‘ಅವನು ನನ್ನ ಬಾಯ್​ಫ್ರೆಂಡ್​ ಅಲ್ಲ, ಇನ್ನು ಮಾತನಾಡಲ್ಲ’; ಶಪಥ ಮಾಡಿದ ಸಂಗೀತಾ  

ಊಟದ ವಿಚಾರದಲ್ಲಿ ಕಿರಿಕ್ ಆಗಿತ್ತು. ಕಾರ್ತಿಕ್ ಅವರು ಜೋರು ಧ್ವನಿಯಲ್ಲಿ ಮಾತನಾಡಿದ್ದು ಸಂಗೀತಾಗೆ ಬೇಸರ ಮೂಡಿಸಿದೆ. ಕಾರ್ತಿಕ್ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎನ್ನುವ ಭಾವನೆ ಅವರನ್ನು ಕಾಡುತ್ತಿದೆ. ಹೀಗಾಗಿ, ಪದೇ ಪದೇ ಮನೆ ಬಿಟ್ಟು ಹೋಗುವ ಬಗ್ಗೆ ಮಾತನಾಡುತ್ತಿದ್ದಾರೆ.

‘ಅವನು ನನ್ನ ಬಾಯ್​ಫ್ರೆಂಡ್​ ಅಲ್ಲ, ಇನ್ನು ಮಾತನಾಡಲ್ಲ’; ಶಪಥ ಮಾಡಿದ ಸಂಗೀತಾ  
ಸಂಗೀತಾ-ಕಾರ್ತಿಕ್
Follow us
|

Updated on:Nov 23, 2023 | 6:31 AM

ಸಂಗೀತಾ ಶೃಂಗೇರಿ ಹಾಗೂ ಕಾರ್ತಿಕ್ ಮಹೇಶ್ (Karthik Mahesh) ಮಧ್ಯೆ ಕಿತ್ತಾಟ ನಡೆಯುತ್ತಲೇ ಇದೆ. ಕಳೆದ ವಾರ ನಡೆದ ಟಾಸ್ಕ್​​ನಲ್ಲಿ ಸಂಗೀತಾ ಅವರು ಕಾರ್ತಿಕ್ ವಿರುದ್ಧ ಸಿಟ್ಟಾಗಿದ್ದರು. ಈ ವಾರ ಬೇರೆಯದೇ ಕಥೆ ಆಗಿದೆ. ತಲೆ ಬೋಳಿಸಿಕೊಳ್ಳುವ ಚಾಲೆಂಜ್​ನ ಕಾರ್ತಿಕ್​ಗೆ ನೀಡಲಾಯಿತು. ಇದನ್ನು ಅವರು ಸ್ವೀಕರಿಸಿದ್ದಾರೆ. ಅವರು ತಲೆ ಬೋಳಿಸಿಕೊಂಡಿದ್ದಾರೆ. ಇದು ಸಂಗೀತಾಗೆ ತುಂಬಾನೇ ಹರ್ಟ್ ಮಾಡಿದಂತಿದೆ. ಈ ಕಾರಣಕ್ಕೆ ಸಂಗೀತಾ ಮನೆ ಬಿಟ್ಟು ಹೋಗುವ ನಿರ್ಧಾರಕ್ಕೆ ಬಂದಿದ್ದಾರೆ. ಕಾರ್ತಿಕ್ ಸೇಡುತೀರಿಸಿಕೊಳ್ಳಬಹುದು ಎನ್ನುವ ಭಯ ಅವರನ್ನು ಕಾಡಿದಂತಿದೆ.

ಊಟದ ವಿಚಾರದಲ್ಲಿ ಕಿರಿಕ್ ಆಗಿತ್ತು. ಕಾರ್ತಿಕ್ ಅವರು ಜೋರು ಧ್ವನಿಯಲ್ಲಿ ಮಾತನಾಡಿದ್ದು ಸಂಗೀತಾಗೆ ಬೇಸರ ಮೂಡಿಸಿದೆ. ಕಾರ್ತಿಕ್ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎನ್ನುವ ಭಾವನೆ ಅವರನ್ನು ಕಾಡುತ್ತಿದೆ. ಹೀಗಾಗಿ, ಪದೇ ಪದೇ ಮನೆ ಬಿಟ್ಟು ಹೋಗುವ ಬಗ್ಗೆ ಮಾತನಾಡುತ್ತಿದ್ದಾರೆ. ಈ ವಿಚಾರದಲ್ಲಿ ಕಾರ್ತಿಕ್ ಅವರು ಸಂಗೀತಾನ ಸಮಾಧಾನ ಮಾಡಲು ಬಂದಿದ್ದಾರೆ. ಆದರೆ, ಸಂಗೀತಾ ಆಡಿದ ಮಾತು ಕಾರ್ತಿಕ್​ಗೆ ಬೇಸರ ತರಿಸಿದೆ.

‘ಅವನು ನನ್ನ ಬಾಯ್​ಫ್ರೆಂಡ್ ಅಲ್ಲ. ನನಗೆ ಸಖತ್ ಸ್ಟ್ರೆಸ್ ಆಗುತ್ತಿದೆ’ ಎಂದು ಸಂಗೀತಾ ಕೂಗಾಡಿದ್ದಾರೆ. ಆ ಬಳಿಕ ವಿನಯ್, ನಮ್ರತಾ ಸಮಾಧಾನ ಮಾಡಲು ಬಂದಿದ್ದಾರೆ. ಇದಕ್ಕೂ ಸಂಗೀತಾ ಜಗ್ಗಲಿಲ್ಲ. ಆ ಬಳಿಕ ಕಾರ್ತಿಕ್ ಎಂಟ್ರಿ ಕೊಟ್ಟಿದ್ದಾರೆ. ಕಾರ್ತಿಕ್ ಸಮಾಧಾನ ಮಾಡಲು ಪ್ರಯತ್ನಿಸಿದರೂ ಅದು ಸಾಧ್ಯವಾಗಿಲ್ಲ.

ಇದನ್ನೂ ಓದಿ: ಹೆಣ್ಮಕ್ಕಳ ಬಗ್ಗೆ ಡ್ರೋನ್​ ಪ್ರತಾಪ್​ ಹೇಳಿದ ಗಾದೆ ಮಾತು ಕೇಳಿ ಕಾರ್ತಿಕ್​ ಮಹೇಶ್​ ಕಕ್ಕಾಬಿಕ್ಕಿ

‘ದಯವಿಟ್ಟು ಇಲ್ಲಿಂದ ಹೋಗಿ. ನಾನು ಎಂದಿಗೂ ನಿಮ್ಮ ಜೊತೆ ಮಾತನಾಡುವುದಿಲ್ಲ. ಇಲ್ಲಷ್ಟೇ ಅಲ್ಲ, ಬಿಗ್ ಬಾಸ್​ನಿಂದ ಹೋದ ಬಳಿಕವೂ ನಿಮ್ಮ ಜೊತೆ ನಾನು ಮಾತುಕತೆ ಮುಂದುವರಿಸಲ್ಲ’ ಎಂದಿದ್ದಾರೆ ಅವರು. ಇದು ಕಾರ್ತಿಕ್​ಗೆ ಬೇಸರ ಮೂಡಿಸಿದೆ. ಹೀಗಾಗಿ, ಆ ಜಾಗದಿಂದ ಅವರು ಹೊರ ಬಂದಿದ್ದಾರೆ. ವಿನಯ್ ಗೌಡ ಅವರು ರಾತ್ರಿ ಒತ್ತಾಯ ಮಾಡಿಸಿ ಸಂಗೀತಾಗೆ ಊಟ ಬಡಿಸಿದ್ದಾರೆ. ಆಗಲೂ, ‘ನಾನು ಕಾರ್ತಿಕ್ ಮಾಡಿದ ಅಡುಗೆ ಊಟ ಮಾಡಲ್ಲ’ ಎಂದು ಹೇಳಿದ್ದಾರೆ ಸಂಗೀತಾ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವಿಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:36 pm, Wed, 22 November 23

ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ