‘ಇಂಡಿಯನ್​ ಐಡಲ್​ 12’ ಟ್ರೋಫಿ ಯಾರ ಪಾಲಿಗೆ? ಲೀಕ್​ ಆಯ್ತು ವಿನ್ನರ್​ ಫೋಟೋ

Indian Idol 12 Winne: ಪವನ್​​ದೀಪ್​ ರಾಜನ್​ ಅರುಣಿತಾ ನಡುವೆ ಪ್ರೀತಿ ಇದೆ ಎಂಬ ರೀತಿಯಲ್ಲಿ ವಾಹಿನಿಯವರು ಬಿಂಬಿಸಿದ್ದರು. ಇದಕ್ಕೆ ಅನೇಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದರು.

‘ಇಂಡಿಯನ್​ ಐಡಲ್​ 12’ ಟ್ರೋಫಿ ಯಾರ ಪಾಲಿಗೆ? ಲೀಕ್​ ಆಯ್ತು ವಿನ್ನರ್​ ಫೋಟೋ
‘ಇಂಡಿಯನ್​ ಐಡಲ್​ 12’ ಫಿನಾಲೆ ಯಾರ ಪಾಲಿಗೆ? ಲೀಕ್​ ಆಯ್ತು ವಿನ್ನರ್​ ಫೋಟೋ
Follow us
| Updated By: ರಾಜೇಶ್ ದುಗ್ಗುಮನೆ

Updated on:Aug 15, 2021 | 2:55 PM

ಹಲವು ಗಾಯಕರಿಗೆ ವೇದಿಕೆಯಾದ ‘ಇಂಡಿಯನ್​ ಐಡಲ್​ 12’ ಫಿನಾಲೆ ಶೂಟಿಂಗ್​ ಪೂರ್ಣಗೊಂಡಿದ್ದು, ಸೋನಿ ವಾಹಿನಿಯಲ್ಲಿ ಇಂದು (ಆಗಸ್ಟ್ 15) ಕಾರ್ಯಕ್ರಮ ಪ್ರಸಾರವಾಗಲಿದೆ. ಈ ಬಾರಿ ವಿನ್​ ಆಗುವ ಸ್ಪರ್ಧಿ ಯಾರು ಎನ್ನುವ ಕುತೂಹಲ ಅನೇಕರಲ್ಲಿದೆ. ಹೀಗಿರುವಾಗಲೇ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಒಂದು ವೈರಲ್​ ಆಗಿದೆ. ಈ ಫೋಟೋದಲ್ಲಿ ಪವನ್​​ದೀಪ್​ ರಾಜನ್​ ಅವರು ಇಂಡಿಯನ್​ ಐಡಲ್​ ಕಪ್​ ಹಾಗೂ ಚೆಕ್​ನೊಂದಿಗೆ ಪೋಸ್​ ಕೊಟ್ಟಿದ್ದು, ಅವರೇ ವಿನ್ನರ್​ ಎಂದು ಅನೇಕರು ಊಹಿಸುತ್ತಿದ್ದಾರೆ. ಕೆಲವರು ಒಂದು ಹೆಜ್ಜೆ ಮುಂದೆ ಹೋಗಿ ಅವರಿಗೆ ಶುಭಾಶಯವನ್ನೂ ಕೋರಿದ್ದಾರೆ.

ಪವನ್​ದೀಪ್​ ಅವರು ಮೊದಲ ದಿನದಿಂದಲೇ ಎಲ್ಲರ ಗಮನ ಸೆಳೆಯೋಕೆ ಯಶಸ್ವಿಯಾಗಿದ್ದರು. ಅದ್ಭುತ ಕಂಠದ ಮೂಲಕ ಜಡ್ಜ್​​ಗಳ ಗಮನ ಸೆಳೆದಿದ್ದರು ಪವನ್​​ದೀಪ್. ಗಿಟಾರ್​ ಅಥವಾ ಪಿಯಾನೋ ನುಡಿಸುತ್ತಲೇ ಹಾಡನ್ನು ಹಾಡುವ ಕಲೆ ಪವನ್​ದೀಪ್​ಗೆ ಕರಗತವಾಗಿದೆ.ಈ ಎಲ್ಲಾ ಕಾರಣಕ್ಕೆ ಅವರು ವೀಕ್ಷಕರಿಗೆ ಹಾಗೂ ಜಡ್ಜ್​ಗಳಿಗೆ ಇಷ್ಟವಾಗಿದ್ದಾರೆ. ಅಂತಿಮವಾಗಿ ಅವರು ಜಯಶಾಲಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.  ಚಂಡೀಗಢದಲ್ಲಿ ತಮ್ಮದೇ ಮ್ಯೂಸಿಕ್​ ಬ್ಯಾಂಡ್​ ಹೊಂದಿದ್ದಾರೆ ಪವನ್​ದೀಪ್​. ಕುಮಾನ್​ ವಿಶ್ವವಿದ್ಯಾಲಯದಲ್ಲಿ ಅವರು ಸಂಗೀತ ಪದವಿ ಪಡೆದಿದ್ದಾರೆ.

ಪವನ್​​ದೀಪ್​ ರಾಜನ್​ ಅರುಣಿತಾ ನಡುವೆ ಪ್ರೀತಿ ಇದೆ ಎಂಬ ರೀತಿಯಲ್ಲಿ ವಾಹಿನಿಯವರು ಬಿಂಬಿಸಿದ್ದರು. ಇದಕ್ಕೆ ಅನೇಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಅನೇಕರು ಇದನ್ನು ಫ್ರೆಂಡ್​ಶಿಪ್​ ಅಷ್ಟೇ ಎಂದು ಈ ಜೋಡಿಗಳ ಪರವಾಗಿ ಮಾತನಾಡಿದ್ದರು. ಈ ಬಗ್ಗೆ ಪರ-ವಿರೋಧ ಚರ್ಚೆ ನಡೆದೇ ಇತ್ತು. ಸ್ಪರ್ಧಿಗಳನ್ನು, ನಿರೂಪಕರನ್ನು ಹಾಗೂ ಜಡ್ಜ್​ಗಳನ್ನು ಹಿಗ್ಗಾಮುಗ್ಗಾ ಟ್ರೋಲ್​ ಮಾಡಲಾಗಿತ್ತು.

ನಿಜಕ್ಕೂ ಪವನ್​ದೀಪ್​ ಟ್ರೋಫಿ ಎತ್ತಿದ್ದಾರಾ, ‘ಇಂಡಿಯನ್​ ಐಡಲ್​ 12’ ಫಿನಾಲೆ ಹೇಗಿತ್ತು? ಎಂಬಿತ್ಯಾದಿ ಪ್ರಶ್ನೆಗೆ ಇಂದು ರಾತ್ರಿ ಉತ್ತರ ಸಿಗಲಿದೆ. ಇಂದು (ಆಗಸ್ಟ್ 15) ಸೋನಿ ವಾಹಿನಿಯಲ್ಲಿ ಈ ರಿಯಾಲಿಟಿ ಶೋನ ಫಿನಾಲೆ ಪ್ರಸಾರವಾಗಲಿದೆ.

ಇದನ್ನೂ ಓದಿ: ‘ಇದು ಮೋಸದ ಎಲಿಮಿನೇಷನ್​’; ಇಂಡಿಯನ್​ ಐಡಲ್​ ಶೋ ಮೇಲೆ ಪ್ರೇಕ್ಷಕರ ಸಿಟ್ಟಿಗೆ ಇಲ್ಲಿದೆ ಕಾರಣ

Published On - 2:38 pm, Sun, 15 August 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!