AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ತೊರೆಯುವ ನಿರ್ಧಾರ ತೆಗೆದುಕೊಂಡ ಲಾಯರ್ ಜಗದೀಶ್

ಈ ಬಾರಿ ಸ್ವರ್ಗ ಹಾಗೂ ನರಕ ಎನ್ನುವ ವಿಭಾಗ ಮಾಡಲಾಗಿದೆ. ಏಳು ಜನರು ನರಕದಲ್ಲಿ ಇದ್ದರೆ, 10 ಜನರು ಸ್ವರ್ಗದಲ್ಲಿ ಇದ್ದಾರೆ. ಸ್ವರ್ಗವನ್ನು ಸ್ವಚ್ಛ ಮಾಡುವ ಕೆಲಸ ನರಕವಾಸಿಗಳು ಮಾಡಬೇಕು. ಇದನ್ನು ಜಗದೀಶ್ ಖಂಡಿಸಿದ್ದಾರೆ. ಟಾಸ್ಕ್ ಮುಗಿದ ಬಳಿಕ ಈ ರೀತಿ ಕೆಲಸ ಮಾಡಿಸೋದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದ್ದಾರೆ.

ಬಿಗ್ ಬಾಸ್ ತೊರೆಯುವ ನಿರ್ಧಾರ ತೆಗೆದುಕೊಂಡ ಲಾಯರ್ ಜಗದೀಶ್
ಜಗದೀಶ್
ರಾಜೇಶ್ ದುಗ್ಗುಮನೆ
|

Updated on: Oct 03, 2024 | 7:18 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ 17 ಸ್ಪರ್ಧಿಗಳಿದ್ದಾರೆ. ಈ ಪೈಕಿ ಈ ವಾರ ಒಬ್ಬರು ಎಲಿಮಿನೇಟ್ ಆಗಲಿದ್ದಾರೆ. ಇದಕ್ಕೂ ಮೊದಲೇ ಬಿಗ್ ಬಾಸ್​ನ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಜಗದೀಶ್ ಅವರಿಗೆ ಕಪ್ ಗೆಲ್ಲಬೇಕು ಎನ್ನುವ ಯಾವುದೇ ಉದ್ದೇಶ ಇಲ್ಲ. ಈ ಬಗ್ಗೆ ಅವರು ಓಪನ್ ಆಗಿ ಹೇಳಿಕೊಂಡಿದ್ದಾರೆ. ಮಾನವೀಯತೆ ಇಲ್ಲದ ಜಾಗದಲ್ಲಿ ತಾವು ನಿಲ್ಲೋದಿಲ್ಲ ಎಂದು ಅವರು ಹೇಳಿದ್ದಾರೆ.

ಈ ಬಾರಿ ಸ್ವರ್ಗ ಹಾಗೂ ನರಕ ಎನ್ನುವ ವಿಭಾಗ ಮಾಡಲಾಗಿದೆ. ಏಳು ಜನರು ನರಕದಲ್ಲಿ ಇದ್ದರೆ, 10 ಜನರು ಸ್ವರ್ಗದಲ್ಲಿ ಇದ್ದಾರೆ. ಸ್ವರ್ಗವನ್ನು ಸ್ವಚ್ಛ ಮಾಡುವ ಕೆಲಸ ನರಕವಾಸಿಗಳು ಮಾಡಬೇಕು. ಇದನ್ನು ಜಗದೀಶ್ ಖಂಡಿಸಿದ್ದಾರೆ. ಟಾಸ್ಕ್ ಮುಗಿದ ಬಳಿಕ ಈ ರೀತಿ ಕೆಲಸ ಮಾಡಿಸೋದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದ್ದಾರೆ.

‘ಮಾನವೀಯತೆ ಮುಖ್ಯ. ಮಾನವೀಯತೆ ಇಲ್ಲದೆ ಹೋದಲ್ಲಿ ನಾನು ಇಲ್ಲಿ ಇರೋದಿಲ್ಲ. ಐಸ್ ಟಾಸ್ಕ್ ಆಡಿ ಬಂದ ಬಳಿಕ ಅವರ ಬಳಿ ಕೆಲಸ ಮಾಡಿಸಬೇಕು ಎಂದರೆ ಎಷ್ಟು ಸರಿ? ಅವರಿಗೆ ಸರಿಯಾದ ಊಟ ಇಲ್ಲದೆ ಶಕ್ತಿ ಬೇರೆ ಇಲ್ಲ. ಹೀಗಾಗಿ ನಾನೇ ಪಾತ್ರೆ ತೊಳೆದೆ. ತಪ್ಪಾ? ನಾನು ಈಗಲೇ ಬಿಗ್ ಬಾಸ್​ನಿಂದ ಹೊರಕ್ಕೆ ಹೋಗೋಕೂ ರೆಡಿ’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಹೇಳೋದು ಆಚಾರ, ತಿನ್ನೋದು ಬದನೆಕಾಯಿ’; ಬಿಗ್ ಬಾಸ್ ಸ್ವರ್ಗವನ್ನು ನರಕ ಮಾಡಿದ ಜಗದೀಶ್

ಬಿಗ್ ಬಾಸ್​ನಲ್ಲಿ ಕಪ್ ಗೆಲ್ಲಬೇಕು ಎನ್ನುವ ಯಾವುದೇ ಉದ್ದೇಶ ಜಗದೀಶ್ ಅವರಿಗೆ ಇಲ್ಲವಂತೆ. ಇದನ್ನು ಅವರು ಒತ್ತಿ ಒತ್ತಿ ಹೇಳಿದ್ದಾರೆ. ಈ ಕಾರಣದಿಂದಲೇ ಯಾವಾಗ ಬೇಕಿದ್ದರೂ ಬಿಗ್ ಬಾಸ್ ತೊರೆಯೋದಾಗಿ ಅವರು ಹೇಳಿಕೊಂಡಿದ್ದಾರೆ. ಈ ವಾರದ ನಾಮಿನೇಷನ್​ನಲ್ಲಿ ಅವರು ಕೂಡ ಇದ್ದಾರೆ. ಅವರು ಉದ್ದೇಶ ಪೂರ್ವಕವಾಗಿ ಎಲ್ಲರನ್ನೂ ಇರಿಟೇಟ್ ಮಾಡುವ ಕೆಲಸ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು