ಲಿ ಕಿರಿಕ್ ಆಗಿತ್ತು. ಕಾರ್ತಿಕ್ ಅವರು ಜೋರು ಧ್ವನಿಯಲ್ಲಿ ಮಾತನಾಡಿದ್ದು ಸಂಗೀತಾಗೆ ಬೇಸರ ಮೂಡಿಸಿದೆ. ಕಾರ್ತಿಕ್ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎನ್ನುವ ಭಾವನೆ ಅವರನ್ನು ಕಾಡುತ್ತಿದೆ. ಹೀಗಾಗಿ, ಪದೇ ಪದೇ ಮನೆ ಬಿಟ್ಟು ಹೋಗುವ ಬಗ್ಗೆ ಮಾತನಾಡುತ್ತಿದ್ದಾರೆ.

‘ಅವನು ನನ್ನ ಬಾಯ್​ಫ್ರೆಂಡ್​ ಅಲ್ಲ, ಇನ್ನು ಮಾತನಾಡಲ್ಲ’; ಶಪಥ ಮಾಡಿದ ಸಂಗೀತಾ  
ಸಂಗೀತಾ-ಕಾರ್ತಿಕ್
ರಾಜೇಶ್ ದುಗ್ಗುಮನೆ
|

Updated on:Nov 23, 2023 | 6:31 AM

Share

ಸಂಗೀತಾ ಶೃಂಗೇರಿ ಹಾಗೂ ಕಾರ್ತಿಕ್ ಮಹೇಶ್ (Karthik Mahesh) ಮಧ್ಯೆ ಕಿತ್ತಾಟ ನಡೆಯುತ್ತಲೇ ಇದೆ. ಕಳೆದ ವಾರ ನಡೆದ ಟಾಸ್ಕ್​​ನಲ್ಲಿ ಸಂಗೀತಾ ಅವರು ಕಾರ್ತಿಕ್ ವಿರುದ್ಧ ಸಿಟ್ಟಾಗಿದ್ದರು. ಈ ವಾರ ಬೇರೆಯದೇ ಕಥೆ ಆಗಿದೆ. ತಲೆ ಬೋಳಿಸಿಕೊಳ್ಳುವ ಚಾಲೆಂಜ್​ನ ಕಾರ್ತಿಕ್​ಗೆ ನೀಡಲಾಯಿತು. ಇದನ್ನು ಅವರು ಸ್ವೀಕರಿಸಿದ್ದಾರೆ. ಅವರು ತಲೆ ಬೋಳಿಸಿಕೊಂಡಿದ್ದಾರೆ. ಇದು ಸಂಗೀತಾಗೆ ತುಂಬಾನೇ ಹರ್ಟ್ ಮಾಡಿದಂತಿದೆ. ಈ ಕಾರಣಕ್ಕೆ ಸಂಗೀತಾ ಮನೆ ಬಿಟ್ಟು ಹೋಗುವ ನಿರ್ಧಾರಕ್ಕೆ ಬಂದಿದ್ದಾರೆ. ಕಾರ್ತಿಕ್ ಸೇಡುತೀರಿಸಿಕೊಳ್ಳಬಹುದು ಎನ್ನುವ ಭಯ ಅವರನ್ನು ಕಾಡಿದಂತಿದೆ.

ಊಟದ ವಿಚಾರದಲ್ಲಿ ಕಿರಿಕ್ ಆಗಿತ್ತು. ಕಾರ್ತಿಕ್ ಅವರು ಜೋರು ಧ್ವನಿಯಲ್ಲಿ ಮಾತನಾಡಿದ್ದು ಸಂಗೀತಾಗೆ ಬೇಸರ ಮೂಡಿಸಿದೆ. ಕಾರ್ತಿಕ್ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎನ್ನುವ ಭಾವನೆ ಅವರನ್ನು ಕಾಡುತ್ತಿದೆ. ಹೀಗಾಗಿ, ಪದೇ ಪದೇ ಮನೆ ಬಿಟ್ಟು ಹೋಗುವ ಬಗ್ಗೆ ಮಾತನಾಡುತ್ತಿದ್ದಾರೆ. ಈ ವಿಚಾರದಲ್ಲಿ ಕಾರ್ತಿಕ್ ಅವರು ಸಂಗೀತಾನ ಸಮಾಧಾನ ಮಾಡಲು ಬಂದಿದ್ದಾರೆ. ಆದರೆ, ಸಂಗೀತಾ ಆಡಿದ ಮಾತು ಕಾರ್ತಿಕ್​ಗೆ ಬೇಸರ ತರಿಸಿದೆ.

‘ಅವನು ನನ್ನ ಬಾಯ್​ಫ್ರೆಂಡ್ ಅಲ್ಲ. ನನಗೆ ಸಖತ್ ಸ್ಟ್ರೆಸ್ ಆಗುತ್ತಿದೆ’ ಎಂದು ಸಂಗೀತಾ ಕೂಗಾಡಿದ್ದಾರೆ. ಆ ಬಳಿಕ ವಿನಯ್, ನಮ್ರತಾ ಸಮಾಧಾನ ಮಾಡಲು ಬಂದಿದ್ದಾರೆ. ಇದಕ್ಕೂ ಸಂಗೀತಾ ಜಗ್ಗಲಿಲ್ಲ. ಆ ಬಳಿಕ ಕಾರ್ತಿಕ್ ಎಂಟ್ರಿ ಕೊಟ್ಟಿದ್ದಾರೆ. ಕಾರ್ತಿಕ್ ಸಮಾಧಾನ ಮಾಡಲು ಪ್ರಯತ್ನಿಸಿದರೂ ಅದು ಸಾಧ್ಯವಾಗಿಲ್ಲ.

ಇದನ್ನೂ ಓದಿ: ಹೆಣ್ಮಕ್ಕಳ ಬಗ್ಗೆ ಡ್ರೋನ್​ ಪ್ರತಾಪ್​ ಹೇಳಿದ ಗಾದೆ ಮಾತು ಕೇಳಿ ಕಾರ್ತಿಕ್​ ಮಹೇಶ್​ ಕಕ್ಕಾಬಿಕ್ಕಿ

‘ದಯವಿಟ್ಟು ಇಲ್ಲಿಂದ ಹೋಗಿ. ನಾನು ಎಂದಿಗೂ ನಿಮ್ಮ ಜೊತೆ ಮಾತನಾಡುವುದಿಲ್ಲ. ಇಲ್ಲಷ್ಟೇ ಅಲ್ಲ, ಬಿಗ್ ಬಾಸ್​ನಿಂದ ಹೋದ ಬಳಿಕವೂ ನಿಮ್ಮ ಜೊತೆ ನಾನು ಮಾತುಕತೆ ಮುಂದುವರಿಸಲ್ಲ’ ಎಂದಿದ್ದಾರೆ ಅವರು. ಇದು ಕಾರ್ತಿಕ್​ಗೆ ಬೇಸರ ಮೂಡಿಸಿದೆ. ಹೀಗಾಗಿ, ಆ ಜಾಗದಿಂದ ಅವರು ಹೊರ ಬಂದಿದ್ದಾರೆ. ವಿನಯ್ ಗೌಡ ಅವರು ರಾತ್ರಿ ಒತ್ತಾಯ ಮಾಡಿಸಿ ಸಂಗೀತಾಗೆ ಊಟ ಬಡಿಸಿದ್ದಾರೆ. ಆಗಲೂ, ‘ನಾನು ಕಾರ್ತಿಕ್ ಮಾಡಿದ ಅಡುಗೆ ಊಟ ಮಾಡಲ್ಲ’ ಎಂದು ಹೇಳಿದ್ದಾರೆ ಸಂಗೀತಾ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವಿಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:36 pm, Wed, 22 November 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ