AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬಿಗ್ ಬಾಸ್​ಗೆ ಬರ್ತಾರಾ ಜಗದೀಶ್? ನೆರವೇರುತ್ತಾ ಕೋರಿಕೆ?

ಕಲರ್ಸ್ ಕನ್ನಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಪೋಸ್ಟ್​ಗಳಲ್ಲಿ ಫ್ಯಾನ್ಸ್ ಈ ಬಗ್ಗೆ ಬರೆದುಕೊಳ್ಳುತ್ತಿದ್ದಾರೆ. ‘ಜಗದೀಶ್ ಅವರನ್ನು ಮರಳಿ ತನ್ನಿ’ ಎಂದು ಕೆಲವರು ಬರೆದರೆ ಇನ್ನೂ ಕೆಲವರು, ‘ಜಗದೀಶ್ ಇಲ್ಲದ ಬಿಗ್ ಬಾಸ್​ನ ನಾವು ನೋಡಲ್ಲ’ ಎಂದಿದ್ದಾರೆ.

ಮತ್ತೆ ಬಿಗ್ ಬಾಸ್​ಗೆ ಬರ್ತಾರಾ ಜಗದೀಶ್? ನೆರವೇರುತ್ತಾ ಕೋರಿಕೆ?
ಜಗದೀಶ್
ರಾಜೇಶ್ ದುಗ್ಗುಮನೆ
|

Updated on: Oct 19, 2024 | 1:04 PM

Share

ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿದ ಕಾರಣಕ್ಕೆ ಜಗದೀಶ್ ಅವರನ್ನು ಬಿಗ್ ಬಾಸ್​ನಿಂದಲೇ ಎಲಿಮಿನೇಟ್ ಆಗಿದ್ದಾರೆ. ಇದು ಇಡೀ ಬಿಗ್ ಬಾಸ್ ಮನೆಗೆ ಖುಷಿ ನೀಡಿದೆ. 1 vs 15 ಎನ್ನುವ ರೀತಿಯ ಪರಿಸ್ಥಿತಿ ನಿರ್ಮಾಣ ಆಗಿತ್ತು. ಅವರು ಬಳಕೆ ಮಾಡಿರೋ ಪದಗಳ ಬಗ್ಗೆ ಕೆಲವರಿಗೆ ಬೇಸರ ಇದೆ. ಹೀಗಿರುವಾಗಲೇ ಜಗದೀಶ್ ಅವರನ್ನು ಬಿಗ್ ಬಾಸ್​ ಮನೆಗೆ ಮರಳಿ ಕರೆತರಬೇಕು ಎನ್ನುವ ಆಗ್ರಹ ವ್ಯಕ್ತವಾಗಿದೆ.

‘ಬಿಗ್ ಬಾಸ್​’ನಲ್ಲಿ ಜಗದೀಶ್ ಅವರು ಭರ್ಜರಿ ಎಂಟರ್​ಟೇನ್​ಮೆಂಟ್ ನೀಡಿದ್ದರು. ಈ ಕಾರಣಕ್ಕೆ ಅವರು ಅನೇಕರಿಗೆ ಇಷ್ಟ ಆಗಿದ್ದರು. ಅವರು ನಡೆದುಕೊಳ್ಳೋದು ಮನೆಯವರಿಗೆ ಇಷ್ಟ ಆಗದೇ ಇದ್ದರೂ ಹೊರಗಿದ್ದವರು ಅವರನ್ನು ಹೆಚ್ಚು ಇಷ್ಟಪಟ್ಟಿದ್ದರು. ಆದರೆ, ಅವರು ಮೂರನೇ ವಾರದ ಮಧ್ಯದಲ್ಲೇ ಎಲಿಮಿನೇಟ್ ಆಗಿದ್ದರು. ಅವರನ್ನು ಮರಳಿ ಕರೆತರಬೇಕು ಎನ್ನುವ ಆಗ್ರಹ ಜೋರಾಗಿದೆ.

ಕಲರ್ಸ್ ಕನ್ನಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಪೋಸ್ಟ್​ಗಳಲ್ಲಿ ಫ್ಯಾನ್ಸ್ ಈ ಬಗ್ಗೆ ಬರೆದುಕೊಳ್ಳುತ್ತಿದ್ದಾರೆ. ‘ಜಗದೀಶ್ ಅವರನ್ನು ಮರಳಿ ತನ್ನಿ’ ಎಂದು ಕೆಲವರು ಬರೆದರೆ ಇನ್ನೂ ಕೆಲವರು, ‘ಜಗದೀಶ್ ಇಲ್ಲದ ಬಿಗ್ ಬಾಸ್​ನ ನಾವು ನೋಡಲ್ಲ’ ಎಂದಿದ್ದಾರೆ.

ಇನ್ನೂ ಕೆಲವರು ಬಿಗ್ ಬಾಸ್​ನ ಉಳಿದ ಸ್ಪರ್ಧಿಗಳನ್ನು ಟೀಕೆ ಮಾಡಿದ್ದಾರೆ. ‘ಮಾನಸಾ ಹಾಗೂ ಚೈತ್ರಾ ಬಾಯಲ್ಲೂ ಕೆಟ್ಟ ಶಬ್ದಗಳು ಬಂದಿವೆ. ಅವರನ್ನೂ ಹರೊಕ್ಕೆ ಕಳುಹಿಸಬೇಕು’ ಎನ್ನುವ ಆಗ್ರಹ ಜೋರಾಗಿದೆ. ಇದರಿಂದ ಬಿಗ್ ಬಾಸ್ ಆಯೋಜಕರು ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೀಡಬೇಕಿದೆ.

ಇದನ್ನೂ ಓದಿ: ‘ಸುದೀಪ್ ಸರಿಯಾದ ನಿರ್ಧಾರವೇ ತೆಗೆದುಕೊಂಡಿರ್ತಾರೆ’; ಕಿಚ್ಚ ಬಿಗ್ ಬಾಸ್ ತೊರೆದ ಬಗ್ಗೆ ಮಿತ್ರ ಮಾತು

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಜಗದೀಶ್ ಅವರು ಮರಳಿ ಬರಲಿ ಫ್ಯಾನ್ಸ್ ಬೇಡಿಕೊಳ್ಳುತ್ತಿದ್ದಾರೆ. ಇದು ಹೊಸ ಅಧ್ಯಾಯ ಆಗಿರುವುದರಿಂದ ಟ್ವಿಸ್ಟ್​​ಗಳನ್ನು ನೀಡೋದಾಗಿ ಈ ಮೊದಲೇ ಸೂಚನೆ ನೀಡಲಾಗಿದೆ. ಈಗ ನಡೆದಿರೋದು ಕೂಡ ಅದರ ಭಾಗವೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ