AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪಿಲ್​ ಶರ್ಮಾ ಶೋಗೆ ನವಜೋತ್​ ಸಿಂಗ್​ ಸಿಧು ಮರಳಿದರೆ ನಾನು ಇರಲ್ಲ ಎಂದ ಅರ್ಚನಾ ಸಿಂಗ್​

ನವಜೋತ್​ ಸಿಂಗ್​ ಸಿಧು ಅವರು ರಾಜಕೀಯದಲ್ಲಿ ಬ್ಯುಸಿ ಆದ ನಂತರ ಕಪಿಲ್​ ಶರ್ಮಾ ಶೋ ತೊರೆದಿದ್ದರು. ಆ ಸ್ಥಾನವನ್ನು ಅರ್ಚನಾ ಸಿಂಗ್​ ಅವರು ತುಂಬಿದ್ದರು. ಈಗ ನವಜೋತ್​ ಅವರು ಮತ್ತೆ ಶೋಗೆ ಮರಳಲಿದ್ದಾರೆ ಎನ್ನುವ ಸುದ್ದಿ ಜೋರಾಗಿದೆ.

ಕಪಿಲ್​ ಶರ್ಮಾ ಶೋಗೆ ನವಜೋತ್​ ಸಿಂಗ್​ ಸಿಧು ಮರಳಿದರೆ ನಾನು ಇರಲ್ಲ ಎಂದ ಅರ್ಚನಾ ಸಿಂಗ್​
ಕಪಿಲ್​ ಶರ್ಮಾ ಶೋಗೆ ನವಜೋತ್​ ಸಿಂಗ್​ ಸಿಧು ಮರಳಲಿದರೆ ನಾನು ಇರಲ್ಲ ಎಂದ ಅರ್ಚನಾ ಸಿಂಗ್​
Follow us
TV9 Web
| Updated By: ಮದನ್​ ಕುಮಾರ್​

Updated on: Sep 30, 2021 | 7:18 AM

ನವಜೋತ್​ ಸಿಂಗ್​ ಸಿಧು ಅವರು ಪಂಜಾಬ್​ ಕಾಂಗ್ರೆಸ್​ ಮುಖ್ಯಸ್ಥ ಸ್ಥಾನಕ್ಕೆ ಮಂಗಳವಾರ (ಸೆ.28) ರಾಜೀನಾಮೆ ನೀಡಿದ್ದಾರೆ. ಇದು ಪಂಜಾಬ್​ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಈ ಬೆನ್ನಲ್ಲೇ ನವಜೋತ್​ ಸಿಂಗ್​ ಅವರು ಕಪಿಲ್​ ಶರ್ಮಾ ಶೋಗೆ ಮರಳಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಒಂದೊಮ್ಮೆ ಅವರು ಅತಿಥಿ ಜಡ್ಜ್​ ಆಗಿ ಮರಳಿದರೆ ತಾವು ಸ್ಥಾನ ಬಿಟ್ಟುಕೊಡೋಕೆ ರೆಡಿ ಎಂದು ನಟಿ ಅರ್ಚನಾ ಪುರಾಣ್​ ಸಿಂಗ್​ ಹೇಳಿದ್ದಾರೆ.

ನವಜೋತ್​ ಸಿಂಗ್​ ಸಿಧು ಅವರು ರಾಜಕೀಯದಲ್ಲಿ ಬ್ಯುಸಿ ಆದ ನಂತರ ಕಪಿಲ್​ ಶರ್ಮಾ ಶೋ ತೊರೆದಿದ್ದರು. ಆ ಸ್ಥಾನವನ್ನು ಅರ್ಚನಾ ಸಿಂಗ್​ ಅವರು ತುಂಬಿದ್ದರು. ಈಗ ನವಜೋತ್​ ಅವರು ಮತ್ತೆ ಶೋಗೆ ಮರಳಲಿದ್ದಾರೆ ಎನ್ನುವ ಸುದ್ದಿ ಜೋರಾಗಿದೆ. ಈ ಬಗ್ಗೆ ಅರ್ಚನಾ ಕೂಡ ಪೋಸ್ಟ್ ಒಂದನ್ನು ಮಾಡಿದ್ದಾರೆ. ಅವರ ಬಗ್ಗೆ ಹರಿದಾಡುತ್ತಿರುವ ನಾನಾ ಮೀಮ್​ಗಳು ಈ ಪೋಸ್ಟ್​ನಲ್ಲಿವೆ.

ಈ ಬಗ್ಗೆ ಮಾತನಾಡಿರುವ ಅರ್ಚನಾ, ‘ಸಿಧು ಅವರು ಮತ್ತು ಶೋಗೆ ಮರಳುತ್ತಾರೆ ಎಂದರೆ ನಾನು ನನ್ನ ಸ್ಥಾನ ತೊರೆಯೋಕೆ ರೆಡಿ ಇದ್ದೇನೆ. ನನಗೆ ಮಾಡೋಕೆ ಸಾಕಷ್ಟು ಕೆಲಸಗಳು ಇವೆ. ನನಗೆ ಈ ಶೋಗಾಗಿ ಎರಡು ದಿನ ಮುಡಿಪಿಡಬೇಕು. ಇದರಿಂದಾಗಿ ಬೇರೆ ಕೆಲಸಗಳನ್ನು ಒಪ್ಪಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಬೇರೆ ರಾಷ್ಟ್ರಗಳಲ್ಲಿ ಶೂಟಿಂಗ್​ಗೆ ಅವಕಾಶ ಇತ್ತು. ಆದರೆ, ಅದು ಸಾಧ್ಯವಾಗುತ್ತಿಲ್ಲ.  ಹೀಗಾಗಿ, ನವಜೋತ್​ ಸಿಂಗ್​ ಮರಳುತ್ತಾರೆ ಎಂದರೆ ನನಗೆ ಆ ಸ್ಥಾನ ತೊರೆಯೋಕೆ ಬೇಸರವಿಲ್ಲ’ ಎಂದಿದ್ದಾರೆ.

ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ದಿನದ ನಂತರ  ನವಜೋತ್ ಸಿಂಗ್ ಸಿಧು ಅವರು ತಮ್ಮ ಟ್ವಿಟರ್​​ ಹ್ಯಾಂಡಲ್‌ನಲ್ಲಿ ವಿಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಅವರು ಮುಖ್ಯಮಂತ್ರಿ ಚರಣ್​​ಜಿತ್ ಸಿಂಗ್ ಚನ್ನಿ ಸಚಿವ ಸಂಪುಟದಲ್ಲಿ ಕಳಂಕಿತ ಮತ್ತು ಇತರ ವಿವಾದಾತ್ಮಕ ಶಾಸಕರನ್ನು ಸೇರಿಸಿರುವುದನ್ನು ಟೀಕಿಸಿದ್ದಾರೆ.  ವಿಡಿಯೊ ಸಂದೇಶದಲ್ಲಿ, ಸಿಧು ಜನರ ಜೀವನವನ್ನು ಉತ್ತಮಗೊಳಿಸುವುದೊಂದೇ ತನ್ನ ಧರ್ಮ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಾಲಿವುಡ್ ನಟರಾದ ಭೂಮಿ ಪಡ್ನೇಕರ್, ಕಪಿಲ್ ಶರ್ಮಾ ಕರ್ನಾಟಕದ ನೆರವಿಗೆ ಧಾವಿಸಿದ್ದಾರೆ

ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!