‘ಈ ವಾರ ಇನ್ನೂ ಕೆಟ್ಟದಾಗಿರುತ್ತದೆ’; ಸೂಚನೆ ಕೊಟ್ಟ ಜಗದೀಶ್

ಈ ಸೀಸನ್​ನ ಬಿಗ್​ ಬಾಸ್​ ಮನೆಯಲ್ಲಿ ಎರಡು ಭಾಗ ಆಗಿದೆ. ಸ್ವರ್ಗ ಮತ್ತು ನರಕ ಎಂಬ ಎರಡು ಪ್ರತ್ಯೇಕ ಜಾಗ ಇದೆ. ನರಕದವರಿಗೆ ಹೆಚ್ಚಿನ ಸೌಕರ್ಯಗಳು ಇಲ್ಲ. ಆದರೆ ಸ್ವರ್ಗದವರಿಗೆ ಒಂದಷ್ಟು ಸೌಲಭ್ಯಗಳನ್ನು ನೀಡಲಾಗಿದೆ. ಈ ಮಧ್ಯೆ ಜಗದೀಶ್ ಅವರು ಕಿರಿಕ್ ಮಾಡಿಕೊಳ್ಳುವ ಸೂಚನೆ ಕೊಟ್ಟಿದ್ದಾರೆ.

‘ಈ ವಾರ ಇನ್ನೂ ಕೆಟ್ಟದಾಗಿರುತ್ತದೆ’; ಸೂಚನೆ ಕೊಟ್ಟ ಜಗದೀಶ್
ಜಗದೀಶ್
Follow us
|

Updated on: Oct 08, 2024 | 7:26 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ ಎರಡನೇ ವಾರಕ್ಕೆ ಕಾಲಿಟ್ಟಿದೆ. ಕಳೆದ ವರ್ಷದಂತೆ ಈ ವರ್ಷವೂ ಯಾವುದೇ ಹಾಸ್ಯ ಘಟನೆಗಳು ನಡೆಯುತ್ತಿವೆ. ಮುಂಜಾನೆಯಿಂದ ಸಂಜೆಯವರೆಗೆ ದೊಡ್ಮನೆಯಲ್ಲಿ ನಡೆಯುತ್ತಿರುವುದು ಕೇವಲ ಗಲಾಟೆಯೇ. ಅದರಲ್ಲೂ ಬಿಗ್ ಬಾಸ್ ಮನೆಯ ವಾತಾವರಣವನ್ನು ಹಾಳು ಮಾಡುವ ಕೆಲಸವನ್ನು ಜಗದೀಶ್ ಮಾಡುತ್ತಿದ್ದಾರೆ. ಈ ವಾರವೂ ಅದು ಮುಂದುವರಿಯಲಿದೆ ಎಂದು ಜದೀಶ್ ಅವರು ಎಚ್ಚರಿಕೆ ಕೊಟ್ಟಿದ್ದಾರೆ.

ಕಳೆದ ವಾರ ಜಗದೀಶ್ ಅವರು ‘ಬಿಗ್ ಬಾಸ್’ ಮನೆಯಲ್ಲಿ ಸಾಕಷ್ಟು ಕಿತ್ತಾಡಿಕೊಂಡಿದ್ದರು. ಅವರು ಸುಖಾಸುಮ್ಮನೆ ಎಲ್ಲರ ವಿರುದ್ಧವೂ ಕಾಲ್ಕೆರೆದುಕೊಂಡು ಜಗಳಕ್ಕೆ ಹೋಗಿದ್ದರು. ಈಗಲೂ ಹಾಗೆಯೇ ಆಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಎರಡನೇ ವಾರದಲ್ಲಿ ಜಗದೀಶ್ ಅವರು ಹೋರಾಟಕ್ಕೆ ಇಳಿದಿದ್ದಾರೆ. ಕಳೆದ ವಾರಕ್ಕಿಂತ ಈ ವಾರ ಇನ್ನೂ ಕೆಟ್ಟದಾಗಿರುತ್ತದೆ ಎನ್ನುವ ಎಚ್ಚರಿಕೆ ನೀಡಿದ್ದಾರೆ. ಅದಕ್ಕೆ ತಕ್ಕಂತೆ ಮನೆಯ ವಾತಾವರಣ ಬದಲಿಸುತ್ತಿದ್ದಾರೆ.

ಈ ಬಾರಿ ಬಿಗ್ ಬಾಸ್​ನಲ್ಲಿ ಸ್ವರ್ಗ ಹಾಗೂ ನರಕ ಕಾನ್ಸೆಪ್ಟ್ ತರಲಾಗಿದೆ. ಇಷ್ಟು ದಿನ ಜಗದೀಶ್ ಅವರು ಸ್ವರ್ಗದಲ್ಲಿ ಇದ್ದರು. ಅವರಿಗೆ ನರಕವನ್ನು ನೀಡುವ ಆದೇಶವನ್ನು ಕ್ಯಾಪ್ಟನ್ ಹಂಸ ತೆಗೆದುಕೊಂಡಿದ್ದಾರೆ. ನರಕದಲ್ಲಿದ್ದ ರಂಜಿತ್ ಸ್ವರ್ಗಕ್ಕೆ ಬಂದಿದ್ದಾರೆ. ಇದು ಜಗದೀಶ್​ಗೆ ಸಾಕಷ್ಟು ಕೋಪ ತರಿಸಿದೆ. ಈ ಕಾರಣಕ್ಕೆ ಅವರು ತಿರುಗಿ ಬಿದ್ದಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ನಲ್ಲಿ ಕಲುಷಿತ ನೀರಿನಿಂದ ಸ್ಪರ್ಧಿಗಳಿಗೆ ಅನಾರೋಗ್ಯ? ಪ್ರತಿಭಟನೆ ಮಾಡ್ತಾರಂತೆ ಜಗದೀಶ್

ಕಲುಷಿತ ನೀರಿನ ಕಾರಣಕ್ಕೆ ದೊಡ್ಮನೆಯಲ್ಲಿ ಸಮಸ್ಯೆ ಆಗಿದೆ ಸುಖಾಸುಮ್ಮನೆ ಗಲಾಟೆ ಎಬ್ಬಿಸಿದರು ಜಗದೀಶ್. ಇದು ಸುಳ್ಳು ಅನ್ನೋದು ಎಲ್ಲರಿಗೂ ಗೊತ್ತಿತ್ತು. ಆದರೂ ಈ ವಿಚಾರವನ್ನು ಅವರು ದೊಡ್ಡದು ಮಾಡಲು ಹೋದರು. ಇಷ್ಟಕ್ಕೆ ಅವರ ಹಾರಾಟ ನಿಂತಿಲ್ಲ. ಅವರು ಹಂಸ ಅವರನ್ನು ಕರೆದು ಪದೇ ಪದೇ ಕಿರಿಕ್ ಮಾಡಿಕೊಳ್ಳುತ್ತಾ ಇದ್ದರು. ಇಡೀ ವಾರ ಇದೇ ರೀತಿ ಇರುವ ಸೂಚನೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ