AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಶೋನಲ್ಲಿ ನೋಟ್​ ಬ್ಯಾನ್​ ಮತ್ತು ಮೋದಿ ಬಗ್ಗೆ ತಮಾಷೆ: ಖಾಸಗಿ ವಾಹಿನಿಗೆ ಕೇಂದ್ರದಿಂದ ನೋಟಿಸ್​

Junior Super Star Season 4: ಕಪ್ಪು ಹಣವನ್ನು ನಿರ್ಮೂಲನೆ ಮಾಡುವ ಸಲುವಾಗಿ ಒಬ್ಬ ರಾಜನು ನೋಟ್​ ಬ್ಯಾನ್​ ಮಾಡುತ್ತಾನೆ. ಆದರೂ ಕಪ್ಪು ಹಣ ತೊಲಗುವುದೇ ಇಲ್ಲ ಎಂಬುದನ್ನು ಆ ಸ್ಕಿಟ್​ನಲ್ಲಿ ಹೇಳಲಾಗಿತ್ತು.

ಮಕ್ಕಳ ಶೋನಲ್ಲಿ ನೋಟ್​ ಬ್ಯಾನ್​ ಮತ್ತು ಮೋದಿ ಬಗ್ಗೆ ತಮಾಷೆ: ಖಾಸಗಿ ವಾಹಿನಿಗೆ ಕೇಂದ್ರದಿಂದ ನೋಟಿಸ್​
ನರೇಂದ್ರ ಮೋದಿ
TV9 Web
| Edited By: |

Updated on: Jan 19, 2022 | 9:51 AM

Share

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಆಡಳಿತದ ಬಗ್ಗೆ ಪರ-ವಿರೋಧದದ ಚರ್ಚೆ ಇದ್ದೇ ಇದೆ. ಅವರು ಕೈಕೊಂಡ ಕೆಲವು ಕ್ರಮಗಳಿಗೆ ಮೊದಲಿನಿಂದಲೂ ಟೀಕೆ ಕೇಳಿಬಂದಿರುವುದು ಸಹಜ. ನೋಟ್​ ಬ್ಯಾನ್​, ಸಡನ್​ ಲಾಕ್​ಡೌನ್​ ಸೇರಿದಂತೆ ಅನೇಕ ವಿಚಾರಗಳನ್ನು ಜನರು ಖಂಡಿಸಿದ್ದುಂಟು. ಈಗ ಡಿಮಾನಿಟೈಸೇಷನ್​ (Demonetization) ಕುರಿತು ಮನರಂಜನಾ ಟಿವಿ ಕಾರ್ಯಕ್ರಮದಲ್ಲಿ ಸ್ಕಿಟ್​ ಮಾಡಲಾಗಿದೆ. ‘ಜೂನಿಯರ್​ ಸೂಪರ್​ ಸ್ಟಾರ್​ ಸೀಸನ್​ 4’ ರಿಯಾಲಿಟಿ ಶೋನಲ್ಲಿ ಮಕ್ಕಳಿಂದ ಅಭಿನಯಿಸಲ್ಪಟ್ಟ ಈ ಕಿರು ನಾಟಕಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ಅಲ್ಲದೇ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ (Information And broadcasting Ministry) ದೂರು ನೀಡಲಾಗಿದೆ. ಹಾಗಾಗಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಖಾಸಗಿ ಟಿವಿ ವಾಹಿನಿಗೆ ನೋಟಿಸ್​ ಜಾರಿ ಆಗಿದೆ. 7 ದಿನದೊಳಗೆ ಪ್ರತಿಕ್ರಿಯಿಸಬೇಕು, ಇಲ್ಲವಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ನೋಟಿಸ್​ನಲ್ಲಿ ತಿಳಿಸಲಾಗಿದೆ. ಸದ್ಯ ಈ ವಿಚಾರ ಹೆಚ್ಚು ಚರ್ಚೆ ಆಗುತ್ತಿದೆ.

ತಮಿಳಿನ ಖಾಸಗಿ ವಾಹಿನಿಯಲ್ಲಿ ‘ಜೂನಿಯರ್​ ಸೂಪರ್​ ಸ್ಟಾರ್​ ಸೀಸನ್​ 4’ ಪ್ರಸಾರ ಆಗುತ್ತಿದೆ. ಜ.15ರಂದು ಈ ಶೋನಲ್ಲಿ ಒಂದು ಸ್ಕಿಟ್​ ಅನ್ನು ಮಕ್ಕಳು ಅಭಿನಯಿಸಿ ತೋರಿಸಿದರು. ಅದರಲ್ಲಿ ನರೇಂದ್ರ ಮೋದಿಯರವರ ಡಿಮಾನಿಟೈಸೇಷನ್​ ನಿರ್ಧಾರದ ಬಗ್ಗೆ ತಮಾಷೆ ಮಾಡಲಾಗಿತ್ತು. ಅದನ್ನು ತಮಿಳುನಾಡು ಬಿಜೆಪಿ ಐಟಿ ಮತ್ತು ಸೋಶಿಯಲ್​ ಮೀಡಿಯಾ ಘಟಕ ಖಂಡಿಸಿದೆ. ಘಟಕದ ಸಿಟಿಆರ್​ ನಿರ್ಮಲ್​ ಕುಮಾರ್​ ಅವರು ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ದೂರು ನೀಡಿದ್ದಾರೆ. ಅದರ ಅನ್ವಯ ಸಚಿವಾಲಯದಿಂದ ವಾಹಿನಿಗೆ ನೋಟಿಸ್​ ಜಾರಿ ಮಾಡಲಾಗಿದೆ.

ಕಪ್ಪು ಹಣವನ್ನು ನಿರ್ಮೂಲನೆ ಮಾಡುವ ಸಲುವಾಗಿ ಒಬ್ಬ ರಾಜನು ನೋಟ್​ ಬ್ಯಾನ್​ ಮಾಡುತ್ತಾನೆ. ಆದರೂ ಕಪ್ಪು ಹಣ ತೊಲಗುವುದೇ ಇಲ್ಲ ಎಂಬುದನ್ನು ಆ ಸ್ಕಿಟ್​ನಲ್ಲಿ ಹೇಳಲಾಗಿತ್ತು. ಅದಕ್ಕೆ ಬಿಜೆಪಿಯಿಂದ ವಿರೋಧ ವ್ಯಕ್ತಿವಾಗಿದೆ. ಈ ಸ್ಕಿಟ್​ನ ವಿಡಿಯೋ ತುಣುಕು ಈಗ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಮಕ್ಕಳಿಂದ ಉದ್ದೇಶಪೂರ್ವಕವಾಗಿಯೇ ಈ ಸ್ಕಿಟ್​ ಮಾಡಿಸಲಾಗಿದೆ ಎಂದು ಸಿಟಿಆರ್​ ನಿರ್ಮಲ್​ ಕುಮಾರ್​ ಆಕ್ಷೇಪಿಸಿದ್ದಾರೆ.

ಮಕ್ಕಳು ಈ ರೀತಿಯ ಸ್ಕಿಟ್​ ಮಾಡಿದಾಗ ಆ ಕಾರ್ಯಕ್ರಮದ ಜರ್ಡ್​ಗಳು ಜೋರಾಗಿ ನಕ್ಕಿರುವ ದೃಶ್ಯ ಪ್ರಸಾರ ಆಗಿದೆ. ಆದರೆ ಅದು ಎಡಿಟೆಡ್​​ ಎಂದು ಹೇಳಲಾಗುತ್ತಿದೆ. ‘ಮಕ್ಕಳ ಸ್ಕಿಟ್​ಗೆ ನಾವು ಹಾಗೆ ಪ್ರತಿಕ್ರಿಯೆ ನೀಡಿರಲಿಲ್ಲ. ವಾಹಿನಿಯ ಫೈನಲ್​ ಎಡಿಟ್​ ನೋಡಿ ನಮಗೆ ಶಾಕ್​ ಆಯ್ತು’ ಅಂತ ಕಾರ್ಯಕ್ರಮದ ಜಡ್ಜ್​ಗಳು ತಮಗೆ ಹೇಳಿದ್ದಾರೆ ಎಂದು ಸಿಟಿಆರ್​ ನಿರ್ಮಲ್​ ಕುಮಾರ್ ಅವರು ವಾಹಿನಿಗೆ ಬರೆದ ಪತ್ರದಲ್ಲಿ ತಿಳಿಸಿರುವ ಬಗ್ಗೆ ವರದಿ ಆಗಿದೆ.

ಇದನ್ನೂ ಓದಿ:

ಏಕಾಏಕಿ ರಿಯಾಲಿಟಿ ಶೋನಿಂದ ಹೊರ ನಡೆದ ಖ್ಯಾತ ನಿರೂಪಕ; ಮತ್ತೆ ಮರಳಲ್ಲ ಎಂದ ನಟ

ಬೇರೆಲ್ಲ ರಿಯಾಲಿಟಿ ಶೋಗಳಿಗೆ ಬೈಯ್ಯುವ ಸೋನು ನಿಗಮ್​ ಈ ಒಂದು ಶೋಗೆ ಜಡ್ಜ್​ ಆಗಲು ಒಪ್ಪಿದ್ದೇಕೆ?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್