ಅಮುಕು ಡುಮುಕು ನಿಜಕ್ಕೂ ಪೆಟ್ರೋಲ್ ಕುಡಿದರಾ? ಸಿನಿಮಾ ಪ್ರಚಾರಕ್ಕೆ ಚೀಪ್ ಗಿಮಿಕ್

ಅಮುಕು ಡುಮುಕು ಎಂದು ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದ ಈ ವ್ಯಕ್ತಿ ಹೆಸರು ಮಂಜು. ಸೋಶಿಯಲ್ ಮೀಡಿಯಾದಲ್ಲಿ ವಿವಿಧ ವಿಡಿಯೋಗಳನ್ನು ಹಾಕಿಕೊಂಡು ವೈರಲ್ ಆಗುತ್ತಾ ಇರುತ್ತಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಅವರು ಸೂರಿ ಅಣ್ಣ ಸಿನಿಮಾ ಗೆಲ್ಲಬೇಕು ಎಂದು ಪೆಟ್ರೋಲ್ ಕುಡಿದರು. ಆ ಬಳಿಕ ಅವರು ಒದ್ದಾಡಿದರು.

ಅಮುಕು ಡುಮುಕು ನಿಜಕ್ಕೂ ಪೆಟ್ರೋಲ್ ಕುಡಿದರಾ? ಸಿನಿಮಾ ಪ್ರಚಾರಕ್ಕೆ ಚೀಪ್ ಗಿಮಿಕ್
ಮಂಜು
Edited By:

Updated on: Feb 27, 2026 | 10:11 AM

ಅಮುಕು ಡುಮುಕು ಎಂಬ ವ್ಯಕ್ತಿಯ ಬಗ್ಗೆ ನಿಮಗೆ ಗೊತ್ತಿರಬದು. ಸೋಶಿಯಲ್ ಮೀಡಿಯಾದಲ್ಲಿ ಈ ವ್ಯಕ್ತಿಯು ಸಾಕಷ್ಟು ಜನಪ್ರಿಯತೆ ಪಡೆದರು. ಜೀ ಕನ್ನಡದ ರಿಯಾಲಿಟಿ ಶೋಗೆ ಅತಿಥಿಯಾಗೂ ತೆರಳಿದ್ದರು. ಈಗ ಆ ವ್ಯಕ್ತಿ ಮಾಡಿಕೊಂಡ ಒಂದು ಎಡವಟ್ಟು ಚರ್ಚೆಗೆ ಕಾರಣ ಆಗಿದೆ. ಸಿನಿಮಾ ಪ್ರಚಾರಕ್ಕಾಗಿ ಅವರು ಪೆಟ್ರೋಲ್ ಕುಡಿದರು ಮತ್ತು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು ಎಂಬ ವಿಡಿಯೋ ವೈರಲ್ ಆಯಿತು. ಈ ವಿಡಿಯೋದ ಅಸಲಿಯತ್ತು ಹೊರ ಬಂದಿದೆ.

ಅಮುಕು ಡುಮುಕು ಎಂದು ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದ ಈ ವ್ಯಕ್ತಿ ಹೆಸರು ಮಂಜು. ಸೋಶಿಯಲ್ ಮೀಡಿಯಾದಲ್ಲಿ ವಿವಿಧ ವಿಡಿಯೋಗಳನ್ನು ಹಾಕಿಕೊಂಡು ವೈರಲ್ ಆಗುತ್ತಾ ಇರುತ್ತಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಅವರು ಸೂರಿ ಅಣ್ಣ ಸಿನಿಮಾ ಗೆಲ್ಲಬೇಕು ಎಂದು ಪೆಟ್ರೋಲ್ ಕುಡಿದರು. ಆ ಬಳಿಕ ಅವರು ಒದ್ದಾಡಿದರು. ನಂತರ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.

ಈ ವಿಡಿಯೋ ಸಾಕಷ್ಟು ಹರಿದಾಡಿತು. ಮಂಜುಗೆ ಪೂರ್ತಿಯಾಗಿ ಹುಚ್ಚು ಹಿಡಿದಿದೆ ಎಂದು ಹೇಳಲಾಯಿತು. ಸೋಶಿಯಲ್ ಮೀಡಿಯಾ ಜನಪ್ರಿಯತೆ ಹಾಗೂ ಸಿನಿಮಾ ಜನಪ್ರಿಯತೆಗೆ ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದು ಎಂದೆಲ್ಲ ಮಾತನಾಡಿಕೊಳ್ಳಲಾಯಿತು. ಈ ವಿಷಯಕ್ಕೆ ಸಂಬಂಧಿಸಿದಂತೆ ಮಂಜು ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ಅಸಲಿಗೆ ಅದು ಪೆಟ್ರೋಲ್ ಆಗಿಯೇ ಇರಲಿಲ್ಲವಂತೆ.

‘ಅಣ್ಣ ನಿಂಗೆ ಯಾರು ಏನೇ ಅನ್ನಲ್ಲಿ, ನಿಮ್ಮ ಸಿನಿಮಾ ಗೆಲ್ಲಬೇಕು. ಸಲಗ ಸೂರಿ ಅಣ್ಣನ ಸಿನಿಮಾ ಗೆಲ್ಲಬೇಕು’ ಎನ್ನುತ್ತಾ ಪೆಟ್ರೋಲ್ ಕುಡಿದರು. ಸೂರಿ ಅಣ್ಣ ಅವರನ್ನು ಎತ್ತುಕೊಂಡು ಆಸ್ಪತ್ರೆಗೆ ಕರೆದುಕೊಂಡು ಹೋಗುವ ದೃಶ್ಯ ಇತ್ತು.

ಇದನ್ನೂ ಓದಿ: ಮದುವೆಯಲ್ಲಿ ರಶ್ಮಿಕಾ ಮಂದಣ್ಣ ಆಸೆ ಈಡೇರಿಸಿದ ವಿಜಯ್ ದೇವರಕೊಂಡ

ಇದಕ್ಕೂ ಮತ್ತೊಂದು ವಿಡಿಯೋ ವೈರಲ್ ಆಗಿದೆ. ಬಿಂದು ಜೀರಾಗೆ ಜೇನು ತುಪ್ಪ ಬೆರೆಸಿದ್ದರು ಮಂಜು. ಆಗ ಪೆಟ್ರೋಲ್ ಕಲರ್​​ಗೆ ಅದು ತಿರುಗಿತ್ತು. ಈ ರೀತಿಯಲ್ಲಿ ಮಾಡಿ ಅವರು ಪೆಟ್ರೋಲ್ ಎಂದು ಕುಡಿದಿದ್ದರು. ಇದು ಸಿನಿಮಾ ಪ್ರಚಾರ ಅಲ್ಲ ಎಂದಿದ್ದರು.

ಮತ್ತಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
Follow Us