AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಯನ್​ ಐಡಲ್​ ನಂತರವೂ ಮುಂದುವರಿದ ಪ್ರೇಮ ಕಥೆ? ಒಂದೇ ಅಪಾರ್ಟ್​ಮೆಂಟ್​ನಲ್ಲಿ ಫ್ಲಾಟ್​ ಖರೀದಿಸಿದ ಪವನ್​ದೀಪ್​-ಅರುಣಿತಾ

ಅರುಣಿತಾ ಹಾಗೂ ಪವನ್​ದೀಪ್​ ಒಂದೇ ಅಪಾರ್ಟ್​ಮೆಂಟ್​ನಲ್ಲಿ ಫ್ಲಾಟ್​ ಖರೀದಿ ಮಾಡಿದ್ದಾರೆ. ಇದನ್ನು ಸ್ವತಃ ಅವರೇ ಒಪ್ಪಿಕೊಂಡಿದ್ದಾರೆ. ಈ ಮೂಲಕ ಇಬ್ಬರೂ ನೆರೆಹೊರೆಯವರಾಗಿದ್ದಾರೆ.

ಇಂಡಿಯನ್​ ಐಡಲ್​ ನಂತರವೂ ಮುಂದುವರಿದ ಪ್ರೇಮ ಕಥೆ? ಒಂದೇ ಅಪಾರ್ಟ್​ಮೆಂಟ್​ನಲ್ಲಿ ಫ್ಲಾಟ್​ ಖರೀದಿಸಿದ ಪವನ್​ದೀಪ್​-ಅರುಣಿತಾ
ಇಂಡಿಯನ್​ ಐಡಲ್​ ನಂತರವೂ ಮುಂದುವರಿದ ಪ್ರೇಮ ಕಥೆ? ಒಂದೇ ಅಪಾರ್ಟ್​ಮೆಂಟ್​ನಲ್ಲಿ ಫ್ಲಾಟ್​ ಖರೀದಿಸಿದ ಪವನ್​ದೀಪ್​-ಅರುಣಿತಾ
TV9 Web
| Edited By: |

Updated on: Aug 22, 2021 | 9:12 AM

Share

ಇಂಡಿಯನ್​ ಐಡಲ್​ 12ರ ವಿನ್ನರ್​ ಪಟ್ಟವನ್ನು ಪವನ್​ದೀಪ್ ರಾಜನ್​ ಪಡೆದುಕೊಂಡಿದ್ದಾರೆ.  ಅವರಿಗೆ ಆಕರ್ಷಕ ಟ್ರೋಫಿ ಜತೆಗೆ ಬಹುಮಾನವಾಗಿ 12 ಲಕ್ಷ ರೂ. ಮತ್ತು ಒಂದು ಕಾರು ನೀಡಲಾಗಿದೆ. ಇದರ ಜತೆಗೆ  ಅವರಿಗೆ ಅಪಾರ ಖ್ಯಾತಿ ಸಿಕ್ಕಿದೆ. ಅಲ್ಲದೆ, ಸಾಕಷ್ಟು ಸಿನಿಮಾಗಳಲ್ಲಿ ಹಾಡೋಕೆ ಆಫರ್​ ಕೂಡ ಬರುತ್ತಿವೆ. ಹೀಗಿರುವಾಗಲೇ ಅವರು ಅಚ್ಚರಿಯ ನಿರ್ಧಾರ ತೆಗೆದುಕೊಂಡಿದ್ದು, ಅಭಿಮಾನಿಗಳು ಖುಷಿ ಪಟ್ಟಿದ್ದಾರೆ.

ಪವನ್​​ದೀಪ್​ ರಾಜನ್​ ಅರುಣಿತಾ ನಡುವೆ ಪ್ರೀತಿ ಇದೆ ಎಂಬ ರೀತಿಯಲ್ಲಿ ವಾಹಿನಿಯವರು ಬಿಂಬಿಸಿದ್ದರು. ಇದಕ್ಕೆ ಅನೇಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಟಿಆರ್​ಪಿಗೋಸ್ಕರ ಈ ರೀತಿ ಮಾಡಲಾಗುತ್ತಿದೆ ಎಂದೇ ಎಲ್ಲರೂ ಮಾತನಾಡಿಕೊಂಡಿದ್ದರು. ಇನ್ನೂ ಕೆಲವರು ಪವನ್​ದೀಪ್​ ಹಾಗೂ ಅರುಣಿತಾ ನಡುವೆ ಇರೋದು ಕೇವಲ ಫ್ರೆಂಡ್​ಶಿಪ್​ ಎಂದು ಸಬೂಬು ನೀಡಿದ್ದರು. ಆದರೆ, ಇವರ ನಡುವೆ ಪ್ರೀತಿ ಮೊಳೆತಿದ್ದು, ಅದು ಮುಂದುವರಿಯುತ್ತಿದೆಯೇ ಎನ್ನುವ ಅನುಮಾನ ಕಾಡಿದೆ.

ಅರುಣಿತಾ ಹಾಗೂ ಪವನ್​ದೀಪ್​ ಒಂದೇ ಅಪಾರ್ಟ್​ಮೆಂಟ್​ನಲ್ಲಿ ಫ್ಲಾಟ್​ ಖರೀದಿ ಮಾಡಿದ್ದಾರೆ. ಇದನ್ನು ಸ್ವತಃ ಅವರೇ ಒಪ್ಪಿಕೊಂಡಿದ್ದಾರೆ. ಈ ಮೂಲಕ ಇಬ್ಬರೂ ನೆರೆಹೊರೆಯವರಾಗಿದ್ದಾರೆ. ಈ ವಿಚಾರ ಕೇಳಿದ ಅಭಿಮಾನಿಗಳು ಸಾಕಷ್ಟು ಕುತೂಹಲಗೊಂಡಿದ್ದಾರೆ. ಅಲ್ಲದೆ, ಈ ನಿರ್ಧಾರ ನೋಡಿ, ಪವನ್​ದೀಪ್​ ಹಾಗೂ ಅರುಣಿತಾ ನಡುವೆ ನಿಜವಾದ ಪ್ರೀತಿ ಹುಟ್ಟಿದೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಸದ್ಯ, ಸೋಶಿಯಲ್​ ಮೀಡಿಯಾದಲ್ಲಿ ಈ ವಿಚಾರ ಹಾಟ್​ ಟಾಪಿಕ್​ ಆಗಿ ಚರ್ಚೆಯಾಗುತ್ತಿದೆ.

ಇನ್ನು, ಪವನ್​ದೀಪ್​, ಅರುಣಿತಾ ಹಾಗೂ ಇಂಡಿಯನ್​ ಐಡಲ್​ 12ರ ಎರಡನೇ ರನ್ನರ್​ ಅಪ್​ ಶಣ್​ಮುಖ್​ ಪ್ರಿಯ ಅವರು ಒಟ್ಟಾಗಿ ಆಲ್ಬಮ್​ ಸಾಂಗ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಾಜ್​ ಸುರಾನಿ ಅವರು ಈ ಆಲ್ಬಮ್​ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ.

ಪವನ್​ದೀಪ್​ ಅವರು ಇಂಡಿಯನ್​ ಐಡಲ್​ 12ರಲ್ಲಿ ಮೊದಲ ದಿನದಿಂದಲೇ ಎಲ್ಲರ ಗಮನ ಸೆಳೆಯೋಕೆ ಯಶಸ್ವಿಯಾಗಿದ್ದರು. ಅದ್ಭುತ ಕಂಠದ ಮೂಲಕ ಜಡ್ಜ್​​ಗಳ ಗಮನ ಸೆಳೆದಿದ್ದರು ಪವನ್​​ದೀಪ್. ಗಿಟಾರ್​ ಅಥವಾ ಪಿಯಾನೋ ನುಡಿಸುತ್ತಲೇ ಹಾಡನ್ನು ಹಾಡುವ ಕಲೆ ಪವನ್​ದೀಪ್​ಗೆ ಕರಗತವಾಗಿದೆ.ಈ ಎಲ್ಲಾ ಕಾರಣಕ್ಕೆ ಅವರು ವೀಕ್ಷಕರಿಗೆ ಹಾಗೂ ಜಡ್ಜ್​ಗಳಿಗೆ ಇಷ್ಟವಾಗಿದ್ದರು. ಅಂತಿಮವಾಗಿ ಅವರು ಜಯಶಾಲಿಯಾಗಿದ್ದಾರೆ.  ಚಂಡೀಗಢದಲ್ಲಿ ತಮ್ಮದೇ ಮ್ಯೂಸಿಕ್​ ಬ್ಯಾಂಡ್​ ಹೊಂದಿದ್ದಾರೆ ಪವನ್​ದೀಪ್​. ಕುಮಾನ್​ ವಿಶ್ವವಿದ್ಯಾಲಯದಲ್ಲಿ ಅವರು ಸಂಗೀತ ಪದವಿ ಪಡೆದಿದ್ದಾರೆ.

ಇದನ್ನೂ ಓದಿ: Pawandeep Rajan: ‘ಇಂಡಿಯನ್​ ಐಡಲ್​ 12’ ವಿನ್ನರ್​ ಪವನ್​ದೀಪ್​ ರಾಜನ್​ಗೆ ಸಿಕ್ತು ಟ್ರೋಫಿ, ಕಾರು, 12 ಲಕ್ಷ ರೂ. ಬಹುಮಾನ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!