‘ಜಗದ್ಧಾತ್ರೀ’ ಎಂಟ್ರಿಗೆ ಸಿದ್ಧವಾಯ್ತು ವೇದಿಕೆ; ಮುಗಿಯುತ್ತಿರುವ ಧಾರಾವಾಹಿ ಯಾವುದು?

ಜೀ ಕನ್ನಡದಲ್ಲಿ ಬಹುನಿರೀಕ್ಷಿತ 'ಜಗದ್ಧಾತ್ರೀ' ಧಾರಾವಾಹಿ ಪ್ರಸಾರಕ್ಕೆ ಸಜ್ಜಾಗಿದೆ. ಮೋಕ್ಷಿತಾ ಪೈ ಪ್ರಮುಖ ಪಾತ್ರದಲ್ಲಿ ನಟಿಸುವುದು ಬಹುತೇಕ ಖಚಿತವಾಗಿದ್ದು, ಪ್ರೋಮೋದಲ್ಲಿ ಅವರ ಎರಡು ವಿಭಿನ್ನ ಶೇಡ್​​ಗಳನ್ನು ತೋರಿಸಲಾಗಿದೆ. 'ಜಗದ್ಧಾತ್ರೀ' ಆಗಮನಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ಹೊಸ ಧಾರಾವಾಹಿಗೆ ದಾರಿ ಮಾಡಿಕೊಡಲು 'ಅಮೃತಧಾರೆ' ಧಾರಾವಾಹಿ ಕೊನೆಗೊಳ್ಳುವ ಸಾಧ್ಯತೆ ಇದೆ ಎಂಬ ಚರ್ಚೆ ಶುರುವಾಗಿದೆ.

‘ಜಗದ್ಧಾತ್ರೀ’ ಎಂಟ್ರಿಗೆ ಸಿದ್ಧವಾಯ್ತು ವೇದಿಕೆ; ಮುಗಿಯುತ್ತಿರುವ ಧಾರಾವಾಹಿ ಯಾವುದು?
ಜಗದ್ಧಾತ್ರೀ
Edited By:

Updated on: Apr 29, 2026 | 8:00 AM

‘ಜಗದ್ಧಾತ್ರೀ’ ಧಾರಾವಾಹಿ ಬರಲಿದೆ ಎಂಬುದನ್ನು ಜೀ ಕನ್ನಡ ವಾಹಿನಿ ಈ ಮೊದಲೇ ಘೋಷಣೆ ಮಾಡಿದ್ದು ಎಲ್ಲರಿಗೂ ಗೊತ್ತೇ ಇದೆ. ಈಗ ಧಾರಾವಾಹಿಯ ಹೊಸ ಪ್ರೋಮೋ ಒಂದು ರಿಲೀಸ್ ಆಗಿದೆ. ಇದರಲ್ಲಿ ‘ಜಗದ್ಧಾತ್ರೀ’ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಎಂಬುದನ್ನು ತೋರಿಸಲಾಗಿದೆ. ಜಗದ್ಧಾತ್ರೀ ಕೇವಲ ಮನೆ ಮಗಳಲ್ಲ, ಆಕೆ ಲೋಕವನ್ನು ಕಾಯುವವಳೂ ಹೌದು ಎಂಬುದನ್ನು ತೋರಿಸಿರಿವುದನ್ನು ನೀವು ಕಾಣಬಹುದು.

‘ಜಗದ್ಧಾತ್ರೀ’ ಧಾರಾವಾಹಿ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಮೊದಲು ಪ್ರೋಮೋ ಒಂದು ರಿಲೀಸ್ ಆಗಿತ್ತು. ಈಗ ಧಾರಾವಾಹಿಯ ಎರಡನೇ ಪ್ರೋಮೋ ರಿಲೀಸ್ ಆಗಿದೆ. ಈ ಪ್ರೋಮೋದಲ್ಲಿ ನಟಿ ಯಾರು ಎಂಬುದರ ಸೂಚನೆಯನ್ನು ಕೊಡಲಾಗಿದೆ.

‘ಜಗದ್ಧಾತ್ರೀ’ ಧಾರಾವಾಹಿಯ ಪ್ರೋಮೋದಲ್ಲಿ ಕಥಾ ನಾಯಕಿ ಮನೆಯಲ್ಲಿ ಚಹಾ ಮಾಡಿಕೊಡುತ್ತಾ ಇರುತ್ತಾಳೆ. ಆ ಸಂದರ್ಭಕ್ಕೆ ಸರಿಯಾಗಿ ಕಿಡ್ನ್ಯಾಪ್ ಆಗಿದೆ ಎಂಬ ಸುದ್ದಿ ಬರುತ್ತದೆ. ಆ ಸಮಯಕ್ಕೆ ಸರಿಯಾಗಿ ಆಕೆ ಹೊರಡುತ್ತಾಳೆ ಮತ್ತು ಹೋಗಿ ಬಾಲಕಿಯನ್ನು ರಕ್ಷಣೆ ಮಾಡುತ್ತಾಳೆ . ಈ ರೀತಿಯಲ್ಲಿ ಧಾರಾವಾಹಿ ಪ್ರೋಮೋದಲ್ಲಿ ಮೂಡಿ ಬಂದಿದೆ.

ಈ ಧಾರಾವಾಹಿಯಲ್ಲಿ ನಟಿಸೋದು ಮೋಕ್ಷಿತಾ ಪೈ ಎಂಬುದು ಬಹುತೇಕ ಸ್ಪಷ್ಟವಾಗಿದೆ. ಈಗ ರಿಲೀಸ್ ಆಗಿರುವ ಪ್ರೋಮೋ ನೋಡಿದ ಮೋಕ್ಷಿತಾ ಅಭಿಮಾನಿಗಳು ತುಂಬಾನೇ ಖುಷಿಯಾಗಿದ್ದಾರೆ. ಅವರ ಮುಖವನ್ನು ತೋರಿಸಲು ಅಭಿಮಾನಿಗಳು ಕಾದಿದ್ದಾರೆ.

ಮೋಕ್ಷಿತಾ ಪೈ ಅವರು ಈ ಮೊದಲು ಜೀ ಕನ್ನಡದಲ್ಲಿ ‘ಪಾರು’ ಧಾರಾವಾಹಿಯಲ್ಲಿ ನಟಿಸಿದ್ದರು. ಆ ಬಳಿಕ ಕಲರ್ಸ್ ಕನ್ನಡದ ಬಿಗ್ ಬಾಸ್ ಶೋಗೆ ಆಗಮಿಸಿದರು. ಈಗ ಅವರು ಮನೆಗೆ ಮರಳುತ್ತಿದ್ದಾರೆ. ಈ ಧಾರಾವಾಹಿ ಯಾವಾಗ ಪ್ರಸಾರ ಕಾಣುತ್ತದೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: ಕಳೆದ ಸೀಸನ್​ ಅಂತೆಯೇ ನಡೆದುಕೊಳ್ಳುತ್ತಿದ್ದಾರೆ ಮೋಕ್ಷಿತಾ ಪೈ 

ಯಾವ ಧಾರಾವಾಹಿ ಪೂರ್ಣಗೊಳ್ಳುತ್ತದೆ ಎಂಬ ಬಗ್ಗೆ ಚರ್ಚೆ ನಡೆದಿದೆ. ಇದಕ್ಕೂ ಉತ್ತರ ಸಿಕ್ಕಿದೆ. ‘ಅಮೃತಧಾರೆ’ ಧಾರಾವಾಹಿ ಕೊನೆಗೊಳ್ಳಬಹುದು ಎಂದು ಹೇಳಲಾಗುತ್ತಾ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
Follow Us