AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಕಿರುತೆರೆ ಕದ ತಟ್ಟಿದ ನಟ ಗಣೇಶ್; ‘ಇಸ್ಮಾರ್ಟ್​’ ಜೋಡಿಗಳ ಜತೆ ಬರಲಿದ್ದಾರೆ ‘ಗೋಲ್ಡನ್​ ಸ್ಟಾರ್​’

‘ಸೂಪರ್ ಮಿನಿಟ್​’ ಹಾಗೂ ‘ಗೋಲ್ಡನ್ ಗ್ಯಾಂಗ್​’ ಹೆಸರಿನ ಕಿರುತೆರೆ ರಿಯಾಲಿಟಿ ಶೋಗಳನ್ನು ಗಣೇಶ್​ ನಿರೂಪಣೆ ಮಾಡಿದ್ದಾರೆ. ಈಗ ಅವರು ಮತ್ತೆ ಕಿರುತೆರೆಗೆ ಹಿಂದಿರುಗುತ್ತಿದ್ದಾರೆ.

ಮತ್ತೆ ಕಿರುತೆರೆ ಕದ ತಟ್ಟಿದ ನಟ ಗಣೇಶ್; ‘ಇಸ್ಮಾರ್ಟ್​’ ಜೋಡಿಗಳ ಜತೆ ಬರಲಿದ್ದಾರೆ ‘ಗೋಲ್ಡನ್​ ಸ್ಟಾರ್​’
ಗಣೇಶ್
TV9 Web
| Edited By: |

Updated on: Jun 28, 2022 | 9:28 PM

Share

‘ಗೋಲ್ಡನ್ ಸ್ಟಾರ್​’ ಗಣೇಶ್ (Golden Star Ganesh) ಅವರು ಮೊದಲು ಕಿರುತೆರೆಯಲ್ಲಿ ಮಿಂಚಿದವರು. ‘ನಮಸ್ಕಾರ.. ನಮಸ್ಕಾರ..’ ಎಂದು ಹೇಳಿ ಕಿರುತೆರೆ ಜಗತ್ತಿನಲ್ಲಿ ಫೇಮಸ್ ಆದರು. ‘ಮುಂಗಾರು ಮಳೆ’ (Mungaru Male) ಚಿತ್ರದಿಂದ ಅವರ ಲಕ್ ಬದಲಾಯಿತು. ಆದರೂ, ಅವರು ಕಿರುತೆರೆ ಜಗತ್ತಿನ ಜತೆಗಿನ ನಂಟನ್ನು ಕಳೆದುಕೊಂಡಿಲ್ಲ. ಹಲವು ರಿಯಾಲಿಟಿ ಶೋಗಳನ್ನು ಅವರು ನಿರೂಪಿಸಿ ಗಮನ ಸೆಳೆದಿದ್ದಾರೆ. ಈಗ ಅವರು ಮತ್ತೆ ಕಿರುತೆರೆಗೆ ಮರಳುತ್ತಿದ್ದಾರೆ. ಈ ವಿಚಾರ ಕೇಳಿ ಅವರ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

2003ರಲ್ಲಿ ಉದಯ ಟಿವಿಯಲ್ಲಿ ಪ್ರಸಾರವಾದ ‘ಕಾಮಿಡಿ ಟೈಮ್’ ಮೂಲಕ ಗಣೇಶ್​ಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತು. 2006ರಲ್ಲಿ ತೆರೆಗೆ ಬಂದ ‘ಚೆಲ್ಲಾಟ’ ಚಿತ್ರದಲ್ಲಿ ಮೊದಲ ಬಾರಿಗೆ ಪೂರ್ಣ ಪ್ರಮಾಣದ ಹೀರೋ ಆಗಿ ಕಾಣಿಸಿಕೊಂಡರು. ಅದೇ ವರ್ಷ ರಿಲೀಸ್ ಆದ ‘ಮುಂಗಾರು ಮಳೆ’ ಸಿನಿಮಾ ಗಣೇಶ್ ಅವರ ಅದೃಷ್ಟ ಬದಲಿಸಿತು. ನಂತರ ಹಲವು ಚಿತ್ರಗಳಲ್ಲಿ ಗಣೇಶ್ ನಟಿಸಿದರು. ಈ ಮಧ್ಯೆ ‘ಸೂಪರ್ ಮಿನಿಟ್​’ ಹಾಗೂ ‘ಗೋಲ್ಡನ್ ಗ್ಯಾಂಗ್​’ ಹೆಸರಿನ ಕಿರುತೆರೆ ರಿಯಾಲಿಟಿ ಶೋಗಳನ್ನು ಅವರು ನಿರೂಪಣೆ ಮಾಡಿದ್ದಾರೆ. ಈಗ ಅವರು ಮತ್ತೆ ಕಿರುತೆರೆಗೆ ಹಿಂದಿರುಗುತ್ತಿದ್ದಾರೆ.

ಇದನ್ನೂ ಓದಿ
Image
Ganesh Birthday: ಜನ್ಮದಿನದ ಸಲುವಾಗಿ ಅಭಿಮಾನಿಗಳಿಗೆ ಪತ್ರ ಬರೆದು ಮನವಿ ಮಾಡಿಕೊಂಡ ‘ಗೋಲ್ಡನ್​ ಸ್ಟಾರ್​’ ಗಣೇಶ್​
Image
‘ಮುಂಗಾರು ಮಳೆ’ ತಂಡದಲ್ಲೂ ಮನಸ್ತಾಪ ಆಗಿತ್ತು; ಸ್ನೇಹದ ಅಸಲಿ ವಿಚಾರ ತೆರೆದಿಟ್ಟ ಗಣೇಶ್​
Image
‘ಸಖತ್’​ ವೇದಿಕೆಯಲ್ಲಿ ಗಣೇಶ್​ ಕೋರಿಕೆ ಮೇರೆಗೆ ‘ಎಕ್ಸ್​ಕ್ಯೂಸ್​ಮೀ’ ಹಾಡು ಹೇಳಿದ ಪ್ರೇಮ್
Image
‘ಚಿತ್ರರಂಗ ಇರುವವರೆಗೂ ಪವರ್​ ಸ್ಟಾರ್​ ಅವರೇ ನಂ.1’; ಅಪ್ಪು ಬಗ್ಗೆ ಗಣೇಶ್​ ಅಭಿಮಾನದ ಮಾತು

ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗಲಿರುವ ‘ಇಸ್ಮಾರ್ಟ್​ ಜೋಡಿ’ ರಿಯಾಲಿಟಿ ಶೋಗೆ ಗಣೇಶ್ ನಿರೂಪಕರಾಗಲಿದ್ದಾರೆ. ಈ ಬಗ್ಗೆ ಸ್ಟಾರ್ ಸುವರ್ಣ ವಾಹಿನಿ ಪ್ರೋಮೋ ಹಂಚಿಕೊಂಡು ಮಾಹಿತಿ ನೀಡಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಕಾರ್ಯಕ್ರಮ ಯಾವ ರೀತಿ ಮೂಡಿಬರಲಿದೆ ಎನ್ನುವ ಕುತೂಹಲ ವೀಕ್ಷಕರಲ್ಲಿದೆ.

View this post on Instagram

A post shared by Star Suvarna (@starsuvarna)

ಪ್ರೋಮೋ ಹಂಚಿಕೊಂಡಿರುವ ಸ್ಟಾರ್ ಸುವರ್ಣ ವಾಹಿನಿ, ಅದಕ್ಕೆ ಉದ್ದನೆಯ ಕ್ಯಾಪ್ಶನ್ ನೀಡಿದೆ. ‘ಮೊದಲು ನಿಮ್ಮ ಗಣಪಂಗೆ ಪ್ರೀತಿ ಸಿಕ್ಕಿದ್ದು ಟಿವಿಲಿ ನಮಸ್ಕಾರ ಅಂದಾಗ. ಆಮೇಲೆ ಪ್ರೀತಿ ಮಾಡಿದಾಗ, ಪ್ರೀತಿ ಕೈ ಕೊಟ್ಟಾಗ, ಪ್ರೀತಿ ಸಿಕ್ಕಾಗ ಶಿಳ್ಳೆ ಚಪ್ಪಾಳೆ ಹೊಡೆದು ಮೆರೆಸಿ ಗೋಲ್ಡನ್ ಸ್ಟಾರ್ ಗಣೇಶ್ ಮಾಡಿದ್ದೀರಾ. ಅಂತಹ ಪ್ರೀತಿನ ಮತ್ತೆ ಸೆಲೆಬ್ರೇಟ್ ಮಾಡೋಕೆ ರೊಮ್ಯಾಂಟಿಕ್ ಜೋಡಿಗಳ ಜೊತೆ ಮನರಂಜನೆಯ ಮೋಡಿ ಮಾಡೋಕೆ ನಿಮ್ಮ ಮುಂದೆ ತರ್ತಿದೀನಿ ISMART ಜೋಡಿ’ ಎಂದು ಸ್ಟಾರ್​ ಸುವರ್ಣ ವಾಹಿನಿ ಬರೆದುಕೊಂಡಿದೆ.

ಇದನ್ನೂ ಓದಿ: ‘ಗಾಳಿಪಟ 2’ ಹುಡುಗರ ಎಲ್ಲ ಸಬ್ಜೆಕ್ಟ್​ ಫೇಲ್​; ಬಾಯಿ ಬಡಿದುಕೊಂಡ ಗಣೇಶ್​, ದಿಗಂತ್​, ಪವನ್​

Ganesh Birthday: ಜನ್ಮದಿನದ ಸಲುವಾಗಿ ಅಭಿಮಾನಿಗಳಿಗೆ ಪತ್ರ ಬರೆದು ಮನವಿ ಮಾಡಿಕೊಂಡ ‘ಗೋಲ್ಡನ್​ ಸ್ಟಾರ್​’ ಗಣೇಶ್​

Follow Us
ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದ ಮಾಟ, ಮಂತ್ರ: ರಾಜಣ್ಣ ಸ್ಫೋಟಕ ಹೇಳಿಕೆ
ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದ ಮಾಟ, ಮಂತ್ರ: ರಾಜಣ್ಣ ಸ್ಫೋಟಕ ಹೇಳಿಕೆ
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬಿಟ್‌ಕಾಯಿನ್ ಕೇಸ್: ಇಡಿ ದಾಳಿ ಹಿಂದೆ ರಾಜಕೀಯ ಲೆಕ್ಕಾಚಾರ!
ಬಿಟ್‌ಕಾಯಿನ್ ಕೇಸ್: ಇಡಿ ದಾಳಿ ಹಿಂದೆ ರಾಜಕೀಯ ಲೆಕ್ಕಾಚಾರ!
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?