AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್​ನ ಅಕ್ರಮವಾಗಿ ಪ್ರಸಾರ ಮಾಡುವಂತಿಲ್ಲ’; ಆದೇಶ ನೀಡಿದ ಕೋರ್ಟ್​  

‘ಬಿಗ್ ಬಾಸ್​ನ ಯಾವುದೇ ಎಪಿಸೋಡ್​ಗಳನ್ನು ಅಕ್ರಮವಾಗಿ ಪ್ರಸಾರ ಮಾಡುವಂತಿಲ್ಲ. ನಾವು ಇಂಜಂಕ್ಷನ್ ಆದೇಶ ನೀಡುತ್ತಿದ್ದೇವೆ. ಈ ರೀತಿಯ ವೆಬ್​ಸೈಟ್​ಗಳನ್ನು ಬ್ಲಾಕ್ ಮಾಡಿ ಎಂದು ನಾವು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುತ್ತಿದ್ದೇವೆ’ ಎಂದು ಕೋರ್ಟ್ ಹೇಳಿದೆ.

‘ಬಿಗ್ ಬಾಸ್​ನ ಅಕ್ರಮವಾಗಿ ಪ್ರಸಾರ ಮಾಡುವಂತಿಲ್ಲ’; ಆದೇಶ ನೀಡಿದ ಕೋರ್ಟ್​   
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Oct 19, 2023 | 11:46 AM

Share

ಹಿಂದಿ, ಕನ್ನಡ ಮೊದಲಾದ ಭಾಷೆಗಳಲ್ಲಿ ಬಿಗ್ ಬಾಸ್ ಆರಂಭ ಆಗಿದೆ. ‘ವಯಕಾಮ್ 18 ಮೀಡಿಯಾ ಪ್ರೈವೇಟ್ ಲಿಮಿಟೆಡ್’ ಹಿಂದಿ, ಕನ್ನಡ ಮೊದಲಾದ ಭಾಷೆಗಳಲ್ಲಿ ಪ್ರಸಾರದ ಹಕ್ಕನ್ನು ಹೊಂದಿದೆ. ಆದರೆ, ಕೆಲವು ವೆಬ್​ಸೈಟ್​ಗಳು ಬಿಗ್ ಬಾಸ್​ನ ಅಕ್ರಮವಾಗಿ ಪ್ರಸಾರ ಮಾಡುತ್ತಿವೆ. ಈ ರೀತಿ ಬಿಗ್ ಬಾಸ್ (Bigg Boss) ಅಕ್ರಮವಾಗಿ ಪ್ರಸಾರ ಮಾಡುವುದಕ್ಕೆ ತಡೆ ನಿಡುವಂತೆ ವಯಕಾಮ್ 18 ದೆಹಲಿ ಹೈಕೋರ್ಟ್ ಮೆಟ್ಟಿಲೇರಿತ್ತು. ಸಂಸ್ಥೆಯ ಪರವಾಗಿ ಆದೇಶ ಬಂದಿದೆ.

‘ಬಿಗ್ ಬಾಸ್​ಗೆ ದೊಡ್ಡ ವೀಕ್ಷಕರ ವರ್ಗ ಇದೆ. ಹಿಂದಿನ ಮತ್ತು ಮುಂದೆ ಪ್ರಸಾರ ಆಗುವ ಎಪಿಸೋಡ್​ಗಳನ್ನು ಅಕ್ರಮವಾಗಿ ಪ್ರಸಾರ ಮಾಡುವುದರಿಂದ ಸ್ವಾಮ್ಯದ ಹಕ್ಕನ್ನು ಉಲ್ಲಂಘನೆ ಮಾಡಿದಂತೆ ಆಗುತ್ತದೆ. ಟಿವಿ ಹಾಗೂ ಒಟಿಟಿಯಲ್ಲಿ ನಾವು ಬಿಗ್ ಬಾಸ್ ಪ್ರಸಾರ ಮಾಡುತ್ತಿದ್ದೇವೆ. ಆದರೆ, ಕೆಲವರು ಬಿಗ್ ಬಾಸ್ ಹೆಸರಿನಲ್ಲಿ ವೆಬ್ ಸೈಟ್ ಆರಂಭಿಸಿ, ಅಲ್ಲಿ ಲಿಯೋ ಪ್ರಸಾರ ಮಾಡುತ್ತಿದ್ದಾರೆ. ಇದು ನಮಗೆ ಹಾನಿ ಮಾಡುತ್ತಿದೆ’ ಎಂದು ವಯಕಾಮ್ 18 ದೂರಿನಲ್ಲಿ ತಿಳಿಸಿತ್ತು.

‘ಬಿಗ್ ಬಾಸ್​ನ ಯಾವುದೇ ಎಪಿಸೋಡ್​ಗಳನ್ನು ಅಕ್ರಮವಾಗಿ ಪ್ರಸಾರ ಮಾಡುವಂತಿಲ್ಲ. ನಾವು ಇಂಜಂಕ್ಷನ್ ಆದೇಶ ನೀಡುತ್ತಿದ್ದೇವೆ. ಈ ರೀತಿಯ ವೆಬ್​ಸೈಟ್​ಗಳನ್ನು ಬ್ಲಾಕ್ ಮಾಡಿ ಎಂದು ನಾವು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುತ್ತಿದ್ದೇವೆ’ ಎಂದು ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್ ಆದೇಶದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ಬಿಸಿ ಗಾಳಿ​: ಕೋಪದಲ್ಲಿ ಬಾಯಿಗೆ ಬಂದಂತೆ ಬೈದ ವಿನಯ್ ಗೌಡ

ಹಿಂದಿಯಲ್ಲಿ ಬಿಗ್ ಬಾಸ್​ ಪ್ರಸಾರ ಆಗುತ್ತಿದೆ. ಇದಕ್ಕೆ ಸಲ್ಮಾನ್ ಖಾನ್ ಅವರು ನಿರೂಪಣೆ ಮಾಡುತ್ತಿದ್ದಾರೆ. ಹಲವು ಸೆಲೆಬ್ರಿಟಿಗಳು ದೊಡ್ಮನೆ ಸೇರಿದ್ದಾರೆ. ಕನ್ನಡದಲ್ಲಿ ಬಿಗ್ ಬಾಸ್ 10ನೇ ಸೀಸನ್ ಎರಡನೇ ವಾರಕ್ಕೆ ಕಾಲಿಟ್ಟಿದೆ. ಕಿಚ್ಚ ಸುದೀಪ್ ಅವರು ಬಿಗ್ ಬಾಸ್​ನ ನಡೆಸಿಕೊಡುತ್ತಿದ್ದಾರೆ. 16 ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ಜೋರಾಗಿದೆ. ಜಿಯೋ ಸಿನಿಮಾಸ್​ನಲ್ಲಿ ಲೈವ್ ವೀಕ್ಷಣೆಗೆ ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ