AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಂಡಿಯನ್​ ಐಡಲ್​ 12’ ಟ್ರೋಫಿ ಯಾರ ಪಾಲಿಗೆ? ಲೀಕ್​ ಆಯ್ತು ವಿನ್ನರ್​ ಫೋಟೋ

Indian Idol 12 Winne: ಪವನ್​​ದೀಪ್​ ರಾಜನ್​ ಅರುಣಿತಾ ನಡುವೆ ಪ್ರೀತಿ ಇದೆ ಎಂಬ ರೀತಿಯಲ್ಲಿ ವಾಹಿನಿಯವರು ಬಿಂಬಿಸಿದ್ದರು. ಇದಕ್ಕೆ ಅನೇಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದರು.

‘ಇಂಡಿಯನ್​ ಐಡಲ್​ 12’ ಟ್ರೋಫಿ ಯಾರ ಪಾಲಿಗೆ? ಲೀಕ್​ ಆಯ್ತು ವಿನ್ನರ್​ ಫೋಟೋ
‘ಇಂಡಿಯನ್​ ಐಡಲ್​ 12’ ಫಿನಾಲೆ ಯಾರ ಪಾಲಿಗೆ? ಲೀಕ್​ ಆಯ್ತು ವಿನ್ನರ್​ ಫೋಟೋ
TV9 Web
| Edited By: |

Updated on:Aug 15, 2021 | 2:55 PM

Share

ಹಲವು ಗಾಯಕರಿಗೆ ವೇದಿಕೆಯಾದ ‘ಇಂಡಿಯನ್​ ಐಡಲ್​ 12’ ಫಿನಾಲೆ ಶೂಟಿಂಗ್​ ಪೂರ್ಣಗೊಂಡಿದ್ದು, ಸೋನಿ ವಾಹಿನಿಯಲ್ಲಿ ಇಂದು (ಆಗಸ್ಟ್ 15) ಕಾರ್ಯಕ್ರಮ ಪ್ರಸಾರವಾಗಲಿದೆ. ಈ ಬಾರಿ ವಿನ್​ ಆಗುವ ಸ್ಪರ್ಧಿ ಯಾರು ಎನ್ನುವ ಕುತೂಹಲ ಅನೇಕರಲ್ಲಿದೆ. ಹೀಗಿರುವಾಗಲೇ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಒಂದು ವೈರಲ್​ ಆಗಿದೆ. ಈ ಫೋಟೋದಲ್ಲಿ ಪವನ್​​ದೀಪ್​ ರಾಜನ್​ ಅವರು ಇಂಡಿಯನ್​ ಐಡಲ್​ ಕಪ್​ ಹಾಗೂ ಚೆಕ್​ನೊಂದಿಗೆ ಪೋಸ್​ ಕೊಟ್ಟಿದ್ದು, ಅವರೇ ವಿನ್ನರ್​ ಎಂದು ಅನೇಕರು ಊಹಿಸುತ್ತಿದ್ದಾರೆ. ಕೆಲವರು ಒಂದು ಹೆಜ್ಜೆ ಮುಂದೆ ಹೋಗಿ ಅವರಿಗೆ ಶುಭಾಶಯವನ್ನೂ ಕೋರಿದ್ದಾರೆ.

ಪವನ್​ದೀಪ್​ ಅವರು ಮೊದಲ ದಿನದಿಂದಲೇ ಎಲ್ಲರ ಗಮನ ಸೆಳೆಯೋಕೆ ಯಶಸ್ವಿಯಾಗಿದ್ದರು. ಅದ್ಭುತ ಕಂಠದ ಮೂಲಕ ಜಡ್ಜ್​​ಗಳ ಗಮನ ಸೆಳೆದಿದ್ದರು ಪವನ್​​ದೀಪ್. ಗಿಟಾರ್​ ಅಥವಾ ಪಿಯಾನೋ ನುಡಿಸುತ್ತಲೇ ಹಾಡನ್ನು ಹಾಡುವ ಕಲೆ ಪವನ್​ದೀಪ್​ಗೆ ಕರಗತವಾಗಿದೆ.ಈ ಎಲ್ಲಾ ಕಾರಣಕ್ಕೆ ಅವರು ವೀಕ್ಷಕರಿಗೆ ಹಾಗೂ ಜಡ್ಜ್​ಗಳಿಗೆ ಇಷ್ಟವಾಗಿದ್ದಾರೆ. ಅಂತಿಮವಾಗಿ ಅವರು ಜಯಶಾಲಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.  ಚಂಡೀಗಢದಲ್ಲಿ ತಮ್ಮದೇ ಮ್ಯೂಸಿಕ್​ ಬ್ಯಾಂಡ್​ ಹೊಂದಿದ್ದಾರೆ ಪವನ್​ದೀಪ್​. ಕುಮಾನ್​ ವಿಶ್ವವಿದ್ಯಾಲಯದಲ್ಲಿ ಅವರು ಸಂಗೀತ ಪದವಿ ಪಡೆದಿದ್ದಾರೆ.

ಪವನ್​​ದೀಪ್​ ರಾಜನ್​ ಅರುಣಿತಾ ನಡುವೆ ಪ್ರೀತಿ ಇದೆ ಎಂಬ ರೀತಿಯಲ್ಲಿ ವಾಹಿನಿಯವರು ಬಿಂಬಿಸಿದ್ದರು. ಇದಕ್ಕೆ ಅನೇಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಅನೇಕರು ಇದನ್ನು ಫ್ರೆಂಡ್​ಶಿಪ್​ ಅಷ್ಟೇ ಎಂದು ಈ ಜೋಡಿಗಳ ಪರವಾಗಿ ಮಾತನಾಡಿದ್ದರು. ಈ ಬಗ್ಗೆ ಪರ-ವಿರೋಧ ಚರ್ಚೆ ನಡೆದೇ ಇತ್ತು. ಸ್ಪರ್ಧಿಗಳನ್ನು, ನಿರೂಪಕರನ್ನು ಹಾಗೂ ಜಡ್ಜ್​ಗಳನ್ನು ಹಿಗ್ಗಾಮುಗ್ಗಾ ಟ್ರೋಲ್​ ಮಾಡಲಾಗಿತ್ತು.

ನಿಜಕ್ಕೂ ಪವನ್​ದೀಪ್​ ಟ್ರೋಫಿ ಎತ್ತಿದ್ದಾರಾ, ‘ಇಂಡಿಯನ್​ ಐಡಲ್​ 12’ ಫಿನಾಲೆ ಹೇಗಿತ್ತು? ಎಂಬಿತ್ಯಾದಿ ಪ್ರಶ್ನೆಗೆ ಇಂದು ರಾತ್ರಿ ಉತ್ತರ ಸಿಗಲಿದೆ. ಇಂದು (ಆಗಸ್ಟ್ 15) ಸೋನಿ ವಾಹಿನಿಯಲ್ಲಿ ಈ ರಿಯಾಲಿಟಿ ಶೋನ ಫಿನಾಲೆ ಪ್ರಸಾರವಾಗಲಿದೆ.

ಇದನ್ನೂ ಓದಿ: ‘ಇದು ಮೋಸದ ಎಲಿಮಿನೇಷನ್​’; ಇಂಡಿಯನ್​ ಐಡಲ್​ ಶೋ ಮೇಲೆ ಪ್ರೇಕ್ಷಕರ ಸಿಟ್ಟಿಗೆ ಇಲ್ಲಿದೆ ಕಾರಣ

Published On - 2:38 pm, Sun, 15 August 21

ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು
ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು