AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಕ್ಕಳ ಎದುರೇ ತಂದೆ-ತಾಯಿಯ ಕೊಲ್ಲಲಾಯಿತು’; ಇಸ್ರೇಲ್​​ನಲ್ಲಿ ಕುಟುಂಬದವರನ್ನು ಕಳೆದುಕೊಂಡು ಕಿರುತೆರೆ ನಟಿ

‘ನಾನು ಮಧುರಾ ನಾಯ್ಕ್. ನಾನು ಯಹೂದಿ ಧರ್ಮಕ್ಕೆ ಸೇರಿದವಳು. ಭಾರತದಲ್ಲಿ ನಮ್ಮ ಸಂಖ್ಯೆ 3000 ಇರಬಹುದು ಅಷ್ಟೇ. ಅಕ್ಟೋಬರ್ 7ರಂದು ನಮ್ಮ ಕುಟುಂಬದವರನ್ನು ಕಳೆದುಕೊಂಡೆವು. ನನ್ನ ಕುಟುಂಬದ ಒಡಯಾ ಹಾಗೂ ಅವರ ಪತಿಯನ್ನು ಹತ್ಯೆ ಮಾಡಲಾಗಿದೆ’ ಎಂದು ಅವರು ಬೇಸರ ಹೊರಹಾಕಿದ್ದಾರೆ.

‘ಮಕ್ಕಳ ಎದುರೇ ತಂದೆ-ತಾಯಿಯ ಕೊಲ್ಲಲಾಯಿತು’; ಇಸ್ರೇಲ್​​ನಲ್ಲಿ ಕುಟುಂಬದವರನ್ನು ಕಳೆದುಕೊಂಡು ಕಿರುತೆರೆ ನಟಿ
ಮಧುರಾ ನಾಯ್ಕ್ ಹಾಗೂ ಕುಟುಂಬದವರು
ರಾಜೇಶ್ ದುಗ್ಗುಮನೆ
|

Updated on: Oct 12, 2023 | 10:42 AM

Share

ಹಲವು ಹಿಂದಿ ಧಾರಾವಾಹಿಗಳಲ್ಲಿ ನಟಿಸಿ ಜನಪ್ರಿಯತೆ ಪಡೆದ ಮಧುರಾ ನಾಯ್ಕ್ ಅವರು ಈಗ ನೋವಿನಲ್ಲಿದ್ದಾರೆ. ಸದ್ಯ ನಡೆಯುತ್ತಿರುವ ಇಸ್ರೇಲ್ (Israel)​ ಯುದ್ಧದಲ್ಲಿ ಅವರು ಕುಟುಂಬದವರನ್ನು ಕಳೆದುಕೊಂಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಬರೆದುಕೊಂಡಿದ್ದಾರೆ. ಮಕ್ಕಳ ಎದುರೇ ತಂದೆ-ತಾಯಿಯನ್ನು ಹತ್ಯೆ ಮಾಡಲಾಯಿತು ಎಂದು ಮಾಹಿತಿ ಹಂಚಿಕೊಂಡಿದ್ದಾರೆ ಮಧುರಾ. ಅಭಿಮಾನಿಗಳು ಅವರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡುತ್ತಿದ್ದಾರೆ.

‘ನಾನು ಮಧುರಾ ನಾಯ್ಕ್. ನಾನು ಯಹೂದಿ ಧರ್ಮಕ್ಕೆ ಸೇರಿದವಳು. ಭಾರತದಲ್ಲಿ ನಮ್ಮ ಸಂಖ್ಯೆ 3000 ಇರಬಹುದು ಅಷ್ಟೇ. ಅಕ್ಟೋಬರ್ 7ರಂದು ನಮ್ಮ ಕುಟುಂಬದವರನ್ನು ಕಳೆದುಕೊಂಡೆವು. ನನ್ನ ಕುಟುಂಬದ ಒಡಯಾ ಹಾಗೂ ಅವರ ಪತಿಯನ್ನು ಹತ್ಯೆ ಮಾಡಲಾಗಿದೆ. ಅವರ ಮಕ್ಕಳ ಎದುರೇ ಕೊಲೆ ಮಾಡಲಾಗಿದೆ. ಈ ನೋವನ್ನು ಶಬ್ದಗಳಲ್ಲಿ ಹೇಳಲು ಸಾಧ್ಯವೇ ಇಲ್ಲ. ಇಡೀ ಇಸ್ರೇಲ್ ದುಃಖದಲ್ಲಿದೆ. ಹಮಾಸರು ಇಸ್ರೇಲ್​ನ ಮಕ್ಕಳು, ಮಹಿಳೆಯರನ್ನು, ಅಲ್ಲಿನ ರಸ್ತೆ ಬೀದಿಗಳನ್ನು ಸುಡುತ್ತಿದ್ದಾರೆ. ದುರ್ಬಲರನ್ನೇ ಟಾರ್ಗೆಟ್ ಮಾಡಲಾಗುತ್ತಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

‘ನಾನು ನನ್ನ ಕುಟುಂಬದ ಫೋಟೋ ಪೋಸ್ಟ್ ಮಾಡಿದೆ. ನಾನು ಯಹೂದಿ ಎನ್ನುವ ಕಾರಣಕ್ಕೆ ಅವಮಾನ ಮಾಡಲಾಯಿತು.  ನನ್ನ ಭಾವನೆಗಳನ್ನು ನಾನು ವ್ಯಕ್ತಪಡಿಸಬೇಕಿದೆ. ನಾನು ಹಿಂಸೆಯನ್ನು ಬೆಂಬಲಿಸುವುದಿಲ್ಲ. ನನಗೆ ಅರಬ್ ಹಾಗೂ ಯಹೂದಿಗಳಲ್ಲಿ ಗೆಳೆಯರಿದ್ದಾರೆ. ಇಲ್ಲಿ ಸಾಯುತ್ತಿರುವವರು ಮುಗ್ಧರು’ ಎಂದಿದ್ದಾರೆ ಮಧುರಾ.

ಇದನ್ನೂ ಓದಿ: ಇಸ್ರೇಲ್​ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಮುಂದಾದ ಭಾರತ ಸರ್ಕಾರ:‘ಆಪರೇಷನ್ ಅಜಯ್’ ಘೋಷಣೆ

ಮಧುರಾ ಅವರು ಮಾಡೆಲ್. 2007ರಿಂದ ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ‘ಕಹೇ ನಾ ಕಹೇ’ ಹೆಸರಿನ ಹಿಂದಿ ಧಾರಾವಾಹಿ ಮೂಲಕ ಅವರು ವೃತ್ತಿ ಬದುಕು ಆರಂಭಿಸಿದರು. ಹಿಂದಿ ಸಿನಿಮಾಗಳಲ್ಲೂ ಅವರು ನಟಿಸಿ ಫೇಮಸ್ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ