Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಜಿತ್, ಜಗದೀಶ್ ಬಿಗ್ ಬಾಸ್​ನಿಂದ ಹೊರಕ್ಕೆ; ಇವರು ಹೋಗಿದ್ದೆಲ್ಲಿಗೆ?

ಬಿಗ್ ಬಾಸ್​ನಿಂದ ರಂಜಿತ್ ಹಾಗೂ ಜಗದೀಶ್​ ಹೊರ ಬಂದಿದ್ದಾರೆ . ‘ಬಿಗ್ ಬಾಸ್’ನಲ್ಲಿ ಈ ಘಟನೆಗಳು ನಡೆದಿರೋದು ಮಂಗಳವಾರ. ಇದನ್ನು ವೀಕ್ಷಕರಿಗೆ ಈಗ ತೋರಿಸಲಾಗುತ್ತಿದೆ. ಸದ್ಯ ಇವರನ್ನು ಎಲ್ಲಿಡಲಾಗಿದೆ, ಅವರು ಮರಳಿ ದೊಡ್ಮನೆಗೆ ಬರುತ್ತಾರಾ ಎನ್ನುವ ಕುತೂಹಲ ಇದೆ.

ರಂಜಿತ್, ಜಗದೀಶ್ ಬಿಗ್ ಬಾಸ್​ನಿಂದ ಹೊರಕ್ಕೆ; ಇವರು ಹೋಗಿದ್ದೆಲ್ಲಿಗೆ?
ಬಿಗ್ ಬಾಸ್
Follow us
ರಾಜೇಶ್ ದುಗ್ಗುಮನೆ
|

Updated on: Oct 18, 2024 | 6:50 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಶಾಕಿಂಗ್ ಬೆಳವಣಿಗೆ ನಡೆದಿದೆ. ಸ್ಪರ್ಧಿಗಳೆಲ್ಲರೂ ಜಗದೀಶ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದರಿಂದ ಜಗದೀಶ್ ಕೋಪಗೊಂಡಿದ್ದು ಮಹಿಳಾ ಸ್ಪರ್ಧಿಗಳ ವಿರುದ್ಧ ಅಶ್ಲೀಲ ಪದಗಳ ಬಳಕೆ ಮಾಡಿದ್ದಾರೆ. ಹಂಸಾ ವಿರುದ್ಧವಂತೂ ಬಳಸಿದ ಪದ ಮಿತಿಮೀರಿದೆ. ಈ ಮಧ್ಯೆ ರಂಜಿತ್ ಅವರು ಜಗದೀಶ್ ಅವರನ್ನು ತಳ್ಳಿದ್ದಾರೆ. ಇದನ್ನು ಗಮನಿಸಿದ ಬಿಗ್ ಬಾಸ್ ಬಾಗಿಲು ತೆಗೆಯೋ ಆದೇಶ ನೀಡಿದ್ದಾರೆ. ರಂಜಿತ್ ಹಾಗೂ ಜಗದೀಶ್​ನ ಹೊರಕ್ಕೆ ಕಳಿಸೋ ಆದೇಶ ಕೊಟ್ಟಿದ್ದಾರೆ.

ಬಿಗ್ ಬಾಸ್​ನಿಂದ ಹೊರ ಬಂದಿರೋ ಸ್ಪರ್ಧಿಗಳು ಈವರೆಗೆ ಮನೆಗೆ ಬಂದಿಲ್ಲ. ಹೀಗಾಗಿ, ಕುತೂಹಲ ಮೂಡೋದು ಸಹಜ. ಅವರು ಹೋಗಿದ್ದು ಎಲ್ಲಿಗೆ ಎನ್ನುವ ಪ್ರಶ್ನೆ ಎದುರಾಗುತ್ತದೆ. ಕೆಲವು ವರದಿಗಳ ಪ್ರಕಾರ ಅವರನ್ನು ಸೀಕ್ರೆಟ್ ರೂಂನಲ್ಲಿ ಇಡಲಾಗಿದೆಯಂತೆ. ಸಾಕಷ್ಟು ಸಿಟ್ಟಲ್ಲಿರೋ ಇವರನ್ನು ಕೂಲ್ ಮಾಡಲು ಇದುವೇ ಸರಿಯಾದ ಮಾರ್ಗ ಎಂದು ಪರಿಗಣಿಸಲಾಗಿದೆ.

‘ಬಿಗ್ ಬಾಸ್’ನಲ್ಲಿ ಈ ಘಟನೆಗಳು ನಡೆದಿರೋದು ಮಂಗಳವಾರ. ಇದನ್ನು ವೀಕ್ಷಕರಿಗೆ ಈಗ ತೋರಿಸಲಾಗುತ್ತಿದೆ. ಸದ್ಯ ಇವರನ್ನು ಎಲ್ಲಿಡಲಾಗಿದೆ, ಅವರು ಮರಳಿ ದೊಡ್ಮನೆಗೆ ಬರುತ್ತಾರಾ ಎನ್ನುವ ಕುತೂಹಲ ಇದೆ.

ರಂಜಿತ್ ಅವರ ಸ್ಟ್ರಾಂಗ್ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಹೀಗಾಗಿ, ಅವರು ದೊಡ್ಮನೆ ಆಟಕ್ಕೆ ಬೇಕೆ ಬೇಕು. ಇನ್ನು, ಜಗದೀಶ್ ವಿಚಾರಕ್ಕೆ ಬರೋದಾದರೆ ಅವರು ಒಂದು ನಿಮಿಷ ಸೈಲೆಂಟ್ ಆಗಿ ಇದ್ದಿದ್ದೇ ಇಲ್ಲ. ಅವರು ಎಲ್ಲರ ವಿರುದ್ಧ ಧ್ವನಿ ಎತ್ತುತ್ತಾರೆ. ಇದನ್ನು ಸಹಿಸಿದ ಮಂಜು ಹಾಗೂ ಮೊದಲಾದವರು ಜಗದೀಶ್ ಅವರನ್ನು ಪ್ರವೋಕ್ ಮಾಡಿದ್ದಾರೆ. ಜಗದೀಶ್ ಅವರಿಗೆ ಬೇಗ ಸಿಟ್ಟು ಬರೋದ್ರಿಂದ ಅವರು ಮತ್ತಷ್ಟು ಕುಪಿತಗೊಳ್ಳುತ್ತಿದ್ದಾರೆ.

ಇದನ್ನೂ ಓದಿ: ‘ಜಗದೀಶ್, ರಂಜಿತ್ ಈ ಕೂಡಲೇ ಮನೆಯಿಂದ ಹೊರಗೆ ಬನ್ನಿ’: ಬಿಗ್ ಬಾಸ್ ಆದೇಶ

ಹಂಸಾ ಹಾಗೂ ಮೊದಲಾದ ಸ್ಪರ್ಧಿಗಳಿಗೆ ಅವಾಚ್ಯ ಶಬ್ದ ಬಳಕೆ ಮಾಡಿದ್ದನ್ನು ಇಡೀ ಮನೆ ಖಂಡಿಸಿದೆ. ಇದನ್ನು ಬಿಗ್ ಬಾಸ್ ಕೂಡ ಸಹಿಸಿಲ್ಲ. ರಂಜಿತ್ ಅವರು ಜಗದೀಶ್​ನ ತಳ್ಳಿದ್ದರು. ಈ ಕಾರಣದಿಂದ ಸದ್ಯಕ್ಕೆ ಇವರನ್ನು ಹೊರಕ್ಕೆ ಕಳಿಸುವ ಆದೇಶ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ