AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಗದೀಶ್ ಬಿಗ್ ಬಾಸ್ ಪಾಲಿಗೆ ಮುಗಿದು ಹೋದ ಅಧ್ಯಾಯ’; ಸುದೀಪ್ ಸ್ಪಷ್ಟನೆ

ಜಗದೀಶ್ ಅವರು ಬಿಗ್ ಬಾಸ್​ನಿಂದ ಎಲಿಮಿನೇಟ್ ಆಗಿದ್ದು, ಮತ್ತೆ ಬರಬೇಕು ಎನ್ನುವ ಕೂಗು ಇದೆ. ಅವರು ಬರುತ್ತಾರೆ ಅನ್ನೋದು ಅನೇಕರ ನಂಬಿಕೆ. ಆದರೆ, ಇದಕ್ಕೆ ಸುದೀಪ್ ಸ್ಪಷ್ಟನೆ ನೀಡಿದ್ದಾರೆ.

‘ಜಗದೀಶ್ ಬಿಗ್ ಬಾಸ್ ಪಾಲಿಗೆ ಮುಗಿದು ಹೋದ ಅಧ್ಯಾಯ’; ಸುದೀಪ್ ಸ್ಪಷ್ಟನೆ
ಜಗದೀಶ್​, ಕಿಚ್ಚ ಸುದೀಪ್​
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 20, 2024 | 6:36 AM

Share

ಈ ಆವೃತ್ತಿಯ ಕನ್ನಡ ಬಿಗ್ ಬಾಸ್ ಕಳೆದ ಸೀಸನ್​ಗಳಿಗಿಂತ ಹೆಚ್ಚು ಸುದ್ದಿಯಲ್ಲಿದೆ. ಆರಂಭದಿಂದಲೇ ಈ ರಿಯಾಲಿಟಿಶೋ ಇಷ್ಟು ಸುದ್ದಿಯಲ್ಲಿ ಇರುವುದು ಇದೇ ಮೊದಲು ಎಂದೇ ಹೇಳಬಹುದು. ‘ಬಿಗ್ ಬಾಸ್’ ಸುದ್ದಿಯಲ್ಲಿ ಇರುವುದರ ಜೊತೆಗೆ ಸಾಕಷ್ಟು ಟೀಕೆಗಳನ್ನು ಕೂಡ ಪಡೆದುಕೊಳ್ಳುತ್ತಿದೆ ಎಂಬುದು ಸೋಶಿಯಲ್ ಮೀಡಿಯಾ ಮೂಲಕ ಗೊತ್ತಾಗುತ್ತಿದೆ. ಜಗದೀಶ್ ಅವರು ಮಿತಿಮೀರಿ ನಡೆದುಕೊಂಡಿದ್ದೇ ಇದಕ್ಕೆ ಕಾರಣ. ಜಗದೀಶ್ ಅವರನ್ನು ಹೊರಕ್ಕೆ ಹಾಕಲಾಗಿದೆ.

ಜಗದೀಶ್ ಅವರನ್ನು ಬಿಗ್ ಬಾಸ್​ ಮನೆಯಿಂದ ಎಲಿಮಿನೇಟ್ ಮಾಡಿರುವುದು ಗೊತ್ತೇ ಇದೆ. ಅವರನ್ನು ಬಿಗ್ ಬಾಸ್ ಅವರೇ ಎಲಿಮಿನೇಟ್ ಮಾಡಿದ್ದಾರೆ. ಇದು ನಿಜಕ್ಕೂ ಶಾಕಿಂಗ್ ಆಗಿದೆ. ಮಹಿಳಾ ಸ್ಪರ್ಧಿಗಳ ವಿರುದ್ಧ ಅವರು ಅವಾಚ್ಯ ಶಬ್ದ ಬಳಕೆ ಮಾಡಿದ್ದರು. ಇದರಿಂದ ಅವರು ಸಾಕಷ್ಟು ಟೀಕೆಗಳನ್ನು ಎದುರಿಸಬೇಕಾಯಿತು. ಅವರು ಎಲಿಮಿನೇಟ್ ಆಗಿದ್ದು, ಮತ್ತೆ ಬರಬೇಕು ಎನ್ನುವ ಕೂಗು ಇದೆ. ಅವರು ಬರುತ್ತಾರೆ ಅನ್ನೋದು ಅನೇಕರ ನಂಬಿಕೆ. ಆದರೆ, ಇದಕ್ಕೆ ಸುದೀಪ್ ಸ್ಪಷ್ಟನೆ ನೀಡಿದ್ದಾರೆ.

ಅಕ್ಟೋಬರ್ 19ರ ಎಪಿಸೋಡ್​ನಲ್ಲಿ  ಸುದೀಪ್ ಅವರು ಮನೆಯವರಿಗೆ ಒಂದಷ್ಟು ಪ್ರಶ್ನೆಗಳನ್ನು ಕೇಳುತ್ತಿದ್ದರು. ಈ ಪ್ರಶ್ನೆಗಳು ಮನೆಯವರು ಮಾಡಿದ ತಪ್ಪನ್ನು ಎತ್ತಿ ತೋರಿಸುತ್ತಾ ಇತ್ತು. ಸುದೀಪ್ ಅವರು ಜಗದೀಶ್​ನ ವಹಿಸಿಕೊಂಡು ಮಾತನಾಡುತ್ತಿದ್ದಾರೆ ಎಂಬ ರೀತಿಯಲ್ಲಿ ಮನೆ ಮಂದಿಗೆ ಕಾಣುತ್ತಾ ಇತ್ತು. ಹೀಗಾಗಿ, ಸುದೀಪ್ ಪ್ರಶ್ನೆ ಕೇಳಿದಾಗ ಅವರು ಜಗದೀಶ್ ಮಾಡಿದ್ದು ತಪ್ಪು ಎಂದು ಹೇಳುವ ರೀತಿಯಲ್ಲಿ ಮಾತನಾಡಲು ಆರಂಭಿಸುತ್ತಿದ್ದರು.

ಈ ವೇಳೆ ಸ್ಪಷ್ಟನೆ ಕೊಡುವಾಗ ಸುದೀಪ್ ಅವರು ಒಂದು ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ. ‘ನಾನು ಜಗದೀಶ್​ ಅವರನ್ನು ಕ್ಲೀನ್ ಮಾಡಲು ಅಥವಾ ಅವರು ಮಾಡಿದ್ದು ತಪ್ಪಲ್ಲ ಎಂದಲ್ಲ ಹೇಳಲು ಇಲ್ಲಿ ನಿಂತಿಲ್ಲ. ಅವರ ಮಾತಿನ ಮೇಲೆ ನಿಗಾ ಇರಲಿಲ್ಲ. ಈ ಕಾರಣದಿಂದ ಅವರು ಎಲಿಮಿನೇಟ್ ಆದರು. ಇದನ್ನು ಬಿಗ್ ಬಾಸ್ ಸಹಿಸಲ್ಲ. ಜಗದೀಶ್ ಬಿಗ್ ಬಾಸ್ ಪಾಲಿಗೆ ಮುಗಿದು ಹೋದ ಅಧ್ಯಾಯ’ ಎಂದು ಹೇಳಿದ್ದಾರೆ. ಇದರಿಂದ ಜಗದೀಶ್ ಅವರು ಮರಳಿ ಬರೋದಿಲ್ಲ ಎಂಬುದು ಸ್ಪಷ್ಟವಾಗಿದೆ.

ಇದನ್ನೂ ಓದಿ: ಮತ್ತೆ ಬಿಗ್ ಬಾಸ್​ಗೆ ಬರ್ತಾರಾ ಜಗದೀಶ್? ನೆರವೇರುತ್ತಾ ಕೋರಿಕೆ?

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ರಂಜಿತ್ ಹಾಗೂ ಜಗದೀಶ್ ಅವರು ಎಲಿಮಿನೇಟ್ ಆಗಿದ್ದಾರೆ. ವಾರದ ಮಧ್ಯೆ ಇವರನ್ನು ಹೊರಕ್ಕೆ ಹಾಕಲಾಗಿದೆ. ಇಂದು (ಅಕ್ಟೋಬರ್ 20) ಜಗದೀಶ್ ಅವರು ಸುದ್ದಿಗೋಷ್ಠಿ ಕೂಡ ಆಯೋಜನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ