AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಕ್ಕಳ ಎದುರೇ ತಂದೆ-ತಾಯಿಯ ಕೊಲ್ಲಲಾಯಿತು’; ಇಸ್ರೇಲ್​​ನಲ್ಲಿ ಕುಟುಂಬದವರನ್ನು ಕಳೆದುಕೊಂಡು ಕಿರುತೆರೆ ನಟಿ

‘ನಾನು ಮಧುರಾ ನಾಯ್ಕ್. ನಾನು ಯಹೂದಿ ಧರ್ಮಕ್ಕೆ ಸೇರಿದವಳು. ಭಾರತದಲ್ಲಿ ನಮ್ಮ ಸಂಖ್ಯೆ 3000 ಇರಬಹುದು ಅಷ್ಟೇ. ಅಕ್ಟೋಬರ್ 7ರಂದು ನಮ್ಮ ಕುಟುಂಬದವರನ್ನು ಕಳೆದುಕೊಂಡೆವು. ನನ್ನ ಕುಟುಂಬದ ಒಡಯಾ ಹಾಗೂ ಅವರ ಪತಿಯನ್ನು ಹತ್ಯೆ ಮಾಡಲಾಗಿದೆ’ ಎಂದು ಅವರು ಬೇಸರ ಹೊರಹಾಕಿದ್ದಾರೆ.

‘ಮಕ್ಕಳ ಎದುರೇ ತಂದೆ-ತಾಯಿಯ ಕೊಲ್ಲಲಾಯಿತು’; ಇಸ್ರೇಲ್​​ನಲ್ಲಿ ಕುಟುಂಬದವರನ್ನು ಕಳೆದುಕೊಂಡು ಕಿರುತೆರೆ ನಟಿ
ಮಧುರಾ ನಾಯ್ಕ್ ಹಾಗೂ ಕುಟುಂಬದವರು
ರಾಜೇಶ್ ದುಗ್ಗುಮನೆ
|

Updated on: Oct 12, 2023 | 10:42 AM

Share

ಹಲವು ಹಿಂದಿ ಧಾರಾವಾಹಿಗಳಲ್ಲಿ ನಟಿಸಿ ಜನಪ್ರಿಯತೆ ಪಡೆದ ಮಧುರಾ ನಾಯ್ಕ್ ಅವರು ಈಗ ನೋವಿನಲ್ಲಿದ್ದಾರೆ. ಸದ್ಯ ನಡೆಯುತ್ತಿರುವ ಇಸ್ರೇಲ್ (Israel)​ ಯುದ್ಧದಲ್ಲಿ ಅವರು ಕುಟುಂಬದವರನ್ನು ಕಳೆದುಕೊಂಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಬರೆದುಕೊಂಡಿದ್ದಾರೆ. ಮಕ್ಕಳ ಎದುರೇ ತಂದೆ-ತಾಯಿಯನ್ನು ಹತ್ಯೆ ಮಾಡಲಾಯಿತು ಎಂದು ಮಾಹಿತಿ ಹಂಚಿಕೊಂಡಿದ್ದಾರೆ ಮಧುರಾ. ಅಭಿಮಾನಿಗಳು ಅವರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡುತ್ತಿದ್ದಾರೆ.

‘ನಾನು ಮಧುರಾ ನಾಯ್ಕ್. ನಾನು ಯಹೂದಿ ಧರ್ಮಕ್ಕೆ ಸೇರಿದವಳು. ಭಾರತದಲ್ಲಿ ನಮ್ಮ ಸಂಖ್ಯೆ 3000 ಇರಬಹುದು ಅಷ್ಟೇ. ಅಕ್ಟೋಬರ್ 7ರಂದು ನಮ್ಮ ಕುಟುಂಬದವರನ್ನು ಕಳೆದುಕೊಂಡೆವು. ನನ್ನ ಕುಟುಂಬದ ಒಡಯಾ ಹಾಗೂ ಅವರ ಪತಿಯನ್ನು ಹತ್ಯೆ ಮಾಡಲಾಗಿದೆ. ಅವರ ಮಕ್ಕಳ ಎದುರೇ ಕೊಲೆ ಮಾಡಲಾಗಿದೆ. ಈ ನೋವನ್ನು ಶಬ್ದಗಳಲ್ಲಿ ಹೇಳಲು ಸಾಧ್ಯವೇ ಇಲ್ಲ. ಇಡೀ ಇಸ್ರೇಲ್ ದುಃಖದಲ್ಲಿದೆ. ಹಮಾಸರು ಇಸ್ರೇಲ್​ನ ಮಕ್ಕಳು, ಮಹಿಳೆಯರನ್ನು, ಅಲ್ಲಿನ ರಸ್ತೆ ಬೀದಿಗಳನ್ನು ಸುಡುತ್ತಿದ್ದಾರೆ. ದುರ್ಬಲರನ್ನೇ ಟಾರ್ಗೆಟ್ ಮಾಡಲಾಗುತ್ತಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

‘ನಾನು ನನ್ನ ಕುಟುಂಬದ ಫೋಟೋ ಪೋಸ್ಟ್ ಮಾಡಿದೆ. ನಾನು ಯಹೂದಿ ಎನ್ನುವ ಕಾರಣಕ್ಕೆ ಅವಮಾನ ಮಾಡಲಾಯಿತು.  ನನ್ನ ಭಾವನೆಗಳನ್ನು ನಾನು ವ್ಯಕ್ತಪಡಿಸಬೇಕಿದೆ. ನಾನು ಹಿಂಸೆಯನ್ನು ಬೆಂಬಲಿಸುವುದಿಲ್ಲ. ನನಗೆ ಅರಬ್ ಹಾಗೂ ಯಹೂದಿಗಳಲ್ಲಿ ಗೆಳೆಯರಿದ್ದಾರೆ. ಇಲ್ಲಿ ಸಾಯುತ್ತಿರುವವರು ಮುಗ್ಧರು’ ಎಂದಿದ್ದಾರೆ ಮಧುರಾ.

ಇದನ್ನೂ ಓದಿ: ಇಸ್ರೇಲ್​ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಮುಂದಾದ ಭಾರತ ಸರ್ಕಾರ:‘ಆಪರೇಷನ್ ಅಜಯ್’ ಘೋಷಣೆ

ಮಧುರಾ ಅವರು ಮಾಡೆಲ್. 2007ರಿಂದ ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ‘ಕಹೇ ನಾ ಕಹೇ’ ಹೆಸರಿನ ಹಿಂದಿ ಧಾರಾವಾಹಿ ಮೂಲಕ ಅವರು ವೃತ್ತಿ ಬದುಕು ಆರಂಭಿಸಿದರು. ಹಿಂದಿ ಸಿನಿಮಾಗಳಲ್ಲೂ ಅವರು ನಟಿಸಿ ಫೇಮಸ್ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ