AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಜಿತ್, ಜಗದೀಶ್ ಬಿಗ್ ಬಾಸ್​ನಿಂದ ಹೊರಕ್ಕೆ; ಇವರು ಹೋಗಿದ್ದೆಲ್ಲಿಗೆ?

ಬಿಗ್ ಬಾಸ್​ನಿಂದ ರಂಜಿತ್ ಹಾಗೂ ಜಗದೀಶ್​ ಹೊರ ಬಂದಿದ್ದಾರೆ . ‘ಬಿಗ್ ಬಾಸ್’ನಲ್ಲಿ ಈ ಘಟನೆಗಳು ನಡೆದಿರೋದು ಮಂಗಳವಾರ. ಇದನ್ನು ವೀಕ್ಷಕರಿಗೆ ಈಗ ತೋರಿಸಲಾಗುತ್ತಿದೆ. ಸದ್ಯ ಇವರನ್ನು ಎಲ್ಲಿಡಲಾಗಿದೆ, ಅವರು ಮರಳಿ ದೊಡ್ಮನೆಗೆ ಬರುತ್ತಾರಾ ಎನ್ನುವ ಕುತೂಹಲ ಇದೆ.

ರಂಜಿತ್, ಜಗದೀಶ್ ಬಿಗ್ ಬಾಸ್​ನಿಂದ ಹೊರಕ್ಕೆ; ಇವರು ಹೋಗಿದ್ದೆಲ್ಲಿಗೆ?
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Oct 18, 2024 | 6:50 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಶಾಕಿಂಗ್ ಬೆಳವಣಿಗೆ ನಡೆದಿದೆ. ಸ್ಪರ್ಧಿಗಳೆಲ್ಲರೂ ಜಗದೀಶ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದರಿಂದ ಜಗದೀಶ್ ಕೋಪಗೊಂಡಿದ್ದು ಮಹಿಳಾ ಸ್ಪರ್ಧಿಗಳ ವಿರುದ್ಧ ಅಶ್ಲೀಲ ಪದಗಳ ಬಳಕೆ ಮಾಡಿದ್ದಾರೆ. ಹಂಸಾ ವಿರುದ್ಧವಂತೂ ಬಳಸಿದ ಪದ ಮಿತಿಮೀರಿದೆ. ಈ ಮಧ್ಯೆ ರಂಜಿತ್ ಅವರು ಜಗದೀಶ್ ಅವರನ್ನು ತಳ್ಳಿದ್ದಾರೆ. ಇದನ್ನು ಗಮನಿಸಿದ ಬಿಗ್ ಬಾಸ್ ಬಾಗಿಲು ತೆಗೆಯೋ ಆದೇಶ ನೀಡಿದ್ದಾರೆ. ರಂಜಿತ್ ಹಾಗೂ ಜಗದೀಶ್​ನ ಹೊರಕ್ಕೆ ಕಳಿಸೋ ಆದೇಶ ಕೊಟ್ಟಿದ್ದಾರೆ.

ಬಿಗ್ ಬಾಸ್​ನಿಂದ ಹೊರ ಬಂದಿರೋ ಸ್ಪರ್ಧಿಗಳು ಈವರೆಗೆ ಮನೆಗೆ ಬಂದಿಲ್ಲ. ಹೀಗಾಗಿ, ಕುತೂಹಲ ಮೂಡೋದು ಸಹಜ. ಅವರು ಹೋಗಿದ್ದು ಎಲ್ಲಿಗೆ ಎನ್ನುವ ಪ್ರಶ್ನೆ ಎದುರಾಗುತ್ತದೆ. ಕೆಲವು ವರದಿಗಳ ಪ್ರಕಾರ ಅವರನ್ನು ಸೀಕ್ರೆಟ್ ರೂಂನಲ್ಲಿ ಇಡಲಾಗಿದೆಯಂತೆ. ಸಾಕಷ್ಟು ಸಿಟ್ಟಲ್ಲಿರೋ ಇವರನ್ನು ಕೂಲ್ ಮಾಡಲು ಇದುವೇ ಸರಿಯಾದ ಮಾರ್ಗ ಎಂದು ಪರಿಗಣಿಸಲಾಗಿದೆ.

‘ಬಿಗ್ ಬಾಸ್’ನಲ್ಲಿ ಈ ಘಟನೆಗಳು ನಡೆದಿರೋದು ಮಂಗಳವಾರ. ಇದನ್ನು ವೀಕ್ಷಕರಿಗೆ ಈಗ ತೋರಿಸಲಾಗುತ್ತಿದೆ. ಸದ್ಯ ಇವರನ್ನು ಎಲ್ಲಿಡಲಾಗಿದೆ, ಅವರು ಮರಳಿ ದೊಡ್ಮನೆಗೆ ಬರುತ್ತಾರಾ ಎನ್ನುವ ಕುತೂಹಲ ಇದೆ.

ರಂಜಿತ್ ಅವರ ಸ್ಟ್ರಾಂಗ್ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಹೀಗಾಗಿ, ಅವರು ದೊಡ್ಮನೆ ಆಟಕ್ಕೆ ಬೇಕೆ ಬೇಕು. ಇನ್ನು, ಜಗದೀಶ್ ವಿಚಾರಕ್ಕೆ ಬರೋದಾದರೆ ಅವರು ಒಂದು ನಿಮಿಷ ಸೈಲೆಂಟ್ ಆಗಿ ಇದ್ದಿದ್ದೇ ಇಲ್ಲ. ಅವರು ಎಲ್ಲರ ವಿರುದ್ಧ ಧ್ವನಿ ಎತ್ತುತ್ತಾರೆ. ಇದನ್ನು ಸಹಿಸಿದ ಮಂಜು ಹಾಗೂ ಮೊದಲಾದವರು ಜಗದೀಶ್ ಅವರನ್ನು ಪ್ರವೋಕ್ ಮಾಡಿದ್ದಾರೆ. ಜಗದೀಶ್ ಅವರಿಗೆ ಬೇಗ ಸಿಟ್ಟು ಬರೋದ್ರಿಂದ ಅವರು ಮತ್ತಷ್ಟು ಕುಪಿತಗೊಳ್ಳುತ್ತಿದ್ದಾರೆ.

ಇದನ್ನೂ ಓದಿ: ‘ಜಗದೀಶ್, ರಂಜಿತ್ ಈ ಕೂಡಲೇ ಮನೆಯಿಂದ ಹೊರಗೆ ಬನ್ನಿ’: ಬಿಗ್ ಬಾಸ್ ಆದೇಶ

ಹಂಸಾ ಹಾಗೂ ಮೊದಲಾದ ಸ್ಪರ್ಧಿಗಳಿಗೆ ಅವಾಚ್ಯ ಶಬ್ದ ಬಳಕೆ ಮಾಡಿದ್ದನ್ನು ಇಡೀ ಮನೆ ಖಂಡಿಸಿದೆ. ಇದನ್ನು ಬಿಗ್ ಬಾಸ್ ಕೂಡ ಸಹಿಸಿಲ್ಲ. ರಂಜಿತ್ ಅವರು ಜಗದೀಶ್​ನ ತಳ್ಳಿದ್ದರು. ಈ ಕಾರಣದಿಂದ ಸದ್ಯಕ್ಕೆ ಇವರನ್ನು ಹೊರಕ್ಕೆ ಕಳಿಸುವ ಆದೇಶ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು