AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯ ಎಲ್ಲ ನಿಯಮ ಮುರಿಯುತ್ತೇನೆ: ಮತ್ತೆ ಚೈತ್ರಾ ಉದ್ಧಟತನ ಶುರು

ಬಿಗ್ ಬಾಸ್ ಮನೆಯಲ್ಲಿನ ಕೆಲವು ಪ್ರಮುಖ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಕ್ಕೆ ಚೈತ್ರಾ ಅವರಿಗೆ ಈ ಮೊದಲು ಸುದೀಪ್ ಕ್ಲಾಸ್ ತೆಗೆದುಕೊಂಡಿದ್ದರು. ಆದರೂ ಚೈತ್ರಾ ಅವರು ಬುದ್ಧಿ ಕಲಿತಂತೆ ಕಾಣುತ್ತಿಲ್ಲ. ಈಗ ಮತ್ತೆ ಅವರು ನಿಯಮಗಳನ್ನು ಮುರಿಯುತ್ತೇನೆ ಎಂದು ಹೇಳಿದ್ದಾರೆ. ವೀಕೆಂಡ್​ನಲ್ಲಿ ಈ ವಿಚಾರದ ಬಗ್ಗೆ ಸುದೀಪ್ ಏನು ಹೇಳುತ್ತಾರೆ ಎಂಬುದನ್ನು ತಿಳಿಯಲು ಪ್ರೇಕ್ಷಕರು ಕಾದಿದ್ದಾರೆ.

ಬಿಗ್ ಬಾಸ್ ಮನೆಯ ಎಲ್ಲ ನಿಯಮ ಮುರಿಯುತ್ತೇನೆ: ಮತ್ತೆ ಚೈತ್ರಾ ಉದ್ಧಟತನ ಶುರು
ಚೈತ್ರಾ ಕುಂದಾಪುರ
ಮದನ್​ ಕುಮಾರ್​
|

Updated on: Dec 13, 2024 | 11:47 PM

Share

ಮೂರನೇ ಬಾರಿಗೆ ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಜೈಲು ಸೇರಿದ್ದಾರೆ. ಅವರ ಆಟ ಕಳಪೆ ಆಗಿದೆ ಎಂಬ ಅಭಿಪ್ರಾಯ ಬೇರೆ ಸ್ಪರ್ಧಿಗಳಿಂದ ಬಂದಿದೆ. ಕೇವಲ ಮಾತಿನ ಬಲದಿಂದ ಎಲ್ಲರನ್ನೂ ಗೆಲ್ಲಬಹುದು ಎಂದುಕೊಂಡಿರುವ ಚೈತ್ರಾ ಅವರ ತಂತ್ರಗಾರಿಕೆ ಸರಿಯಾಗಿ ವರ್ಕ್​ ಆಗುತ್ತಿಲ್ಲ. ಆ ಕಾರಣದಿಂದಲೇ ಅವರನ್ನು ಪದೇಪದೇ ಕಳಪೆ ಸ್ಥಾನಕ್ಕೆ ತಂದು ಕೂರಿಸಲಾಗುತ್ತಿದೆ. ಈ ರೀತಿ ಕಳಪೆ ಪಟ್ಟ ಸಿಕ್ಕಾಗ ಚೈತ್ರಾ ಇನ್ನೂ ಜೋರಾಗಿ ಜಗಳ ಮಾಡುತ್ತಾರೆ. ಡಿಸೆಂಬರ್​ 13ರ ಸಂಚಿಕೆಯಲ್ಲಿ ಕೂಡ ಅದೇ ರೀತಿ ಆಗಿದೆ.

ಈ ವಾರ ಯಾರು ಕಳಪೆ ಯಾರು ಉತ್ತಮ ಎಂಬುದನ್ನು ನಿರ್ಧರಿಸುವಾಗ ಮಾತಿನ ಚಕಮಕಿ ನಡೆದಿದೆ. ಈ ವಾರ ತಾವು ಕಳಪೆ ಆಗಬಾರದು ಎಂದು ಚೈತ್ರಾ ಅವರು ತುಂಬ ಪ್ರಯತ್ನಿಸಿದ್ದರು. ಆದರೆ ಅವರಿಗೆ ಈ ವಾರ ಕೂಡ ಕಳಪೆ ಪಟ್ಟದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಹನುಮಂತ, ತ್ರಿವಿಕ್ರಮ್, ಮಂಜು ಮತ್ತು ಭವ್ಯಾ ಅವರು ಚೈತ್ರಾಗೆ ಕಳಪೆ ನೀಡಿದ್ದಾರೆ. ಆದ್ದರಿಂದ ಚೈತ್ರಾ ಜೈಲು ಸೇರುವುದು ಅನಿವಾರ್ಯ ಆಯಿತು.

ಚೈತ್ರಾ ರೀತಿಯತೇ ತ್ರಿವಿಕ್ರಮ್ ಅವರಿಗೆ ನಾಲ್ಕು ಜನರಿಂದ ಕಳಪೆ ಎಂಬ ಅಭಿಪ್ರಾಯ ಬಂತು. ಹಾಗಾಗಿ ಚೈತ್ರಾ ಜೊತೆ ತ್ರಿವಿಕ್ರಮ್ ಕೂಡ ಜೈಲು ಸೇರಿದರು. ಇಬ್ಬರಿಗೂ ಪರಸ್ಪರ ಕಂಡರೆ ಆಗುವುದಿಲ್ಲ. ಆದರೆ ಜೈಲಿನ ಕೋಣೆಯನ್ನು ಹಂಚಿಕೊಳ್ಳುವ ಅನಿವಾರ್ಯ ಸಂದರ್ಭ ಎದುರಾಯಿತು. ಚೈತ್ರಾ ಮತ್ತು ತ್ರಿವಿಕ್ರಮ್ ಜೈಲಿಗೆ ಹೋದಾಗ ಇನ್ನುಳಿದ ಸದಸ್ಯರು ಬಂದು ಅಲ್ಲಿ ಮಾತನಾಡುತ್ತಿದ್ದರು. ಅದರಿಂದ ಚೈತ್ರಾ ಅವರಿಗೆ ಕಿರಿಕಿರಿ ಆಯಿತು.

ಇದನ್ನೂ ಓದಿ: ‘ಆಟಕ್ಕೆ ಅವಕಾಶ ಕೊಡಲ್ಲ’; ಗೌತಮಿ ತಂಡ ಸೇರಿ ಗಳಗಳನೆ ಅತ್ತ ಚೈತ್ರಾ ಕುಂದಾಪುರ

ಬಿಗ್ ಬಾಸ್ ಮನೆಯ ನಿಯಮದ ಪ್ರಕಾರ ಲೈಟ್ ಆಫ್​ ಆಗುವುದಕ್ಕೂ ಮುನ್ನ ಯಾರೂ ಕೂಡ ಮಲಗುವಂತಿಲ್ಲ. ಆದರೆ ಚೈತ್ರಾ ಅವರು ಜೈಲಿನಲ್ಲಿ ಮಲಗಿದ್ದಾರೆ. ಅದನ್ನು ಕ್ಯಾಪ್ಟನ್ ಸುರೇಶ್ ಅವರು ಪ್ರಶ್ನೆ ಮಾಡಿದ್ದಕ್ಕೆ, ‘ನಾನು ಬಿಗ್ ಬಾಸ್ ಮನೆಯ ಎಲ್ಲ ನಿಯಮ ಮುರಿಯುತ್ತೇನೆ’ ಎಂದು ಚೈತ್ರಾ ಉದ್ಧಟತನ ತೋರಿದ್ದಾರೆ. ಅಲ್ಲದೇ, ಶಿಕ್ಷೆ ಮುಗಿಯುವುದಕ್ಕೂ ಮುನ್ನ ಅವರು ಜೈಲಿನಿಂದ ಹೊರಗೆ ಬರಲು ಪ್ರಯತ್ನಿಸಿದ್ದಾರೆ ಎಂಬ ರೀತಿಯಲ್ಲಿ ಡಿ.14ರ ಸಂಚಿಕೆಯ ಪ್ರೋಮೋ ಕೂಡ ತೋರಿಸಲಾಗಿದೆ. ಮುಂದೇನಾಗಲಿದೆ? ಈ ವಾರು ಯಾರು ಎಲಿಮಿನೇಟ್​ ಆಗಲಿದ್ದಾರೆ ಎಂಬುದಕ್ಕೆ ಭಾನುವಾರದ ಸಂಚಿಕೆಯಲ್ಲಿ ಉತ್ತರ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್