AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಗದ್ಧಾತ್ರಿ’ ಧಾರಾವಾಹಿಗೆ ಸ್ಟಾರ್ ಹೀರೋನ ಎಂಟ್ರಿ?

ಕನ್ನಡದ ಹೊಸ ಧಾರಾವಾಹಿ 'ಜಗದ್ಧಾತ್ರಿ'ಗೆ ಖ್ಯಾತ ನಟ ವಿಜಯ್ ಸೂರ್ಯ ನಾಯಕನಾಗಿ ಎಂಟ್ರಿ ಕೊಟ್ಟಿದ್ದಾರೆ. 'ಪಾರು' ಖ್ಯಾತಿಯ ಮೋಕ್ಷಿತಾ ಪೈ ಜೊತೆ ಅವರ ಜೋಡಿ ಕಿರುತೆರೆ ವೀಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿದೆ. 'ಅಗ್ನಿಸಾಕ್ಷಿ' ಖ್ಯಾತಿಯ ವಿಜಯ್ ಸೂರ್ಯ ಆಗಮನದಿಂದ ಧಾರಾವಾಹಿಯ ಮೇಲಿನ ನಿರೀಕ್ಷೆಗಳು ಹೆಚ್ಚಿದ್ದು, ಈ ಹೊಸ ಕಾಂಬಿನೇಷನ್ ಟಿಆರ್‌ಪಿ ದಾಖಲೆ ಬರೆಯುವ ಸಾಧ್ಯತೆ ಇದೆ

‘ಜಗದ್ಧಾತ್ರಿ’ ಧಾರಾವಾಹಿಗೆ ಸ್ಟಾರ್ ಹೀರೋನ ಎಂಟ್ರಿ?
ಜಗದ್ಧಾತ್ರಿ
ರಾಜೇಶ್ ದುಗ್ಗುಮನೆ
|

Updated on: Jun 03, 2026 | 8:10 AM

Share

ಕನ್ನಡ ಕಿರುತೆರೆಯಲ್ಲಿ ಸದಾ ಹೊಸ ಬಗೆಯ ಕಥೆಗಳಿಗೆ ಭಾರಿ ಬೇಡಿಕೆ ಇರುತ್ತದೆ. ಇತ್ತೀಚೆಗಷ್ಟೇ ‘ಪಾರು’ ಧಾರಾವಾಹಿ ಖ್ಯಾತಿಯ ಮೋಕ್ಷಿತಾ ಪೈ ಮುಖ್ಯ ಭೂಮಿಕೆಯಲ್ಲಿ ನಟಿಸಲಿರುವ ‘ಜಗದ್ಧಾತ್ರಿ’ ಎಂಬ ಹೊಸ ಸೀರಿಯಲ್ ಅನೌನ್ಸ್ ಆಗಿ ಕಿರುತೆರೆ ವೀಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿತ್ತು. ಈಗ ಈ ಬಹುನಿರೀಕ್ಷಿತ ಪ್ರೊಜೆಕ್ಟ್‌ನಿಂದ ಮತ್ತೊಂದು ದೊಡ್ಡ ಸುದ್ದಿ ಹೊರ ಬಿದ್ದಿದೆ. ಈ ಧಾರಾವಾಹಿಗೆ ನಾಯಕನಾಗಿ ಹ್ಯಾಂಡ್ಸಮ್ ಸ್ಟಾರ್ ವಿಜಯ್ ಸೂರ್ಯ ಎಂಟ್ರಿ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಾ ಇದೆ.

ಮೆಗಾ ಹಿಟ್ ‘ಅಗ್ನಿಸಾಕ್ಷಿ’ ಧಾರಾವಾಹಿಯ ಸಿದ್ಧಾರ್ಥ್ ಪಾತ್ರದ ಮೂಲಕ ಇಡೀ ಕರ್ನಾಟಕದ ಮನೆಮಾತಾಗಿದ್ದ ವಿಜಯ್ ಸೂರ್ಯ, ತಮ್ಮ ರೊಮ್ಯಾಂಟಿಕ್ ಲುಕ್ ಹಾಗೂ ನಟನೆಯಿಂದಲೇ ಅಪಾರ ಮಹಿಳಾ ಅಭಿಮಾನಿಗಳನ್ನು ಗಳಿಸಿಕೊಂಡವರು. ಇದೀಗ ಅವರು ‘ಜಗದ್ಧಾತ್ರಿ’ ತಂಡವನ್ನು ಸೇರಿಕೊಂಡಿರುವುದು ಸೀರಿಯಲ್ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.

ಮೂಲಗಳ ಪ್ರಕಾರ, ಈ ಧಾರಾವಾಹಿಯಲ್ಲಿ ವಿಜಯ್ ಸೂರ್ಯ ಮತ್ತು ಮೋಕ್ಷಿತಾ ಪೈ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಇವರಿಬ್ಬರ ಫ್ರೆಶ್ ಕಾಂಬಿನೇಷನ್ ಪರದೆ ಮೇಲೆ ಮೋಡಿ ಮಾಡಲು ಸಜ್ಜಾಗಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಕೌಟುಂಬಿಕ ಡ್ರಾಮಾದಲ್ಲಿ ಇಬ್ಬರ ಪಾತ್ರಗಳೂ ಸಖತ್ ಪವರ್‌ಫುಲ್ ಆಗಿರಲಿವೆ ಎನ್ನಲಾಗಿದೆ.

ಇದನ್ನೂ ಓದಿ: ಹೊಸ ಸೀರಿಯಲ್ ಮೂಲಕ ಕಿರುತೆರೆಗೆ ಕವಿತಾ ಗೌಡ ಕಂಬ್ಯಾಕ್?

ಈಗಾಗಲೇ ಸೀರಿಯಲ್‌ನ ಪ್ರಿ-ಪ್ರೊಡಕ್ಷನ್ ಕೆಲಸಗಳು ಮುಗಿದಿದ್ದು, ಶೀಘ್ರದಲ್ಲೇ ಅಧಿಕೃತ ಟೆಲಿಕಾಸ್ಟ್ ದಿನಾಂಕ ಹೊರಬೀಳಲಿದೆ. ‘ಅಗ್ನಿಸಾಕ್ಷಿ’ ಬಳಿಕ ವಿಜಯ್ ಸೂರ್ಯ ಹಾಗೂ ‘ಪಾರು’ ನಂತರ ಮೋಕ್ಷಿತಾ ಪೈ ಅವರನ್ನು ಮತ್ತೆ ವಿಭಿನ್ನ ಲುಕ್‌ನಲ್ಲಿ ನೋಡಲು ಕಾಯುತ್ತಿದ್ದ ಕಿರುತೆರೆ ಪ್ರೇಕ್ಷಕರಿಗೆ ಈ ಸುದ್ದಿ ನಿಜಕ್ಕೂ ದೊಡ್ಡ ಹಬ್ಬದ ಸಂಭ್ರಮ ತಂದಿದೆ. ಇವರಿಬ್ಬರ ಕೆಮಿಸ್ಟ್ರಿ ಹಾಗೂ ಈ ‘ಜಗದ್ಧಾತ್ರಿ’ಯ ಹೊಸ ಜರ್ನಿ ಟಿಆರ್‌ಪಿ ರೇಟಿಂಗ್ಸ್‌ನಲ್ಲಿ ಹೊಸ ದಾಖಲೆ ಬರೆಯುತ್ತಾ ಎಂಬುದನ್ನು ಕಾದುನೋಡಬೇಕಿದೆ. ಈ ಧಾರಾವಾಹಿಯಲ್ಲಿ ಕವಿತಾ ಗೌಡ ಕೂಡ ಇದ್ದಾರೆ ಎಂದು ಹೇಳಲಾಗುತ್ತಾ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More