AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಐ ಲವ್​ ಯೂ ಪನ್ನಿ ಕುಟ್ಟಿ’; ಪತ್ರದ ಮೂಲಕ ಭವ್ಯಾಗೆ ಭಾವನೆ ತಿಳಿಸಿದ ತ್ರಿವಿಕ್ರಂ

ಬಿಗ್ ಬಾಸ್ ಕನ್ನಡದಲ್ಲಿ ಭವ್ಯಾ ಗೌಡ ಮತ್ತು ತ್ರಿವಿಕ್ರಂ ಅವರ ನಡುವಿನ ಗೆಳೆತನ ಗಮನ ಸೆಳೆದಿದೆ. ತ್ರಿವಿಕ್ರಂ ಅವರು ಭವ್ಯಾಗೆ ಪತ್ರ ಬರೆದು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಮೊದಲು ಒರಟು ಎಂದುಕೊಂಡಿದ್ದ ತ್ರಿವಿಕ್ರಂ ಅವರೊಂದಿಗೆ ಭವ್ಯಾ ಅವರ ಬಾಂಡಿಂಗ್ ಬೆಳೆದಿದೆ ಎಂದು ಹೇಳಲಾಗಿದೆ. ಭವ್ಯಾ ಅವರ ತಾಯಿ ಕೂಡ ತ್ರಿವಿಕ್ರಂ ಅವರ ಬಗ್ಗೆ ಸಕಾರಾತ್ಮಕವಾಗಿ ಮಾತನಾಡಿದ್ದಾರೆ.

‘ಐ ಲವ್​ ಯೂ ಪನ್ನಿ ಕುಟ್ಟಿ’; ಪತ್ರದ ಮೂಲಕ ಭವ್ಯಾಗೆ ಭಾವನೆ ತಿಳಿಸಿದ ತ್ರಿವಿಕ್ರಂ
ಭವ್ಯಾ-ತ್ರಿವಿಕ್ರಂ
 ಶ್ರೀಲಕ್ಷ್ಮೀ ಎಚ್
| Edited By: |

Updated on:Jan 25, 2025 | 9:32 PM

Share

ಭವ್ಯಾ ಗೌಡ ಹಾಗೂ ತ್ರಿವಿಕ್ರಂ ಮಧ್ಯೆ ಎಷ್ಟು ಗೆಳೆತನ ಇದೆ, ಅದು ಯಾವ ರೀತಿಯಲ್ಲಿ ಇದೆ ಎಂಬುದನ್ನು ಮತ್ತೆ ವಿವರಿಸಿ ಹೇಳಬೇಕಿಲ್ಲ. ಈ ಮೊದಲು ಭವ್ಯಾಗೆ ತ್ರಿವಿಕ್ರಂ ಅವರು ಪ್ರಪೋಸ್ ಕೂಡ ಮಾಡಿದ್ದರು. ಹೊರ ಹೋದ ಬಳಿಕ ಆ ಬಗ್ಗೆ ಯೋಚಿಸೋಣ ಎಂದು ಭವ್ಯಾ ಗೌಡ ಅವರು ನೇರವಾಗಿ ಹೇಳಿಕೊಂಡಿದ್ದರು. ಈಗ ಭವ್ಯಾ ಗೌಡ ಅವರಿಗೆ ಪತ್ರ ಬರೆದು ತಮ್ಮ ಮನದಾಳದ ಮಾತನ್ನು ತ್ರಿವಿಕ್ರಂ ಅವರು ಹೇಳಿಕೊಂಡಿದ್ದಾರೆ. ಜನವರಿ 22ರ ಎಪಿಸೋಡ್ ಸಾಕಷ್ಟು ಗಮನ ಸೆಳೆದಿದೆ.

ಬಿಗ್ ಬಾಸ್​ನಲ್ಲಿ ಚಟುವಟಿಕೆ ಒಂದನ್ನು ನೀಡಲಾಗಿತ್ತು. ಈ ಚಟುವಟಿಕೆ ಪ್ರಕಾರ ಬಿಗ್ ಬಾಸ್​ನಲ್ಲಿ ಸ್ಪರ್ಧಿಗಳು ಎಲ್ಲಾ ಸ್ಪರ್ಧಿಗಳಿಗೆ ಪತ್ರ ಬರೆದು ಒಳ್ಳೆಯ ಮಾತುಗಳನ್ನು ಹೇಳಬೇಕು. ಇದಕ್ಕಾಗಿ ರೆಸಾರ್ಟ್ ಮಾದರಿಯ ಸೆಟ್ ಕೂಡ ಹಾಕಿದ್ದರು ಬಿಗ್ ಬಾಸ್. ಅಲ್ಲಿ ಊಟದ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಈ ವೇಳೆ ಭವ್ಯಾ ಅವರಿಗೆ ತ್ರಿವಿಕ್ರಂ ಪತ್ರ ಬರೆದಿದ್ದಾರೆ.

‘ಭಾವನೆಗಳ ಮಹಾಪೂರ ನೀನು, ಕನಸುಗಳ ಶಿಖರ ನೀನು.. ಸಾಧನೆಗಳ ಚೀಲವನ್ನು ನೀರು ಕುಡಿದಷ್ಟೇ ಸಲೀಸಾಗಿ ಹೊತ್ತು ಸಾಗುತ್ತಿರುವ ಸ್ಮಾಲ್ ಸಾಧಕಿ ನೀನು. ಕಷ್ಟ ಎಂಬ ಕೆಸರಿನಲ್ಲಿ ಅರಳಿದ ಕಮಲ ನೀನು. ತಂದೆ-ತಾಯಿಗೆ ಗಂಡು ಮಗ ನೀನು. ಗೆಳೆಯರಿಗೆ ರೌಡಿ ಬೇಬಿ ನೀನು. ಕನ್ನಡಿಗರ ಮನ ಗೆದ್ದ ಗೀತಾ ನೀನು. ಜಗತ್ತು ಬೇಕಾದ್ದು ಹೇಳಲಿ, ನನ್ನ-ನಿನ್ನ ಗೆಳೆತನ ಕಲುಷಿತವಾಗದಿರಲಿ. ಯಾರು ಏನಾದರೂ ಹೇಳಿಕೊಳ್ಳಲಿ, ಐ ಲವ್​ ಯೂ ಪನ್ನಿ ಕುಟ್ಟಿ’ ಎಂದು ತ್ರಿವಿಕ್ರಂ ಪತ್ರದಲ್ಲಿ ಹೇಳಿದ್ದಾರೆ.

ಈ ಪತ್ರ ನೋಡಿದ ಭವ್ಯಾ ಅವರು ಸಖತ್ ಖುಷಿಪಟ್ಟರು. ‘ಇಷ್ಟು ದಿನ ಎಲ್ಲಿದ್ರಿ’ ಎಂದು ನೇರವಾಗಿ ಕೇಳಿದರು. ಇದೆಲ್ಲ ವೋಟ್ ಪಡೆಯಲು ಮಾಡಿದ ತಂತ್ರ ಎಂದು ಹನುಮಂತಗೆ ಅನ್ನಿಸಿರಬಹುದು. ಇದಕ್ಕಾಗಿ ಅವರು, ‘ಏನ್ ಆಡ್ತಾರಿ ಆಟಾನ’ ಎಂದರು. ಈ ಮಾತನ್ನು ಕೇಳಿ ಎಲ್ಲರೂ ನಕ್ಕರು.

ಭವ್ಯಾ ಗೌಡಗೆ ಮೊದಲು ತ್ರಿವಿಕ್ರಂ ಅವರನ್ನು ನೋಡಿದಾಗ ಈ ವ್ಯಕ್ತಿ ಸಖತ್ ಒರಟ ಎಂದುಕೊಂಡಿದ್ದರಂತೆ. ಆದರೆ, ದಿನ ಕಳೆದಂತೆ ಅವರ ಜೊತೆಯೇ ಒಳ್ಳೆಯ ಬಾಂಡಿಂಗ್ ಬೆಳೆಯಿತು. ‘ನನ್ನ ಮಗಳಿಗೆ ಅಪ್ಪ ಆಗಿ, ಅಮ್ಮ ಆಗಿ ನೀನು ಉಳಿದಿದ್ದೀಯಾ’ ಎಂದು ಭವ್ಯಾ ಅವರ ಅಮ್ಮ ತ್ರಿವಿಕ್ರಂಗೆ ಹೇಳಿದ್ದರು.

ಇದನ್ನೂ ಓದಿ: ‘ನೀನು ಮಾಡೋ ಡವ್ ಸೂಪರ್’; ಭವ್ಯಾಗೆ ಓಪನ್ ಆಗಿ ಕಾಲೆಳೆದ ಹನುಮಂತ

ಭವ್ಯಾ ಹಾಗೂ ತ್ರಿವಿಕ್ರಂ ಮಧ್ಯೆ ಈಗ ಒಳ್ಳೆಯ ಬಾಂಡಿಂಗ್ ಬೆಳೆದಿದೆ. ಇದು ಬಿಗ್ ಬಾಸ್ ಪೂರ್ಣಗೊಂಡ ಬಳಿಕವೂ ಮುಂದುವರಿಯುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:48 am, Thu, 23 January 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​