AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡೆದೇ ಹೋಯ್ತು ಹಿಂದೆಂದೂ ಆಗಿರದ ಘನಘೋರ ತಪ್ಪು; ಕ್ಯಾಪ್ಟನ್​ ಸೇರಿ ಎಲ್ಲರೂ ನಾಮಿನೇಟ್

ಬಿಗ್ ಬಾಸ್ ನಾಮಿನೇಷನ್​ಗೆ ಚಟುವಟಿಕೆ ಒಂದನ್ನು ನೀಡಿತ್ತು. ಈ ಚಟುವಟಿಕೆಯಲ್ಲಿ ತ್ರಿವಿಕ್ರಂ, ಅನುಷಾ, ಧನರಾಜ್, ಜಗದೀಶ್, ಐಶ್ವರ್ಯಾ, ಮಾನಸಾ ಹಾಗೂ ರಂಜಿತ್ ನಾಮಿನೇಟ್ ಆದರು. ಉಳಿದ ಸ್ಪರ್ಧಿಗಳು ನಿಟ್ಟುಸಿರು ಬಿಟ್ಟಿದ್ದರು. ಆದರೆ, ಮಾನಸಾ ಸೇರಿ ಕೆಲವರು ಮಾಡಿದ ತಪ್ಪಿನಿಂದ ಇಡೀ ಮನೆ ಶಿಕ್ಷೆಗೆ ಒಳಗಾಗಿದೆ.

ನಡೆದೇ ಹೋಯ್ತು ಹಿಂದೆಂದೂ ಆಗಿರದ ಘನಘೋರ ತಪ್ಪು; ಕ್ಯಾಪ್ಟನ್​ ಸೇರಿ ಎಲ್ಲರೂ ನಾಮಿನೇಟ್
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Oct 09, 2024 | 7:43 AM

Share

‘ಬಿಗ್ ಬಾಸ್’ನಲ್ಲಿ ಅದರದ್ದೇ ಆದ ನಿಯಮಗಳು ಇವೆ. ಈ ನಿಯಮಗಳನ್ನು ಸ್ಪರ್ಧಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಅದರಲ್ಲೂ ಕೆಲವು ನಿಯಮಗಳನ್ನು ಸ್ಪರ್ಧಿಗಳು ತಪ್ಪುವಂತಿಲ್ಲ. ಕೆಲವೊಮ್ಮೆ ಸ್ಪರ್ಧಿಗಳು ಗೊತ್ತಿದ್ದೂ ನಿಯಮ ಬ್ರೇಕ್ ಮಾಡುತ್ತಾರೆ. ಈಗ ಬಿಗ್ ಬಾಸ್ ಇತಿಹಾಸದಲ್ಲಿ ನಡೆಯದೇ ಇರುವ ಘನಘೋರ ತಪ್ಪೊಂದು ನಡೆದು ಹೋಗಿದೆ. ಇದಕ್ಕೆ ಸಂಬಂಧಿಸಿದಂತೆ ದೊಡ್ಮನೆಯವರಿಗೆ ಶಿಕ್ಷೆ ಕೂಡ ಆಗಿದೆ. ಇದರಿಂದ ಮನೆಯಲ್ಲಿ ಅಸಮಾಧಾನದ ಬುಗ್ಗೆ ಎದ್ದಿದೆ.

ಆರಂಭದಲ್ಲಿ ಬಿಗ್ ಬಾಸ್ ನಾಮಿನೇಷನ್​ಗೆ ಚಟುವಟಿಕೆ ಒಂದನ್ನು ನೀಡಿತ್ತು. ಈ ಚಟುವಟಿಕೆಯಲ್ಲಿ ತ್ರಿವಿಕ್ರಂ, ಅನುಷಾ, ಧನರಾಜ್, ಜಗದೀಶ್, ಐಶ್ವರ್ಯಾ, ಮಾನಸಾ ಹಾಗೂ ರಂಜಿತ್ ನಾಮಿನೇಟ್ ಆದರು. ಉಳಿದ ಸ್ಪರ್ಧಿಗಳು ನಿಟ್ಟುಸಿರು ಬಿಟ್ಟಿದ್ದರು. ಆದರೆ, ಮಾನಸಾ ಸೇರಿ ಕೆಲವರು ಮಾಡಿದ ತಪ್ಪಿನಿಂದ ಇಡೀ ಮನೆ ಶಿಕ್ಷೆಗೆ ಒಳಗಾಗಿದೆ. ಎಲ್ಲರೂ ನಾಮಿನೇಟ್ ಮಾಡಿ ಬಿಗ್ ಬಾಸ್ ಆದೇಶ ನೀಡಿದ್ದಾರೆ.

ನಿಯಮಗಳ ಪ್ರಕಾರ ‘ಬಿಗ್ ಬಾಸ್’ನಲ್ಲಿ ಬ್ಲೈಂಡ್ಸ್ ಇಳಿಸಿದಾಗ ಯಾರೂ ಹೊರಗೆ ಇಣುಕಿ ನೋಡುವಂತಿಲ್ಲ. ಇದಕ್ಕೆ ಕಾರಣ ಅಲ್ಲಿ ಟಾಸ್ಕ್​ಗೆ ಸಿದ್ಧತೆ ಮಾಡುತ್ತಾ ಇರಲಾಗುತ್ತದೆ. ಟಾಸ್ಕ್​ ಹೇಗಿರುತ್ತದೆ ಎಂಬುದು ಮೊದಲೇ ಗೊತ್ತಾದರೆ ಸ್ಪರ್ಧಿಗಳು ಮಾನಸಿಕವಾಗಿ ರೆಡಿ ಆಗುತ್ತಾರೆ. ಈ ಕಾರಣದಿಂದ ಇದಕ್ಕೆ ಅನುಮತಿ ಇಲ್ಲ. ಆದರೆ, ಮಾನಸಾ ಸೇರಿದಂತೆ ಕೆಲವರು ಬ್ಲೈಂಡ್ಸ್​ನ ಸರಿಸಿ ಹೊರಗೆ ಇಣುಕಿ ನೋಡಿದ್ದಾರೆ.

ಇದರಿಂದ ಬಿಗ್ ಬಾಸ್ ಸಿಟ್ಟಾದರು. ‘ಬ್ಲೈಂಡ್ಸ್ ಡೌನ್ ಆಗಿದ್ದಾಗ ಆಚೆಗೆ ಇಣುಕಿ ನೋಡುವಂತಿಲ್ಲ ಎಂಬುದು ಮನೆಯ ತುಂಬಾ ಮುಖ್ಯವಾದ ಮೂಲ ನಿಯಮ. ಈಗಷ್ಟೇ ಆ ನಿಯಮವನ್ನು ಕೆಲ ಸದಸ್ಯರು ಉಲ್ಲಂಘಿಸಿದ್ದಾರೆ. ಈ ವಿಚಾರ ಮನೆಯ ಕ್ಯಾಪ್ಟನ್ ಗಮನಕ್ಕೆ ಬಂದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಇನ್ನಷ್ಟು ಶೋಚನೀಯ. ನಿಮ್ಮೆಲ್ಲರ ವರ್ತನೆಯಿಂದ ಬಿಗ್ ಬಾಸ್​ಗೆ ನೋವಾಗಿದೆ. ಬಿಗ್ ಬಾಸ್​ನ ಹಾಗೂ ಬಿಗ್ ಬಾಸ್ ನಿಯಮಗಳನ್ನು ಗೌರವಿಸದ ನಿಮಗೆ ಈ ಮನೆಯಲ್ಲಿ ಇರಲು ಯೋಗ್ಯತೆ ಇಲ್ಲ. ಈ ಕ್ಷಣದಿಂದ ಬಿಗ್ ಬಾಸ್ ಮನೆಯ ಎಲ್ಲ ಸದಸ್ಯರನ್ನು ನಾಮಿನೇಟ್ ಮಾಡುತ್ತಿದ್ದಾರೆ’ ಎಂದು ಆದೇಶ ನೀಡಿದರು.

ಇದನ್ನೂ ಓದಿ: ‘ಕಂಟೆಂಟ್​ಗೋಸ್ಕರ ಲವ್ ಆಗುತ್ತಾ?’; ಪ್ರಶ್ನೆ ಮಾಡಿದ ಬಿಗ್ ಬಾಸ್ ಸ್ಪರ್ಧಿಗಳು

‘ಬಿಗ್ ಬಾಸ್ ಇತಿಹಾಸದಲ್ಲಿ ಯಾವ ಕ್ಯಾಪ್ಟನ್ ಕೂಡ ನಾಮಿನೇಟ್ ಆಗಿರಲಿಲ್ಲ. ಆದರೆ, ಹಂಸ ಅವರೇ ನಿಮ್ಮ ಇಮ್ಯೂನಿಟಿಯನ್ನು ಹಿಂಪಡೆದು ನೇರವಾಗಿ ನಾಮಿನೇಟ್ ಮಾಡಿದ್ದೇವೆ. ಇದು ಇತಿಹಾಸ. ಅಭಿನಂದನೆಗಳು’ ಎಂದು ಬಿಗ್ ಬಾಸ್ ಘೋಷಣೆ ಮಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!