ಮತ್ತೆ ಬಿಗ್ ಬಾಸ್​ಗೆ ಬರ್ತಾರಾ ಜಗದೀಶ್? ನೆರವೇರುತ್ತಾ ಕೋರಿಕೆ?

ಕಲರ್ಸ್ ಕನ್ನಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಪೋಸ್ಟ್​ಗಳಲ್ಲಿ ಫ್ಯಾನ್ಸ್ ಈ ಬಗ್ಗೆ ಬರೆದುಕೊಳ್ಳುತ್ತಿದ್ದಾರೆ. ‘ಜಗದೀಶ್ ಅವರನ್ನು ಮರಳಿ ತನ್ನಿ’ ಎಂದು ಕೆಲವರು ಬರೆದರೆ ಇನ್ನೂ ಕೆಲವರು, ‘ಜಗದೀಶ್ ಇಲ್ಲದ ಬಿಗ್ ಬಾಸ್​ನ ನಾವು ನೋಡಲ್ಲ’ ಎಂದಿದ್ದಾರೆ.

ಮತ್ತೆ ಬಿಗ್ ಬಾಸ್​ಗೆ ಬರ್ತಾರಾ ಜಗದೀಶ್? ನೆರವೇರುತ್ತಾ ಕೋರಿಕೆ?
ಜಗದೀಶ್
Follow us
|

Updated on: Oct 19, 2024 | 1:04 PM

ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿದ ಕಾರಣಕ್ಕೆ ಜಗದೀಶ್ ಅವರನ್ನು ಬಿಗ್ ಬಾಸ್​ನಿಂದಲೇ ಎಲಿಮಿನೇಟ್ ಆಗಿದ್ದಾರೆ. ಇದು ಇಡೀ ಬಿಗ್ ಬಾಸ್ ಮನೆಗೆ ಖುಷಿ ನೀಡಿದೆ. 1 vs 15 ಎನ್ನುವ ರೀತಿಯ ಪರಿಸ್ಥಿತಿ ನಿರ್ಮಾಣ ಆಗಿತ್ತು. ಅವರು ಬಳಕೆ ಮಾಡಿರೋ ಪದಗಳ ಬಗ್ಗೆ ಕೆಲವರಿಗೆ ಬೇಸರ ಇದೆ. ಹೀಗಿರುವಾಗಲೇ ಜಗದೀಶ್ ಅವರನ್ನು ಬಿಗ್ ಬಾಸ್​ ಮನೆಗೆ ಮರಳಿ ಕರೆತರಬೇಕು ಎನ್ನುವ ಆಗ್ರಹ ವ್ಯಕ್ತವಾಗಿದೆ.

‘ಬಿಗ್ ಬಾಸ್​’ನಲ್ಲಿ ಜಗದೀಶ್ ಅವರು ಭರ್ಜರಿ ಎಂಟರ್​ಟೇನ್​ಮೆಂಟ್ ನೀಡಿದ್ದರು. ಈ ಕಾರಣಕ್ಕೆ ಅವರು ಅನೇಕರಿಗೆ ಇಷ್ಟ ಆಗಿದ್ದರು. ಅವರು ನಡೆದುಕೊಳ್ಳೋದು ಮನೆಯವರಿಗೆ ಇಷ್ಟ ಆಗದೇ ಇದ್ದರೂ ಹೊರಗಿದ್ದವರು ಅವರನ್ನು ಹೆಚ್ಚು ಇಷ್ಟಪಟ್ಟಿದ್ದರು. ಆದರೆ, ಅವರು ಮೂರನೇ ವಾರದ ಮಧ್ಯದಲ್ಲೇ ಎಲಿಮಿನೇಟ್ ಆಗಿದ್ದರು. ಅವರನ್ನು ಮರಳಿ ಕರೆತರಬೇಕು ಎನ್ನುವ ಆಗ್ರಹ ಜೋರಾಗಿದೆ.

ಕಲರ್ಸ್ ಕನ್ನಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಪೋಸ್ಟ್​ಗಳಲ್ಲಿ ಫ್ಯಾನ್ಸ್ ಈ ಬಗ್ಗೆ ಬರೆದುಕೊಳ್ಳುತ್ತಿದ್ದಾರೆ. ‘ಜಗದೀಶ್ ಅವರನ್ನು ಮರಳಿ ತನ್ನಿ’ ಎಂದು ಕೆಲವರು ಬರೆದರೆ ಇನ್ನೂ ಕೆಲವರು, ‘ಜಗದೀಶ್ ಇಲ್ಲದ ಬಿಗ್ ಬಾಸ್​ನ ನಾವು ನೋಡಲ್ಲ’ ಎಂದಿದ್ದಾರೆ.

ಇನ್ನೂ ಕೆಲವರು ಬಿಗ್ ಬಾಸ್​ನ ಉಳಿದ ಸ್ಪರ್ಧಿಗಳನ್ನು ಟೀಕೆ ಮಾಡಿದ್ದಾರೆ. ‘ಮಾನಸಾ ಹಾಗೂ ಚೈತ್ರಾ ಬಾಯಲ್ಲೂ ಕೆಟ್ಟ ಶಬ್ದಗಳು ಬಂದಿವೆ. ಅವರನ್ನೂ ಹರೊಕ್ಕೆ ಕಳುಹಿಸಬೇಕು’ ಎನ್ನುವ ಆಗ್ರಹ ಜೋರಾಗಿದೆ. ಇದರಿಂದ ಬಿಗ್ ಬಾಸ್ ಆಯೋಜಕರು ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೀಡಬೇಕಿದೆ.

ಇದನ್ನೂ ಓದಿ: ‘ಸುದೀಪ್ ಸರಿಯಾದ ನಿರ್ಧಾರವೇ ತೆಗೆದುಕೊಂಡಿರ್ತಾರೆ’; ಕಿಚ್ಚ ಬಿಗ್ ಬಾಸ್ ತೊರೆದ ಬಗ್ಗೆ ಮಿತ್ರ ಮಾತು

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಜಗದೀಶ್ ಅವರು ಮರಳಿ ಬರಲಿ ಫ್ಯಾನ್ಸ್ ಬೇಡಿಕೊಳ್ಳುತ್ತಿದ್ದಾರೆ. ಇದು ಹೊಸ ಅಧ್ಯಾಯ ಆಗಿರುವುದರಿಂದ ಟ್ವಿಸ್ಟ್​​ಗಳನ್ನು ನೀಡೋದಾಗಿ ಈ ಮೊದಲೇ ಸೂಚನೆ ನೀಡಲಾಗಿದೆ. ಈಗ ನಡೆದಿರೋದು ಕೂಡ ಅದರ ಭಾಗವೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮೆಟ್ರೊ ಪ್ಲಾಟ್‌ಫಾರ್ಮ್‌ನಲ್ಲಿ ನಿಂತು ಹಳಿ ಮೇಲೆ ಮೂತ್ರ ಮಾಡಿದ ವ್ಯಕ್ತಿ
ಮೆಟ್ರೊ ಪ್ಲಾಟ್‌ಫಾರ್ಮ್‌ನಲ್ಲಿ ನಿಂತು ಹಳಿ ಮೇಲೆ ಮೂತ್ರ ಮಾಡಿದ ವ್ಯಕ್ತಿ
ಚನ್ನಪಟ್ಟಣ ಕ್ಷೇತ್ರಕ್ಕೆ ತಾನು ಅಭ್ಯರ್ಥಿಯೆಂದು ಇವತ್ತು ಡಿಕೆಶಿ ಹೇಳಲಿಲ್ಲ
ಚನ್ನಪಟ್ಟಣ ಕ್ಷೇತ್ರಕ್ಕೆ ತಾನು ಅಭ್ಯರ್ಥಿಯೆಂದು ಇವತ್ತು ಡಿಕೆಶಿ ಹೇಳಲಿಲ್ಲ
ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿರುವ ವ್ಯಾಪಾರಸ್ಥರು!
ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿರುವ ವ್ಯಾಪಾರಸ್ಥರು!
ಆನೆಗಳ ದಾಳಿಯಿಂದ ಬೈಕ್ ಸವಾರ ಜಸ್ಟ್ ಮಿಸ್, ವಿಡಿಯೋ ನೋಡಿ
ಆನೆಗಳ ದಾಳಿಯಿಂದ ಬೈಕ್ ಸವಾರ ಜಸ್ಟ್ ಮಿಸ್, ವಿಡಿಯೋ ನೋಡಿ
ಇಡಿ ದಾಳಿ: ಮೈಸೂರು ಮುಡಾ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್
ಇಡಿ ದಾಳಿ: ಮೈಸೂರು ಮುಡಾ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್
ವಿರಾಟ್ ಕೊಹ್ಲಿ ಔಟಾದಾಗ ರೋಹಿತ್ ಶರ್ಮಾ ರಿಯಾಕ್ಷನ್ ಹೇಗಿತ್ತು ನೋಡಿ
ವಿರಾಟ್ ಕೊಹ್ಲಿ ಔಟಾದಾಗ ರೋಹಿತ್ ಶರ್ಮಾ ರಿಯಾಕ್ಷನ್ ಹೇಗಿತ್ತು ನೋಡಿ
ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಹಣದಿಂದ ಎತ್ತು ಖರೀದಿಸಿದ ರೈತ ಮಹಿಳೆ
ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಹಣದಿಂದ ಎತ್ತು ಖರೀದಿಸಿದ ರೈತ ಮಹಿಳೆ
Daily Devotional: ಮಹಿಳೆಯರು ರಾತ್ರಿ ಕನ್ನಡಿ ನೋಡಬಾರದು ಏಕೆ?
Daily Devotional: ಮಹಿಳೆಯರು ರಾತ್ರಿ ಕನ್ನಡಿ ನೋಡಬಾರದು ಏಕೆ?
Nithya Bhavishya: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್