AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಷ್ಟಕಾಲದಲ್ಲಿ ಮಾರಿದ್ದ ಪ್ರೀತಿಯ ಕಾರನ್ನು ಹುಡುಕಿ ಇಶಿತಾಗೆ ಗಿಫ್ಟ್​ ಮಾಡಿದ ಪತಿ ಮುರುಗ

‘ಅಗ್ನಿಸಾಕ್ಷಿ’ ಧಾರಾವಾಹಿಯ ಮಾಯಾ ಪಾತ್ರದಲ್ಲಿ ಇಶಿತಾ ನಟಿಸಿದ್ದರು. ಈ ಧಾರಾವಾಹಿಯಿಂದ ಅವರು ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು

ಕಷ್ಟಕಾಲದಲ್ಲಿ ಮಾರಿದ್ದ ಪ್ರೀತಿಯ ಕಾರನ್ನು ಹುಡುಕಿ ಇಶಿತಾಗೆ ಗಿಫ್ಟ್​ ಮಾಡಿದ ಪತಿ ಮುರುಗ
ಕಷ್ಟಕಾಲದಲ್ಲಿ ಮಾರಿದ್ದ ಪ್ರೀತಿಯ ಕಾರನ್ನು ಹುಡುಕಿ ಇಶಿತಾಗೆ ಗಿಫ್ಟ್​ ಮಾಡಿದ ಪತಿ ಮುರುಗ
TV9 Web
| Edited By: |

Updated on: Sep 02, 2021 | 9:36 PM

Share

ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಅಗ್ನಿಸಾಕ್ಷಿ’ ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು ಇಶಿತಾ ವರ್ಷಾ. ‘ಸ್ವಾರ್ಥ ರತ್ನ’ ಸಿನಿಮಾ ಮೂಲಕ ಅವರು ಹಿರಿತೆರೆಗೂ ಕಾಲಿಟ್ಟರು. ಆದರೆ, ಅವರು ತುಂಬಾನೇ ಇಷ್ಟಪಟ್ಟು ಕೊಂಡುಕೊಂಡಿದ್ದ ಕಾರನ್ನು ಕಷ್ಟ ಕಾಲದಲ್ಲಿ ಮಾರಿದ್ದರು. ಈಗ ಇದೇ ಕಾರನ್ನು ಅವರು ಪತಿ ಮುರುಗ ಗಿಫ್ಟ್​ ಆಗಿ ನೀಡಿದ್ದಾರೆ.

‘ಅಗ್ನಿಸಾಕ್ಷಿ’ ಧಾರಾವಾಹಿಯ ಮಾಯಾ ಪಾತ್ರದಲ್ಲಿ ಇಶಿತಾ ನಟಿಸಿದ್ದರು. ಈ ಧಾರಾವಾಹಿಯಿಂದ ಅವರು ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಈ ಕಾರಣಕ್ಕೆ ಅವರಿಗೆ ಸಿನಿಮಾ ಆಫರ್​ ಬಂದಿತ್ತು. ‘ಸ್ವಾರ್ಥ ರತ್ನ’ ಸಿನಿಮಾದಲ್ಲಿ ಇಶಿತಾ ಬಣ್ಣ ಹಚ್ಚಿದ್ದರು. 2019ರಲ್ಲಿ ಅವರು ಬಾಯ್​ಫ್ರೆಂಡ್​ ಮುರುಗ ಮದುವೆ ಆದರು. ಈಗ ಈ ಜೋಡಿ ‘ರಾಜಾ ರಾಣಿ’ ವೇದಿಕೆಗೆ ಬಂದಿದೆ. ಈ ವೇದಿಕೆ ಮೇಲೆಯೇ ಕಾರನ್ನು ಇಶಿತಾಗೆ ಗಿಫ್ಟ್​ ಮಾಡಲಾಗಿದೆ.

ಇಶಿತಾ ಅವರು ಯಾರಿಗೂ ಹೇಳದೆಯೇ ಒಂದು ಕಾರನ್ನು​ ಖರೀದಿ ಮಾಡಿದ್ದರು. ಈ ಕಾರು ಅವರಿಗೆ ವಿಶೇಷವಾಗಿತ್ತು. ಏಕೆಂದರೆ, ತಮ್ಮ ಮತ್ತು ತಾಯಿಯ ಜನ್ಮದಿನವನ್ನು ನಂಬರ್​ಪ್ಲೇಟ್​ ಮೇಲೆ ಹಾಕಿಸಿಕೊಂಡಿದ್ದರು. ಆದರೆ, ಕಷ್ಟ ಕಾಲದಲ್ಲಿ ಈ ಕಾರನ್ನು ಅವರು ಮಾರಿದ್ದರು. ಇದು ಅವರಿಗೆ ತುಂಬಾನೇ ನೋವು ತಂದಿತ್ತು. ಆದರೆ, ಈ ನೋವನ್ನು ಪತಿ ಮುರುಗ ಮರೆಸಿದ್ದಾರೆ.

‘ಒಂದೂವರೆ ವರ್ಷದಿಂದ ಯಾವುದೇ ಗಿಫ್ಟ್​ ನೀಡಿಲ್ಲ. ಈಗ ನಿನಗೆ ವಿಶೇಷ ಗಿಫ್ಟ್​ ಕೊಡುತ್ತಿದ್ದೇನೆ’ ಎಂದಿದ್ದಾರೆ ಮುರುಗ. ಇಶಿತಾಗೆ ಅಂಥ ಗಿಫ್ಟ್​ ಏನಿರಬಹುದು ಎನ್ನುವ ಅಚ್ಚರಿ ಕಾಡಿದೆ. ಕೊನೆಗೆ ಅವರಿಗೆ ಗಿಫ್ಟ್​ ಆಗಿ ಸಿಕ್ಕಿದ್ದು ಅವರೇ ಮಾರಿದ ಕಾರು. ‘ನಿನಗೋಸ್ಕರ ಇದೇ ಕಾರನ್ನು ಹುಡುಕಿ ಮತ್ತೆ ತಂದಿದ್ದೇನೆ’ ಎಂದರು ಮುರುಗ. ಅವರು ಈ ವಿಚಾರ ಹೇಳುತ್ತಿದ್ದಂತೆಯೇ ಕಣ್ಣೀರು ಹಾಕಿದ್ದಾರೆ ಇಶಿತಾ.

ಕಲರ್ಸ್​ ಕನ್ನಡ ವಾಹಿನಿ ಈ ಬಗ್ಗೆ ಪ್ರೋಮೋ ಹಂಚಿಕೊಂಡಿದೆ. ಈ ಪ್ರೋಮೋ ನೋಡಿದ ಅನೇಕರು ಈ ಜೋಡಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಇಷ್ಟೊಂದು ಅದ್ಭುತ ಗಿಫ್ಟ್​ ಸಿಕ್ಕಿರುವುದಕ್ಕೆ ಅಭಿಮಾನಿಗಳು ಕೂಡ ಖುಷಿ ಪಟ್ಟಿದ್ದಾರೆ.

ಇದನ್ನೂ ಓದಿ: ‘ಲೋಕೇಶ್ ಮಗನಾದರೂ ಯಾರ ಮುಂದೆಯೂ ಕೈ ಒಡ್ಡದೇ ಚಾನ್ಸ್​ಗಾಗಿ 14 ವರ್ಷ ಸೈಕಲ್​ ಹೊಡೆದಿದ್ದೇನೆ’; ವೇದಿಕೆ ಮೇಲೆ ಅತ್ತ ಸೃಜನ್​

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!