AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೀದಿಯಲ್ಲಿ ಹೋಗುವ ನಾಯಿಗೂ, ನನಗೂ ಒಂದೇ ಹೆಸರಲ್ಲಿ ಕರೀತಾಳೆ’; ಇಶಿತಾ ಬಗ್ಗೆ ಪತಿಯ ದೂರು

ಕಲರ್ಸ್​ ಕನ್ನಡ ವಾಹಿನಿ ರಾಜಾ-ರಾಣಿ ಹೆಸರಿನ ಹೊಸ ಶೋ ಆರಂಭಿಸಿದೆ. ಈ ಶೋನಲ್ಲಿ ಕಲರ್ಸ್​ ಕನ್ನಡ ವಾಹಿನಿಯಲ್ಲಿ ಕಾಣಿಸಿಕೊಂಡ ಧಾರಾವಾಹಿ ಕಲಾವಿದರು, ರಿಯಾಲಿಟಿ ಶೋ ಸ್ಪರ್ಧಿಗಳು ಆಗಮಿಸಿದ್ದಾರೆ.

‘ಬೀದಿಯಲ್ಲಿ ಹೋಗುವ ನಾಯಿಗೂ, ನನಗೂ ಒಂದೇ ಹೆಸರಲ್ಲಿ ಕರೀತಾಳೆ’; ಇಶಿತಾ ಬಗ್ಗೆ ಪತಿಯ ದೂರು
ಬೀದಿಯಲ್ಲಿ ಹೋಗುವ ನಾಯಿಗೂ, ನನಗೂ ಒಂದೇ ಹೆಸರಲ್ಲಿ ಕರೀತಾಳೆ; ಇಶಿತಾ ಬಗ್ಗೆ ಪತಿಯ ದೂರು
TV9 Web
| Edited By: |

Updated on: Sep 20, 2021 | 7:56 PM

Share

ಪ್ರೀತಿ ಹೆಚ್ಚಾದಾಗ ಪತಿಯನ್ನು ನಾನಾ ಹೆಸರಿನಿಂದ ಹೆಂಡತಿಯರು ಕೂಗುತ್ತಾರೆ. ಇನ್ನು ಕೋಪ ಹೆಚ್ಚಾದಾಗ ಹೆಂಡತಿಯರು ಏರು ಧ್ವನಿಯಲ್ಲಿ ಮಾತನಾಡಿ ಗಂಡಂದಿರನ್ನು ಬೈಯುತ್ತಾರೆ. ಇದು ಸಾಮಾನ್ಯರ ಮನೆಯಿಂದ ಹಿಡಿದು ಸೆಲೆಬ್ರಿಟಿಗಳ ಮನೆಯವರೆಗೂ ನಡೆದೇ ಇದೆ. ‘ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ಗುರುತಿಸಿಕೊಂಡ ನಟಿ ಇಶಿತಾ ವರ್ಷಾ ಮನೆಯಲ್ಲೂ ಇದೇ ಕಥೆ. ಈ ಬಗ್ಗೆ ‘ರಾಜಾ-ರಾಣಿ’ ವೇದಿಕೆ ಮೇಲೆ ಇಶಿತಾ ಹೇಳಿಕೊಂಡಿದ್ದಾರೆ.

ಕಲರ್ಸ್​ ಕನ್ನಡ ವಾಹಿನಿ ರಾಜಾ-ರಾಣಿ ಹೆಸರಿನ ಹೊಸ ಶೋ ಆರಂಭಿಸಿದೆ. ಈ ಶೋನಲ್ಲಿ ಕಲರ್ಸ್​ ಕನ್ನಡ ವಾಹಿನಿಯಲ್ಲಿ ಕಾಣಿಸಿಕೊಂಡ ಧಾರಾವಾಹಿ ಕಲಾವಿದರು, ರಿಯಾಲಿಟಿ ಶೋ ಸ್ಪರ್ಧಿಗಳು ಆಗಮಿಸಿದ್ದಾರೆ. ಪ್ರತಿ ವಾರ ನಾನಾ ರೀತಿಯ ಟಾಸ್ಕ್​ಗಳನ್ನು ಅವರಿಗೆ ನೀಡಲಾಗುತ್ತಿದೆ. ಇದರ ಜತೆಗೆ ವೈಯಕ್ತಿಕ ಜೀವನದ ಬಗ್ಗೆಯೂ ಒಂದಷ್ಟು ವಿಚಾರ ಕೇಳಲಾಗುತ್ತದೆ. ಅದೇ ರೀತಿ ಇಶಿತಾ ವರ್ಷ ಹಾಗೂ ಅವರ ಪತಿ ಮುರುಗ ವೈಯಕ್ತಿಕ ಜೀವನದ ಒಂದಷ್ಟು ವಿಚಾರ ಹೊರ ಬಿದ್ದಿದೆ.

‘ಇಶಿತಾ ವರ್ಷಾ ಕೋಪ ಬಂದಾಗ ಪತಿಯನ್ನು ಯಾವ ಶಬ್ದದಿಂದ ಬಯ್ಯುತ್ತಾರೆ’ ಎಂದು ಪ್ರಶ್ನಿಸಿದರು ನಿರೂಪಕಿ ಅನುಪಮಾ ಗೌಡ. ಇದಕ್ಕೆ ಇಶಿತಾ ‘ನಾನು ಯಾವುದೇ ಶಬ್ದದಿಂದಲೂ ಬಯ್ಯುವುದಿಲ್ಲ. ಮುರುಗ ಎಂದು ಏರು ಧ್ವನಿಯಲ್ಲಿ ಮಾತನಾಡುತ್ತೆನೆ. ಆಗ ಅವರಿಗೆ ಗೊತ್ತಾಗುತ್ತದೆ’ ಎಂದರು. ಹಾಗಾದರೆ, ಪ್ರೀತಿ ಹೆಚ್ಚಾದಾಗ ಯಾವ ಪದ ಬಳಕೆ ಮಾಡುತ್ತಾರೆ ಎಂದು ಕೇಳಲಾಯಿತು. ಈ ವೇಳೆ ಮುರುಗ ‘ಸೋನು’ ಎಂದು ಆಕೆ ಕರೆಯುತ್ತಾರೆ ಎಂದು ಉತ್ತರಿಸಿದರು.

ಮುಂದುವರಿದು, ‘ನನ್ನನ್ನೂ ಸೋನು ಅಂತಾಳೆ, ಅಲ್ಲಿ ರಸ್ತೆಯಲ್ಲಿ ಹೋಗುವ ನಾಯಿಯನ್ನೂ ಸೋನು ಎನ್ನುತ್ತಾಳೆ’ ಎಂದು ನಗುತ್ತಲೇ ಸೃಜನ್​ ಬಳಿ ದೂರು ಹೇಳಿಕೊಂಡರು ಮುರುಗ. ಈ ಮಾತನ್ನು ಕೇಳಿ ನಿರೂಪಕಿ ಅನುಪಮಾ ಗೌಡ, ಜಡ್ಜ್​ಗಳಾದ ಹಿರಿಯ ನಟಿ ತಾರಾ ಹಾಗೂ ಸೃಜನ್​ ಲೋಕೇಶ್​ ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ. ಕಲರ್ಸ್​ ಕನ್ನಡ ವಾಹಿನಿ ಈ ಬಗ್ಗೆ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ‘ರಾಜಾ-ರಾಣಿ’ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 7:30ಕ್ಕೆ ಪ್ರಸಾರವಾಗುತ್ತಿದೆ.

ಇದನ್ನೂ ಓದಿ: ಕಷ್ಟಕಾಲದಲ್ಲಿ ಮಾರಿದ್ದ ಪ್ರೀತಿಯ ಕಾರನ್ನು ಹುಡುಕಿ ಇಶಿತಾಗೆ ಗಿಫ್ಟ್​ ಮಾಡಿದ ಪತಿ ಮುರುಗ

ಎಣ್ಣೆ ಪಾರ್ಟಿ ಜತೆಗೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್
ಎಣ್ಣೆ ಪಾರ್ಟಿ ಜತೆಗೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್
ಶಿವರಾತ್ರಿಗೆ ಮಾದಪ್ಪನ ಸನ್ನಿಧಿಗೆ ತೆರಳುವ ಭಕ್ತರೇ ಎಚ್ಚರ
ಶಿವರಾತ್ರಿಗೆ ಮಾದಪ್ಪನ ಸನ್ನಿಧಿಗೆ ತೆರಳುವ ಭಕ್ತರೇ ಎಚ್ಚರ
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?
ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ನಿರಾಸೆಯಿಂದ ವಾಪಸ್
ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ನಿರಾಸೆಯಿಂದ ವಾಪಸ್
ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ?
ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಶುಭ
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಶುಭ