AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಲ್ಲಿ ವಿಷಯದಲ್ಲಿ ಜಗ್ಗೇಶ್ ಹೇಳಿದ ಮಾತು ನಿಜವಾಗಿ ಹೋಯ್ತು

'ಕಾಮಿಡಿ ಕಿಲಾಡಿಗಳು' ವೇದಿಕೆಯಲ್ಲಿ ಜಗ್ಗೇಶ್ ಅವರು ಗಿಲ್ಲಿ ನಟನ ಬಗ್ಗೆ ಹೇಳಿದ್ದ ಭವಿಷ್ಯ ನಿಜವಾಗಿದೆ. ಬಿಗ್ ಬಾಸ್ ನಂತರ ಗಿಲ್ಲಿ ಸಾಮಾಜಿಕ ಮಾಧ್ಯಮದಲ್ಲಿ 1 ಲಕ್ಷದಿಂದ 13 ಲಕ್ಷ ಹಿಂಬಾಲಕರನ್ನು ಪಡೆದು ಜನಪ್ರಿಯತೆ ಗಿಟ್ಟಿಸಿದ್ದಾರೆ. ಜಗ್ಗೇಶ್ ಹೇಳಿದಂತೆ ಈಗ ಬಾಡಿಗಾರ್ಡ್ ಇಟ್ಟುಕೊಂಡು ಓಡಾಡಬೇಕಾದ ಪರಿಸ್ಥಿತಿ ಅವರಿಗೆ ಎದುರಾಗಿದೆ.

ಗಿಲ್ಲಿ ವಿಷಯದಲ್ಲಿ ಜಗ್ಗೇಶ್ ಹೇಳಿದ ಮಾತು ನಿಜವಾಗಿ ಹೋಯ್ತು
ಜಗ್ಗೇಶ್-ಗಿಲ್ಲಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jan 14, 2026 | 8:47 AM

Share

ನಟ ಜಗ್ಗೇಶ್ ಅವರದ್ದು ವಿಶೇಷ ವ್ಯಕ್ತಿತ್ವ. ಅವರಿಗೆ ಯಾರಾದರೂ ಇಷ್ಟ ಆದರೆ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡುತ್ತಾರೆ. ಅವರ ಬಗ್ಗೆ ವೇದಿಕೆ ಮೇಲೆ ಹೊಗಳುತ್ತಾರೆ. ಅನೇಕ ವೇದಿಕೆಗಳ ಮೇಲೆ ಅವರು ಈ ರೀತಿ ಮಾಡಿದ ಉದಾಹರಣೆ ಇದೆ. ಈ ಮೊದಲು ಗಿಲ್ಲಿ ನಟನ ಬಗ್ಗೆ ಜಗ್ಗೇಶ್ ಹೇಳಿದ ಮಾತೊಂದು ಈಗ ವೈರಲ್ ಆಗುತ್ತಿದೆ. ಅವರು ಹೇಳಿದ ಮಾತು ನಿಜವಾಗಿದೆ ಎಂದು ಫ್ಯಾನ್ಸ್ ಹೇಳುತ್ತಿದ್ದಾರೆ.

ಜಗ್ಗೇಶ್ ಅವರು ರಾಯರ ಭಕ್ತರು. ಕೆಲವರಿಗೆ ಒಳ್ಳೆಯದಾಗಲಿ ಎಂದು ಅವರು ಪ್ರಿತಿಯಿಂದ ಹರಸುತ್ತಾರೆ.ಆ ವ್ಯಕ್ತಿ ಜಗ್ಗೇಶ್​​ಗೆ ಇಷ್ಟ ಆಗಬೇಕು. ಆಗ ಈ ರೀತಿಯ ಹಾರೈಕೆ ಸಿಗುತ್ತದೆ. ಈ ರೀತಿ ಆಶೀರ್ವಾದ ಪಡೆದ ಅನೇಕರಿಗೆ ಒಳ್ಳೆಯದಾಗಿದೆ. ಅವರಿಗೆ ಗಿಲ್ಲಿ ಕಾಮಿಡಿ ಹಾಗೂ ಪ್ರಾಪರ್ಟಿ ಕಾಮಿಡಿಗಳು ಇಷ್ಟ ಆಗುತ್ತಿದ್ದವು. ಈ ಕಾರಣದಿಂದಲೇ ಅವರು ಮನಸಾರೆ ಹಾರೈಸಿದ್ದರು.

ಇದನ್ನೂ ಓದಿ: ಗಿಲ್ಲಿ ಗೆಲ್ಲೋ ಸೂಚನೆ ಕೊಟ್ರಾ ಬಿಗ್ ಬಾಸ್? ಅಭಿಮಾನಿಗಳ ಮುಂದೆಯೇ ಘೋಷಣೆ

‘ಕಾಮಿಡಿ ಕಿಲಾಡಿಗಳು’ ವೇದಿಕೆಗೆ ಜಗ್ಗೇಶ್ ಅವರು ಜಡ್ಜ್ ಸ್ಥಾನದಲ್ಲಿದ್ದರು. ವೇದಿಕೆ ಮೇಲೆ ಗಿಲ್ಲಿ ಕೂಡ ಇದ್ದರು. ಆ ಸಂದರ್ಭದಲ್ಲಿ ಮಾತನಾಡಿದ್ದ ಜಗ್ಗೇಶ್ ಅವರು, ‘ಮುಂದಿನ ವರ್ಷ ಇಷ್ಟು ಹೊತ್ತಿಗೆ ಚತ್ರಿ ಹಿಡಿಯೋಕೆ ಒಬ್ಬರನ್ನು ಇಟ್ಟುಕೊಂಡು, ಬಾಡಿಗಾರ್ಡ್​​​ನ ಹಾಕಿಕೊಂಡು ಓಡಾಡುವ ಮಟ್ಟಕ್ಕೆ ಈತ ಬೆಳೆಯುತ್ತಾನೆ’ ಎಂದು ಗಿಲ್ಲಿ ಬಗ್ಗೆ ಜಗ್ಗೇಶ್ ಹೇಳಿದ್ದರು. ಅದು ಈಗ ನಿಜವಾಗಿದೆ.

View this post on Instagram

A post shared by PUBLIC POWER (@publicpower4)

ಗಿಲ್ಲಿ ನಟ ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಅವರು ಬಿಗ್ ಬಾಸ್​​ಗೆ ಸೇರುವಾಗ 1 ಲಕ್ಷ ಹಿಂಬಾಲಕರು ಇದ್ದರು. ಅದು ಈಗ 13 ಲಕ್ಷಕ್ಕೆ ಏರಿಕೆ ಆಗಿದೆ. ಈ ವಿಷಯ ಅಭಿಮಾನಿಗಳಿಗೆ ಖುಷಿ ನೀಡಿದೆ. ಈಗ ಅವರು ಹೊರಗೆ ಕಾಣಿಸಿಕೊಂಡರೆ ಬಾಡಿಗಾರ್ಡ್​​ನ ಇಟ್ಟುಕೊಳ್ಳಲೇಬೇಕಾದ ಪರಿಸ್ಥಿತಿ ಎದುರಾಗಿದೆ. ಆ ಮಟ್ಟದ ಜನಪ್ರಿಯತೆಯನ್ನು ಅವರು ಪಡೆದಿದ್ದಾರೆ. ಶಿವರಾಜ್​​ಕುಮಾರ್ ಕೂಡ ಗಿಲ್ಲಿ ನಟ ಅವರನ್ನು ಮೆಚ್ಚಿಕೊಂಡಿದ್ದರು. ಗಿಲ್ಲಿ ಬಗ್ಗೆ ಅವರು ಖುಷಿ ವ್ಯಕ್ತಪಡಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!