AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೀದಿಯಲ್ಲಿ ಹೋಗುವ ನಾಯಿಗೂ, ನನಗೂ ಒಂದೇ ಹೆಸರಲ್ಲಿ ಕರೀತಾಳೆ’; ಇಶಿತಾ ಬಗ್ಗೆ ಪತಿಯ ದೂರು

ಕಲರ್ಸ್​ ಕನ್ನಡ ವಾಹಿನಿ ರಾಜಾ-ರಾಣಿ ಹೆಸರಿನ ಹೊಸ ಶೋ ಆರಂಭಿಸಿದೆ. ಈ ಶೋನಲ್ಲಿ ಕಲರ್ಸ್​ ಕನ್ನಡ ವಾಹಿನಿಯಲ್ಲಿ ಕಾಣಿಸಿಕೊಂಡ ಧಾರಾವಾಹಿ ಕಲಾವಿದರು, ರಿಯಾಲಿಟಿ ಶೋ ಸ್ಪರ್ಧಿಗಳು ಆಗಮಿಸಿದ್ದಾರೆ.

‘ಬೀದಿಯಲ್ಲಿ ಹೋಗುವ ನಾಯಿಗೂ, ನನಗೂ ಒಂದೇ ಹೆಸರಲ್ಲಿ ಕರೀತಾಳೆ’; ಇಶಿತಾ ಬಗ್ಗೆ ಪತಿಯ ದೂರು
ಬೀದಿಯಲ್ಲಿ ಹೋಗುವ ನಾಯಿಗೂ, ನನಗೂ ಒಂದೇ ಹೆಸರಲ್ಲಿ ಕರೀತಾಳೆ; ಇಶಿತಾ ಬಗ್ಗೆ ಪತಿಯ ದೂರು
TV9 Web
| Edited By: |

Updated on: Sep 20, 2021 | 7:56 PM

Share

ಪ್ರೀತಿ ಹೆಚ್ಚಾದಾಗ ಪತಿಯನ್ನು ನಾನಾ ಹೆಸರಿನಿಂದ ಹೆಂಡತಿಯರು ಕೂಗುತ್ತಾರೆ. ಇನ್ನು ಕೋಪ ಹೆಚ್ಚಾದಾಗ ಹೆಂಡತಿಯರು ಏರು ಧ್ವನಿಯಲ್ಲಿ ಮಾತನಾಡಿ ಗಂಡಂದಿರನ್ನು ಬೈಯುತ್ತಾರೆ. ಇದು ಸಾಮಾನ್ಯರ ಮನೆಯಿಂದ ಹಿಡಿದು ಸೆಲೆಬ್ರಿಟಿಗಳ ಮನೆಯವರೆಗೂ ನಡೆದೇ ಇದೆ. ‘ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ಗುರುತಿಸಿಕೊಂಡ ನಟಿ ಇಶಿತಾ ವರ್ಷಾ ಮನೆಯಲ್ಲೂ ಇದೇ ಕಥೆ. ಈ ಬಗ್ಗೆ ‘ರಾಜಾ-ರಾಣಿ’ ವೇದಿಕೆ ಮೇಲೆ ಇಶಿತಾ ಹೇಳಿಕೊಂಡಿದ್ದಾರೆ.

ಕಲರ್ಸ್​ ಕನ್ನಡ ವಾಹಿನಿ ರಾಜಾ-ರಾಣಿ ಹೆಸರಿನ ಹೊಸ ಶೋ ಆರಂಭಿಸಿದೆ. ಈ ಶೋನಲ್ಲಿ ಕಲರ್ಸ್​ ಕನ್ನಡ ವಾಹಿನಿಯಲ್ಲಿ ಕಾಣಿಸಿಕೊಂಡ ಧಾರಾವಾಹಿ ಕಲಾವಿದರು, ರಿಯಾಲಿಟಿ ಶೋ ಸ್ಪರ್ಧಿಗಳು ಆಗಮಿಸಿದ್ದಾರೆ. ಪ್ರತಿ ವಾರ ನಾನಾ ರೀತಿಯ ಟಾಸ್ಕ್​ಗಳನ್ನು ಅವರಿಗೆ ನೀಡಲಾಗುತ್ತಿದೆ. ಇದರ ಜತೆಗೆ ವೈಯಕ್ತಿಕ ಜೀವನದ ಬಗ್ಗೆಯೂ ಒಂದಷ್ಟು ವಿಚಾರ ಕೇಳಲಾಗುತ್ತದೆ. ಅದೇ ರೀತಿ ಇಶಿತಾ ವರ್ಷ ಹಾಗೂ ಅವರ ಪತಿ ಮುರುಗ ವೈಯಕ್ತಿಕ ಜೀವನದ ಒಂದಷ್ಟು ವಿಚಾರ ಹೊರ ಬಿದ್ದಿದೆ.

‘ಇಶಿತಾ ವರ್ಷಾ ಕೋಪ ಬಂದಾಗ ಪತಿಯನ್ನು ಯಾವ ಶಬ್ದದಿಂದ ಬಯ್ಯುತ್ತಾರೆ’ ಎಂದು ಪ್ರಶ್ನಿಸಿದರು ನಿರೂಪಕಿ ಅನುಪಮಾ ಗೌಡ. ಇದಕ್ಕೆ ಇಶಿತಾ ‘ನಾನು ಯಾವುದೇ ಶಬ್ದದಿಂದಲೂ ಬಯ್ಯುವುದಿಲ್ಲ. ಮುರುಗ ಎಂದು ಏರು ಧ್ವನಿಯಲ್ಲಿ ಮಾತನಾಡುತ್ತೆನೆ. ಆಗ ಅವರಿಗೆ ಗೊತ್ತಾಗುತ್ತದೆ’ ಎಂದರು. ಹಾಗಾದರೆ, ಪ್ರೀತಿ ಹೆಚ್ಚಾದಾಗ ಯಾವ ಪದ ಬಳಕೆ ಮಾಡುತ್ತಾರೆ ಎಂದು ಕೇಳಲಾಯಿತು. ಈ ವೇಳೆ ಮುರುಗ ‘ಸೋನು’ ಎಂದು ಆಕೆ ಕರೆಯುತ್ತಾರೆ ಎಂದು ಉತ್ತರಿಸಿದರು.

ಮುಂದುವರಿದು, ‘ನನ್ನನ್ನೂ ಸೋನು ಅಂತಾಳೆ, ಅಲ್ಲಿ ರಸ್ತೆಯಲ್ಲಿ ಹೋಗುವ ನಾಯಿಯನ್ನೂ ಸೋನು ಎನ್ನುತ್ತಾಳೆ’ ಎಂದು ನಗುತ್ತಲೇ ಸೃಜನ್​ ಬಳಿ ದೂರು ಹೇಳಿಕೊಂಡರು ಮುರುಗ. ಈ ಮಾತನ್ನು ಕೇಳಿ ನಿರೂಪಕಿ ಅನುಪಮಾ ಗೌಡ, ಜಡ್ಜ್​ಗಳಾದ ಹಿರಿಯ ನಟಿ ತಾರಾ ಹಾಗೂ ಸೃಜನ್​ ಲೋಕೇಶ್​ ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ. ಕಲರ್ಸ್​ ಕನ್ನಡ ವಾಹಿನಿ ಈ ಬಗ್ಗೆ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ‘ರಾಜಾ-ರಾಣಿ’ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 7:30ಕ್ಕೆ ಪ್ರಸಾರವಾಗುತ್ತಿದೆ.

ಇದನ್ನೂ ಓದಿ: ಕಷ್ಟಕಾಲದಲ್ಲಿ ಮಾರಿದ್ದ ಪ್ರೀತಿಯ ಕಾರನ್ನು ಹುಡುಕಿ ಇಶಿತಾಗೆ ಗಿಫ್ಟ್​ ಮಾಡಿದ ಪತಿ ಮುರುಗ

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ