ಜಗದೀಶ್ ಎದುರು ಮಾತಾಡಲು ಸಾಧ್ಯವಾಗದೇ ಸೋತ ಚೈತ್ರಾ ಕುಂದಾಪುರ; ಆಗಿದ್ದೇನು?

|

Updated on: Oct 09, 2024 | 10:32 PM

ಮಾತಿನ ಬಲದಿಂದ ಚೈತ್ರಾ ಕುಂದಾಪುರ ಅವರು ಇನ್ನುಳಿದ ಸ್ಪರ್ಧಿಗಳನ್ನು ಎದುರು ಹಾಕಿಕೊಳ್ಳುತ್ತಿದ್ದರು. ಆದರೆ ಅವರಿಗೆ ಜಗದೀಶ್​ ಟಕ್ಕರ್​ ಕೊಟ್ಟಿದ್ದಾರೆ. ತಮಗೆ ಸಲಹೆ ನೀಡಲು ಬಂದ ಚೈತ್ರಾಗೆ ಜಗದೀಶ್​ ತಿರುಗೇಟು ನೀಡಿದ್ದಾರೆ. ಇದರಿಂದಾಗಿ ಚೈತ್ರಾ ಮಾತು ನಿಲ್ಲಿಸುವುದು ಅನಿವಾರ್ಯ ಆಯಿತು. ಎರಡನೇ ವಾರದಲ್ಲಿ ಜಗದೀಶ್​ ಕೂಡ ನರಕದಲ್ಲಿ ವಾಸಿಸುತ್ತಿದ್ದಾರೆ.

ಜಗದೀಶ್ ಎದುರು ಮಾತಾಡಲು ಸಾಧ್ಯವಾಗದೇ ಸೋತ ಚೈತ್ರಾ ಕುಂದಾಪುರ; ಆಗಿದ್ದೇನು?
ಚೈತ್ರಾ ಕುಂದಾಪುರ, ಲಾಯರ್​ ಜಗದೀಶ್​
Follow us on

ಮಾತಿನಿಂದಲೇ ಗುರುತಿಸಿಕೊಂಡವರು ಚೈತ್ರಾ ಕುಂದಾಪುರ. ಈಗ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುತ್ತಿದ್ದಾರೆ. ಮಾತನಾಡಲು ಬರುತ್ತದೆ ಎಂಬ ಕಾರಣದಿಂದ ಚೈತ್ರಾ ಅವರು ಕೆಲವೊಮ್ಮೆ ಅನವಶ್ಯಕವಾಗಿ ಮಾತನಾಡಲು ಬರುತ್ತಾರೆ. ಇದರಿಂದ ಕೆಲವರಿಗೆ ಕಿರಿಕಿರಿ ಆಗಿದೆ. ಬಿಗ್​ ಬಾಸ್​ ಮನೆಯಲ್ಲಿ ಈ ಬಗ್ಗೆ ಈಗಾಗಲೇ ಚರ್ಚೆ ಆಗಿದೆ. ಬುಧವಾರದ (ಅಕ್ಟೋಬರ್​ 9) ಎಪಿಸೋಡ್​ನಲ್ಲಿ ಜಗದೀಶ್​ ಮತ್ತು ಚೈತ್ರಾ ಕುಂದಾಪುರ ನಡುವೆ ಮಾತಿನ ಚಕಮಕಿ ನಡೆಯಿತು. ಆದರೆ ಜಗದೀಶ್​ ಎದುರು ಮಾತನಾಡಲು ಸಾಧ್ಯವಾಗಲೇ ಚೈತ್ರಾ ಮಾತು ನಿಲ್ಲಿಸಿದರು.

ಸ್ವರ್ಗ ನಿವಾಸಿಗಳು ಮತ್ತು ನರಕವಾಸಿಗಳ ನಡುವೆ ಟಾಸ್ಕ್​ ನಡೆಯಿತು. ಮೊದಲ ಟಾಸ್ಕ್​ನಲ್ಲಿ ನರಕವಾಸಿಗಳು ಗೆದ್ದರು. ಈ ವೇಳೆ ನರಕವಾಸಿಗಳಲ್ಲಿ ಒಬ್ಬರಾದ ಜಗದೀಶ್ ಅವರು ಸಂಭ್ರಮಾಚರಣೆ ಮಾಡಿದರು. ‘ಈ ಸಲ ಕಮ್​ ನಮ್ದೇ’ ಎಂದು ಕೂಗಿದರು. ಆದರೆ ‘ಆ ಮಾತನ್ನು ಮಾತ್ರ ಹೇಳಬೇಡಿ’ ಎಂದು ಚೈತ್ರಾ ಕುಂದಾಪುರ ಹೇಳಿದರು. ಇದರಿಂದ ಜಗದೀಶ್​ ಅವರಿಗೆ ಕೋಪ ಬಂತು.

ಪ್ರತಿ ಬಾರಿ ‘ಈ ಸಲ ಕಪ್​ ನಮ್ದೇ’ ಎಂದಾಗಲೂ ಆರ್​ಸಿಬಿ ತಂಡಕ್ಕೆ ನಿರಾಸೆ ಆಗಿದ್ದು ಗೊತ್ತೇ ಇದೆ. ಅದೇ ಕಾರಣಕ್ಕಾಗಿ ಚೈತ್ರಾ ಕುಂದಾಪುರ ಅವರು ‘ಆ ಮಾತು ಹೇಳಬೇಡಿ’ ಎಂದು ಜಗದೀಶ್​ಗೆ ಹೇಳಿರಬಹುದು. ಆದರೆ ಅವರ ಸಲಹೆಯನ್ನು ಜಗದೀಶ್​ ಪಾಸಿಟಿವ್​ ಆಗಿ ತೆಗೆದುಕೊಳ್ಳಲಿಲ್ಲ. ಕೂಡಲೇ ಅವರು ಜಗಳಕ್ಕೆ ನಿಂತರು. ಜಗದೀಶ್​ ಅವರು ತಿರುಗೇಟು ನೀಡಿದ ರಭಸಕ್ಕೆ ಚೈತ್ರಾ ಸೈಲೆಂಟ್​ ಆದರು.

ಇದನ್ನೂ ಓದಿ: ‘ಏನೇನೋ ಬೊಗಳುತ್ತಾನೆ’: ಪದೇಪದೇ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ

‘ನೀವೇನು ನನ್ನ ಸಲಹೆಗಾರರ? ನಿಮ್ಮ ಕೆಲಸ ನೀವು ನೋಡಿಕೊಳ್ಳಿ. ನಾನು ಹೇಗೆ ಮಾತನಾಡಬೇಕು ಅಂತ ನೀವು ಹೇಳಬೇಡಿ’ ಎಂದು ಜಗದೀಶ್​ ಅವರು ಚೈತ್ರಾಗೆ ಖಡಕ್​ ಆಗಿ ಹೇಳಿದ್ದಾರೆ. ‘ತಪ್ಪಾಯ್ತು ಕ್ಷಮಿಸಿ’ ಎಂದು ಚೈತ್ರಾ ಅವರು ಮಾತು ನಿಲ್ಲಿಸಿದರು. ಈ ಹಿಂದೆ ಬೇರೆ ಬೇರೆ ಸ್ಪರ್ಧಿಗಳ ಜೊತೆಯಲ್ಲಿ ಕೂಡ ಚೈತ್ರಾ ಜಗಳ ಮಾಡಿದ್ದರು. ಆದರೆ ಅವರ ಬಾಯಿ ಮುಚ್ಚಿಸಲು ಬಹುತೇಕರಿಗೆ ಸಾಧ್ಯವಾಗಿರಲಿಲ್ಲ. ಕಡೆಗೂ ಜಗದೀಶ್​ ಆ ಕೆಲಸ ಮಾಡಿದ್ದಾರೆ. ಇದೆಲ್ಲವೂ ಟಾಸ್ಕ್​ ನಡುವೆ ನಡೆದ ಚಕಮಕಿ ಆದ್ದರಿಂದ ವಾದ-ಪ್ರತಿವಾದ ಹೆಚ್ಚು ಮುಂದುವರಿಯಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.