AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಗದೀಶ್ ಬಿಗ್ ಬಾಸ್ ಪಾಲಿಗೆ ಮುಗಿದು ಹೋದ ಅಧ್ಯಾಯ’; ಸುದೀಪ್ ಸ್ಪಷ್ಟನೆ

ಜಗದೀಶ್ ಅವರು ಬಿಗ್ ಬಾಸ್​ನಿಂದ ಎಲಿಮಿನೇಟ್ ಆಗಿದ್ದು, ಮತ್ತೆ ಬರಬೇಕು ಎನ್ನುವ ಕೂಗು ಇದೆ. ಅವರು ಬರುತ್ತಾರೆ ಅನ್ನೋದು ಅನೇಕರ ನಂಬಿಕೆ. ಆದರೆ, ಇದಕ್ಕೆ ಸುದೀಪ್ ಸ್ಪಷ್ಟನೆ ನೀಡಿದ್ದಾರೆ.

‘ಜಗದೀಶ್ ಬಿಗ್ ಬಾಸ್ ಪಾಲಿಗೆ ಮುಗಿದು ಹೋದ ಅಧ್ಯಾಯ’; ಸುದೀಪ್ ಸ್ಪಷ್ಟನೆ
ಜಗದೀಶ್​, ಕಿಚ್ಚ ಸುದೀಪ್​
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 20, 2024 | 6:36 AM

Share

ಈ ಆವೃತ್ತಿಯ ಕನ್ನಡ ಬಿಗ್ ಬಾಸ್ ಕಳೆದ ಸೀಸನ್​ಗಳಿಗಿಂತ ಹೆಚ್ಚು ಸುದ್ದಿಯಲ್ಲಿದೆ. ಆರಂಭದಿಂದಲೇ ಈ ರಿಯಾಲಿಟಿಶೋ ಇಷ್ಟು ಸುದ್ದಿಯಲ್ಲಿ ಇರುವುದು ಇದೇ ಮೊದಲು ಎಂದೇ ಹೇಳಬಹುದು. ‘ಬಿಗ್ ಬಾಸ್’ ಸುದ್ದಿಯಲ್ಲಿ ಇರುವುದರ ಜೊತೆಗೆ ಸಾಕಷ್ಟು ಟೀಕೆಗಳನ್ನು ಕೂಡ ಪಡೆದುಕೊಳ್ಳುತ್ತಿದೆ ಎಂಬುದು ಸೋಶಿಯಲ್ ಮೀಡಿಯಾ ಮೂಲಕ ಗೊತ್ತಾಗುತ್ತಿದೆ. ಜಗದೀಶ್ ಅವರು ಮಿತಿಮೀರಿ ನಡೆದುಕೊಂಡಿದ್ದೇ ಇದಕ್ಕೆ ಕಾರಣ. ಜಗದೀಶ್ ಅವರನ್ನು ಹೊರಕ್ಕೆ ಹಾಕಲಾಗಿದೆ.

ಜಗದೀಶ್ ಅವರನ್ನು ಬಿಗ್ ಬಾಸ್​ ಮನೆಯಿಂದ ಎಲಿಮಿನೇಟ್ ಮಾಡಿರುವುದು ಗೊತ್ತೇ ಇದೆ. ಅವರನ್ನು ಬಿಗ್ ಬಾಸ್ ಅವರೇ ಎಲಿಮಿನೇಟ್ ಮಾಡಿದ್ದಾರೆ. ಇದು ನಿಜಕ್ಕೂ ಶಾಕಿಂಗ್ ಆಗಿದೆ. ಮಹಿಳಾ ಸ್ಪರ್ಧಿಗಳ ವಿರುದ್ಧ ಅವರು ಅವಾಚ್ಯ ಶಬ್ದ ಬಳಕೆ ಮಾಡಿದ್ದರು. ಇದರಿಂದ ಅವರು ಸಾಕಷ್ಟು ಟೀಕೆಗಳನ್ನು ಎದುರಿಸಬೇಕಾಯಿತು. ಅವರು ಎಲಿಮಿನೇಟ್ ಆಗಿದ್ದು, ಮತ್ತೆ ಬರಬೇಕು ಎನ್ನುವ ಕೂಗು ಇದೆ. ಅವರು ಬರುತ್ತಾರೆ ಅನ್ನೋದು ಅನೇಕರ ನಂಬಿಕೆ. ಆದರೆ, ಇದಕ್ಕೆ ಸುದೀಪ್ ಸ್ಪಷ್ಟನೆ ನೀಡಿದ್ದಾರೆ.

ಅಕ್ಟೋಬರ್ 19ರ ಎಪಿಸೋಡ್​ನಲ್ಲಿ  ಸುದೀಪ್ ಅವರು ಮನೆಯವರಿಗೆ ಒಂದಷ್ಟು ಪ್ರಶ್ನೆಗಳನ್ನು ಕೇಳುತ್ತಿದ್ದರು. ಈ ಪ್ರಶ್ನೆಗಳು ಮನೆಯವರು ಮಾಡಿದ ತಪ್ಪನ್ನು ಎತ್ತಿ ತೋರಿಸುತ್ತಾ ಇತ್ತು. ಸುದೀಪ್ ಅವರು ಜಗದೀಶ್​ನ ವಹಿಸಿಕೊಂಡು ಮಾತನಾಡುತ್ತಿದ್ದಾರೆ ಎಂಬ ರೀತಿಯಲ್ಲಿ ಮನೆ ಮಂದಿಗೆ ಕಾಣುತ್ತಾ ಇತ್ತು. ಹೀಗಾಗಿ, ಸುದೀಪ್ ಪ್ರಶ್ನೆ ಕೇಳಿದಾಗ ಅವರು ಜಗದೀಶ್ ಮಾಡಿದ್ದು ತಪ್ಪು ಎಂದು ಹೇಳುವ ರೀತಿಯಲ್ಲಿ ಮಾತನಾಡಲು ಆರಂಭಿಸುತ್ತಿದ್ದರು.

ಈ ವೇಳೆ ಸ್ಪಷ್ಟನೆ ಕೊಡುವಾಗ ಸುದೀಪ್ ಅವರು ಒಂದು ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ. ‘ನಾನು ಜಗದೀಶ್​ ಅವರನ್ನು ಕ್ಲೀನ್ ಮಾಡಲು ಅಥವಾ ಅವರು ಮಾಡಿದ್ದು ತಪ್ಪಲ್ಲ ಎಂದಲ್ಲ ಹೇಳಲು ಇಲ್ಲಿ ನಿಂತಿಲ್ಲ. ಅವರ ಮಾತಿನ ಮೇಲೆ ನಿಗಾ ಇರಲಿಲ್ಲ. ಈ ಕಾರಣದಿಂದ ಅವರು ಎಲಿಮಿನೇಟ್ ಆದರು. ಇದನ್ನು ಬಿಗ್ ಬಾಸ್ ಸಹಿಸಲ್ಲ. ಜಗದೀಶ್ ಬಿಗ್ ಬಾಸ್ ಪಾಲಿಗೆ ಮುಗಿದು ಹೋದ ಅಧ್ಯಾಯ’ ಎಂದು ಹೇಳಿದ್ದಾರೆ. ಇದರಿಂದ ಜಗದೀಶ್ ಅವರು ಮರಳಿ ಬರೋದಿಲ್ಲ ಎಂಬುದು ಸ್ಪಷ್ಟವಾಗಿದೆ.

ಇದನ್ನೂ ಓದಿ: ಮತ್ತೆ ಬಿಗ್ ಬಾಸ್​ಗೆ ಬರ್ತಾರಾ ಜಗದೀಶ್? ನೆರವೇರುತ್ತಾ ಕೋರಿಕೆ?

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ರಂಜಿತ್ ಹಾಗೂ ಜಗದೀಶ್ ಅವರು ಎಲಿಮಿನೇಟ್ ಆಗಿದ್ದಾರೆ. ವಾರದ ಮಧ್ಯೆ ಇವರನ್ನು ಹೊರಕ್ಕೆ ಹಾಕಲಾಗಿದೆ. ಇಂದು (ಅಕ್ಟೋಬರ್ 20) ಜಗದೀಶ್ ಅವರು ಸುದ್ದಿಗೋಷ್ಠಿ ಕೂಡ ಆಯೋಜನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?