AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡೀ ಮನೆಗೆ ಕಣ್ಣೀರು ತರಿಸಿದ ಶಾಕಿಂಗ್ ಎಲಿಮಿನೇಷನ್; ಇದನ್ನು ಯಾರೂ ಊಹಿಸಿರಲಿಲ್ಲ

ಬಿಗ್ ಬಾಸ್ ಮನೆಯಲ್ಲಿ ಜಗದೀಶ್​ ಎಲಿಮಿನೇಟ್​ ಆಗಬೇಕು ಎಂದು ಬಹುತೇಕ ಎಲ್ಲರೂ ಬಯಸಿದ್ದರು. ಆದರೆ ಬಿಗ್ ಬಾಸ್​ ತೆಗೆದುಕೊಳ್ಳುವ ಕಠಿಣ ನಿರ್ಧಾರದ ಬಗ್ಗೆ ಯಾರಿಗೂ ಊಹೆ ಇರಲಿಲ್ಲ. ಜಗದೀಶ್ ಮಾತ್ರವಲ್ಲದೇ ಅವರ ಜೊತೆ ರಂಜಿತ್ ಅವರನ್ನೂ ಎಲಿಮಿನೇಟ್ ಮಾಡಲಾಗಿದೆ. ಇಬ್ಬರೂ ಕೂಡ ಮನೆಯ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಈ ಕ್ರಮ ಕೈಕೊಳ್ಳಲಾಗಿದೆ.

ಇಡೀ ಮನೆಗೆ ಕಣ್ಣೀರು ತರಿಸಿದ ಶಾಕಿಂಗ್ ಎಲಿಮಿನೇಷನ್; ಇದನ್ನು ಯಾರೂ ಊಹಿಸಿರಲಿಲ್ಲ
ಬಿಗ್ ಬಾಸ್ ಕನ್ನಡ ಸೀಸನ್ 11
ಮದನ್​ ಕುಮಾರ್​
|

Updated on: Oct 18, 2024 | 10:20 PM

Share

ಜಗದೀಶ್ ಅವರಿಂದ ಇಡೀ ಬಿಗ್ ಬಾಸ್​ ಮನೆಯ ವಾತಾವರಣ ಹಾಳಾಯಿತು. ಬೇಕು ಬೇಕಂತಲೇ ಅವರು ಜಗಳ ಮಾಡುತ್ತಿದ್ದರು. ಬಿಗ್​ ಬಾಸ್​ ಕಾರ್ಯಕ್ರಮಕ್ಕೂ ಅವರು ಅವಾಚ್ಯ ಶಬ್ಧಗಳನ್ನು ಬಳಸಿದ್ದರು. ಆದರೆ ಅದೆಲ್ಲವನ್ನೂ ಮೀರಿ ಅವರು ಮಹಿಳೆಯರ ಬಗ್ಗೆ ಕೀಳು ಮಟ್ಟದ ಪದಬಳಕೆ ಮಾಡಿದ್ದನ್ನು ಬಿಗ್ ಬಾಸ್​ ಸಹಿಸಿಕೊಂಡಿಲ್ಲ. ಕೂಡಲೇ ಅವರನ್ನು ದೊಡ್ಮನೆಯಿಂದ ಹೊರಗೆ ಕಳಿಸಲಾಗಿದೆ. ಜಗದೀಶ್ ಎಲಿಮಿನೇಟ್​ ಆಗಿದ್ದಕ್ಕೆ ಎಲ್ಲರಿಗೂ ಖುಷಿ ಆಯಿತು. ಆದರೆ ಆ ಖುಷಿ ಹೆಚ್ಚು ಕಾಲ ಉಳಿಯಲಿಲ್ಲ. ಕೂಡಲೇ ಬಿಗ್​ ಬಾಸ್​ ಮತ್ತೊಂದು ಶಾಕ್ ನೀಡಿದರು.

ಮಹಿಳಾ ಸದಸ್ಯರ ಬಗ್ಗೆ ಜಗದೀಶ್ ಅವರು ಅವಾಚ್ಯ ಪದಗಳಲ್ಲಿ ಮಾತನಾಡಿದಾಗ ರಂಜಿತ್​ ಅವರು ಉಗ್ರ ರೂಪ ತಾಳಿದ್ದರು. ಜಗಳ ಮಾಡುವ ಭರದಲ್ಲಿ ಅವರು ದೈಹಿಕವಾಗಿ ಹಲ್ಲೆಗೆ ಮುಂದಾಗಿದ್ದರು. ಜಗದೀಶ್ ಅವರನ್ನು ರಂಜಿತ್​ ತಳ್ಳಿದ್ದರು. ಇದರಿಂದಾಗಿ ಬಿಗ್ ಬಾಸ್ ಮನೆಯ ಮೂಲ ನಿಯಮ ಉಲ್ಲಂಘನೆ ಆಯಿತು. ಹಾಗಾಗಿ ಅವರನ್ನು ಬಿಗ್ ಬಾಸ್​ ಮನೆಯಿಂದ ಎಲಿಮಿನೇಟ್​ ಮಾಡುವ ತೀರ್ಮಾನ ತೆಗೆದುಕೊಳ್ಳಲಾಯಿತು.

ರಂಜಿತ್ ಕೂಡ ಮುಖ್ಯದ್ವಾರದಿಂದ ಕೂಡಲೇ ಮನೆಯಿಂದ ಹೊರಗೆ ಬರಬೇಕು ಎಂದು ಬಿಗ್ ಬಾಸ್ ಆದೇಶ ನೀಡಿದಾಗ ಎಲ್ಲರಿಗೂ ಶಾಕ್ ಆಯಿತು. ದಯವಿಟ್ಟು ರಂಜಿತ್ ಅವರನ್ನು ಎಲಿಮಿನೇಟ್ ಮಾಡಬೇಡಿ ಎಂದು ಎಲ್ಲರೂ ಬೇಡಿಕೊಂಡರು. ರಂಜಿತ್ ಅವರ ಉದ್ದೇಶ ಕೆಟ್ಟದ್ದಾಗಿರಲಿಲ್ಲ ಎಂದು ಎಲ್ಲರೂ ಸಮರ್ಥನೆ ನೀಡಿದರೂ ಕೂಡ ಬಿಗ್ ಬಾಸ್​ ಅದನ್ನು ಒಪ್ಪಿಕೊಳ್ಳಲಿಲ್ಲ. ಮುಖ್ಯದ್ವಾರ ಓಪನ್ ಆಯಿತು. ಎಲ್ಲರಿಗೂ ವಿದಾಯ ಹೇಳಿ ರಂಜಿತ್ ಅವರು ಹೊರಗೆ ನಡೆದರು.

ಇದನ್ನೂ ಓದಿ: ‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ದೊಡ್ಮನೆಯಿಂದ ಹೊರ ಬಂದ ಜಗದೀಶ್​ ಮೊದಲ ರಿಯಾಕ್ಷನ್

ಮಾನಸಾ ಅವರು ಬಿಕ್ಕಿ ಬಿಕ್ಕಿ ಅತ್ತರು. ರಂಜಿತ್ ಅವರ ಸ್ನೇಹಿತ ತ್ರಿವಿಕ್ರಮ್ ಕೂಡ ಸಿಕ್ಕಾಪಟ್ಟೆ ಕಣ್ಣೀರು ಹಾಕಿದರು. ಗೌತಮಿ ಜಾಧವ್, ಉಗ್ರಂ ಮಂಜು, ಚೈತ್ರಾ ಕುಂದಾಪುರ, ಭವ್ಯಾ ಸೇರಿದಂತೆ ಅನೇಕರು ಗಳಗಳನೆ ಅಳಲು ಶುರು ಮಾಡಿದರು. ರಂಜಿತ್ ಅವರ ಎಲಿಮಿನೇಷನ್​ನಿಂದ ಇಡೀ ಮನೆಗೆ ಮಂಕು ಕವಿದಂತೆ ಆಯಿತು. ಒಂದು ರಾತ್ರಿ ಕಳೆದ ನಂತರವೂ ಹಂಸಾ ಅವರ ಕಣ್ಣೀರು ನಿಲ್ಲಲಿಲ್ಲ. ಈ ಎಲ್ಲ ವಿಚಾರಗಳ ಬಗ್ಗೆ ವೀಕೆಂಡ್ ಎಪಿಸೋಡ್​ನಲ್ಲಿ ಕಿಚ್ಚ ಸುದೀಪ್ ಅವರು ಏನು ಮಾತನಾಡುತ್ತಾರೆ ಎಂಬುದನ್ನು ನೋಡಲು ವೀಕ್ಷಕರು ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ