AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಜಿದ್ ಖಾನ್​ ಗುಪ್ತಾಂಗಕ್ಕೆ ರೇಟಿಂಗ್ ನೀಡಲು ನಾನು ಬಿಗ್ ಬಾಸ್ ಮನೆಗೆ ಹೋಗಬೇಕು ಎಂದ ನಟಿ

ಸಾಜಿದ್ ಖಾನ್ ಅವರು ಅನುಚಿತ ವರ್ತನೆ ಮಾಡಿದ್ದಾರೆ ಎಂದು ಅನೇಕ ಹೀರೋಯಿನ್​ಗಳು ಹೇಳಿದ್ದಿದೆ. ಆದರೆ, ಅವರು ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ತಮ್ಮ ವಿರುದ್ಧ ಕೇಳಿ ಬಂದ ಆರೋಪಗಳು ಸುಳ್ಳು ಎಂದೇ ವಾದಿಸುತ್ತಾ ಬಂದಿದ್ದಾರೆ.

ಸಾಜಿದ್ ಖಾನ್​ ಗುಪ್ತಾಂಗಕ್ಕೆ ರೇಟಿಂಗ್ ನೀಡಲು ನಾನು ಬಿಗ್ ಬಾಸ್ ಮನೆಗೆ ಹೋಗಬೇಕು ಎಂದ ನಟಿ
ಶೆರ್ಲಿನ್-ಸಾಜಿದ್
TV9 Web
| Edited By: |

Updated on:Oct 11, 2022 | 7:56 PM

Share

ನಿರ್ದೇಶಕ ಸಾಜಿದ್ ಖಾನ್ (Sajid Khan) ಅವರು ಸಾಕಷ್ಟು ವಿವಾದಗಳಿಂದ ಗುರುತಿಸಿಕೊಂಡಿದ್ದಾರೆ. ಅವರ ವಿರುದ್ಧ  ಸಾಕಷ್ಟು ಮೀಟೂ ಆರೋಪಗಳು ಕೇಳಿ ಬಂದಿವೆ. ಅನೇಕ ಹೀರೋಯಿನ್​ಗಳು ನಿರ್ದೇಶಕನ ವಿರುದ್ಧ ತಿರುಗಿಬಿದ್ದಿದ್ದಾರೆ. ಈಗ ಸಾಜಿದ್ ಖಾನ್ ಅವರು ‘ಬಿಗ್ ಬಾಸ್ (Bigg Boss) ಹಿಂದಿ ಸೀಸನ್ 16’ಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಬಗ್ಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಶೆರ್ಲಿನ್ ಚೋಪ್ರಾ ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅದೂ ಸಾಜಿದ್ ಖಾನ್ ಗುಪ್ತಾಂಗಕ್ಕೆ ರೇಟಿಂಗ್ ಕೊಡೋಕೆ.

ಸಾಜಿದ್ ಖಾನ್ ಅವರು ಅನುಚಿತ ವರ್ತನೆ ಮಾಡಿದ್ದಾರೆ ಎಂದು ಅನೇಕ ಹೀರೋಯಿನ್​ಗಳು ಹೇಳಿದ್ದಿದೆ. ಆದರೆ, ಅವರು ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ತಮ್ಮ ವಿರುದ್ಧ ಕೇಳಿ ಬಂದ ಆರೋಪಗಳು ಸುಳ್ಳು ಎಂದೇ ವಾದಿಸುತ್ತಾ ಬಂದಿದ್ದಾರೆ. ಈಗ ಅವರು ಬಿಗ್ ಬಾಸ್ ಮನೆ ಒಳಗೆ ಎಂಟ್ರಿ ಕೊಟ್ಟಿರೋದು ಅನೇಕರ ಅಸಮಾಧಾನಕ್ಕೆ ಕಾರಣ ಆಗಿದೆ. ಈ ಶೋ ನಡೆಸಿಕೊಡುವ ಸಲ್ಮಾನ್ ಖಾನ್ ವಿರುದ್ಧವೂ ಅನೇಕರು ಟೀಕೆ ಮಾಡಿದ್ದು ಇದೆ. ಈಗ ಸಲ್ಮಾನ್​ ಖಾನ್​ ಬಳಿ ಶೆರ್ಲಿನ್ ಮನವಿ ಮಾಡಿಕೊಂಡಿದ್ದಾರೆ. ‘ಸಲ್ಮಾನ್ ಖಾನ್ ಅವರು ಒಂದು ನಿಲುವು ತೆಗೆದುಕೊಳ್ಳಬೇಕು’ ಎಂದು ಕೋರಿದ್ದಾರೆ.

‘ಸಾಜಿದ್ ಖಾನ್ ನನಗೆ ಗುಪ್ತಾಂಗ ತೋರಿಸಿದ್ದರು. ಅದಕ್ಕೆ 0-10ರ ಅಂತರದಲ್ಲಿ ರೇಟಿಂಗ್ ನೀಡಲು ಹೇಳಿದ್ದರು. ನಾನು ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಬೇಕು ಹಾಗೂ ಅವರ ಗುಪ್ತಾಂಗಕ್ಕೆ ರೇಟಿಂಗ್ ನೀಡಬೇಕು. ಕಿರುಕುಳ ನೀಡುವವನ ಜತೆ ಸಂತ್ರಸ್ತೆಯು ಹೇಗೆ ವರ್ತಿಸುತ್ತಾಳೆ ಎಂಬುದನ್ನು ಭಾರತ ನೋಡಲಿ. ದಯವಿಟ್ಟು ಒಂದು ನಿಲುವು ತೆಗೆದುಕೊಳ್ಳಿ’ ಎಂದು ಶೆರ್ಲಿನ್ ಕೋರಿದ್ದಾರೆ.

ಇದನ್ನೂ ಓದಿ: Salman Khan: ಬಾಲಿವುಡ್​ ಚಿತ್ರಗಳ ಸೋಲಿನ ಬೆನ್ನಲ್ಲೇ ತಮ್ಮ ಮುಂದಿನ ಚಿತ್ರದ ಬಗ್ಗೆ ಮಹತ್ವದ ನಿರ್ಧಾರ ತಳೆದ್ರಾ ಸಲ್ಮಾನ್ ಖಾನ್?

ಸಾಜಿದ್ ಖಾನ್ ವಿರುದ್ಧ ಶೆರ್ಲಿನ್ ಮಾತ್ರವಲ್ಲ ಅನೇಕ ಮಾಡೆಲ್​ಗಳು ಹಾಗೂ ಹೀರೋಯಿನ್​ಗಳು ಧ್ವನಿ ಎತ್ತಿದ್ದಾರೆ. ಆದಾಗ್ಯೂ ವಾಹಿನಿ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಒಂದೊಮ್ಮೆ ವಿರೋಧ ಹೆಚ್ಚಿದರೆ ಬಿಗ್ ಬಾಸ್​ನಿಂದ ಅವರನ್ನು ಹೊರಗೆ ಕಳಿಸುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ.

Published On - 7:41 pm, Tue, 11 October 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್