AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಶಬ್ದ ಹೇಳಿದ್ರೆ ಚಪ್ಪಲಿಲಿ ಹೊಡೀರಿ’; ಶಿಶಿರ್​ಗೆ ಚೈತ್ರಾ ಚಾಲೆಂಜ್

ಚೈತ್ರಾ ಅವರು ಮಾತಿನ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಆದರೆ, ಕೆಲವೊಮ್ಮೆ ಅವರು ಆಡುವ ಮಾತುಗಳು ಮಿತಿ ಮೀರುತ್ತವೆ. ಇದರಿಂದ ಅನೇಕರಿಗೆ ಬೇಸರ ಆಗಿದ್ದು ಇದೆ. ಈ ವಿಚಾರದಲ್ಲಿ ಚೈತ್ರಾ ಹಲವು ಬಾರಿ ಎಡವಿದ್ದಾರೆ.

‘ಆ ಶಬ್ದ ಹೇಳಿದ್ರೆ ಚಪ್ಪಲಿಲಿ ಹೊಡೀರಿ’; ಶಿಶಿರ್​ಗೆ ಚೈತ್ರಾ ಚಾಲೆಂಜ್
ಶಿಶಿರ್-ಚೈತ್ರಾ
ರಾಜೇಶ್ ದುಗ್ಗುಮನೆ
|

Updated on:Dec 06, 2024 | 7:31 AM

Share

ಬಿಗ್ ಬಾಸ್​ನಲ್ಲಿ ಚೈತ್ರಾ ಹಾಗೂ ಶಿಶಿರ್ ಮಧ್ಯೆ ದೊಡ್ಡ ವಾಕ್ ಸಮರ ನಡೆದಿದೆ. ಅದಕ್ಕೆ ಕಾರಣ ಆಗಿರೋದು ಚೈತ್ರಾ ಬಳಕೆ ಮಾಡಿದ ಪದ. ಶಿಶಿರ್ ಜೊಲ್ಲ, ಹೆಣ್ಣುಮಕ್ಕಳ ಹಿಂದೆ ತಿರುಗುತ್ತಾ ಇರುತ್ತಾನೆ ಎಂಬ ಪದವನ್ನು ಚೈತ್ರಾ ಬಳಕೆ ಮಾಡಿದ್ದಾಗಿ ತ್ರಿವಿಕ್ರಂ ಹೇಳಿದ್ದಾರೆ. ಈ ವಿಚಾರಕ್ಕೆ ದೊಡ್ಡ ಮಟ್ಟದಲ್ಲಿ ಚರ್ಚೆಗಳು ಆಗಿವೆ. ಚೈತ್ರಾ, ತ್ರಿವಿಕ್ರಂ ಹಾಗೂ ಶಿಶಿರ್ ಮಧ್ಯೆ ಈ ವಿಚಾರಕ್ಕೆ ದೊಡ್ಡ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ.

ಚೈತ್ರಾ ಅವರು ಮಾತಿನ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಆದರೆ, ಕೆಲವೊಮ್ಮೆ ಅವರು ಆಡುವ ಮಾತುಗಳು ಮಿತಿ ಮೀರುತ್ತವೆ. ಇದರಿಂದ ಅನೇಕರಿಗೆ ಬೇಸರ ಆಗಿದ್ದು ಇದೆ. ಈ ವಿಚಾರದಲ್ಲಿ ಚೈತ್ರಾ ಹಲವು ಬಾರಿ ಎಡವಿದ್ದಾರೆ. ಈಗ ಚೈತ್ರಾ ಅವರು ತಾವು ಆ ಪದ ಬಳಕೆ ಮಾಡಿಲ್ಲ ಎಂದು ಹೇಳಿದರೆ, ತ್ರಿವಿಕ್ರಂ ಅವರು ಚೈತ್ರಾ ಆ ಪದ ಬಳಕೆ ಮಾಡಿದ್ದಾರೆ ಎಂದು ವಾದಿಸುತ್ತಿದ್ದಾರೆ.

ಚೈತ್ರಾ ಹಾಗೂ ತ್ರಿವಿಕ್ರಂ ಮಧ್ಯೆ ಜಗಳ ನಡೆಯುತ್ತಿತ್ತು. ಆ ಸಂದರ್ಭದಲ್ಲಿ ತ್ರಿವಿಕ್ರಂ ಅವರು ಬಾಯ್ತಪ್ಪಿ ಚೈತ್ರಾ ಅವರು ಶಿಶಿರ್ ವಿರುದ್ಧ ಈ ರೀತಿ ಹೇಳಿದ್ದರು ಎಂದು ಹೇಳಿಕೆ ಕೊಟ್ಟರು. ಅಲ್ಲಿಂದ ಚರ್ಚೆಗಳು ಆರಂಭ ಆದವು. ಶಿಶಿರ್ ಅವರಿಗೆ ಈ ವಿಚಾರ ಸಾಕಷ್ಟು ಬೇಸರ ಮೂಡಿಸಿತು. ‘ನಾನು ಆ ಪದ ಬಳಕೆ ಮಾಡಿಲ್ಲ’ ಎಂದು ಚೈತ್ರಾ ಹೇಳಿದರೆ, ತ್ರಿವಿಕ್ರಂ ಅವರು ‘ನೀವು ಈ ಪದ ಬಳಕೆ ಮಾಡಿದ್ದೀರಿ’ ಎಂದು ಒತ್ತಿ ಹೇಳಿದರು.

ಇದನ್ನೂ ಓದಿ: ‘ತಲೆ ಸುತ್ತಿ ಬಿದ್ದು ಆಗಾಗ ಹೊರಗೆ ಹೋಗ್ತೀರಿ’: ಚೈತ್ರಾಗೆ ತಿವಿದ ಭವ್ಯಾ

‘ನಾನು ಆ ಶಬ್ದ (ಜೊಲ್ಲು) ಬಳಕೆ ಮಾಡಿದ್ದರೆ ನನಗೆ ನೀವು ಕಾಲಿನಲ್ಲಿ ಹಾಕಿಕೊಂಡಿದ್ದರಿಂದ ಹೊಡೆಯಿರಿ’ ಎಂದು ಶಿಶಿರ್​ಗೆ ಚಾಲೆಂಜ್ ಮಾಡಿದರು ಚೈತ್ರಾ. ಆದರೆ, ಈ ಪದವನ್ನು ಅವರು ನಿಜಕ್ಕೂ ಹೇಳಿದ್ದಾರಾ ಅಥವಾ ಇಲ್ಲವಾ ಎಂಬ ಪ್ರಶ್ನೆಗೆ ಉತ್ತರ ಸಿಗೋದು ಕಷ್ಟ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:28 am, Fri, 6 December 24

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ