AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weekend With Ramesh: ಈ ವಾರ ವೀಕೆಂಡ್ ವಿತ್ ರಮೇಶ್ ಅತಿಥಿಗಳು ಇವರೇ

Weekend With Ramesh: ಕಳೆದ ಭಾನುವಾರ ಪ್ರಸಾರವಾಗದೇ ನಿರಾಸೆ ಮೂಡಿಸಿದ್ದ ವೀಕೆಂಡ್ ವಿತ್ ರಮೇಶ್ ಈ ವಾರ ಇಬ್ಬರು ಅತಿಥಿಗಳೊಟ್ಟಿಗೆ ಬಂದಿದೆ. ಅತಿಥಿಗಳ್ಯಾರು ಗುರುತಿಸಬಲ್ಲಿರಾ?

Weekend With Ramesh: ಈ ವಾರ ವೀಕೆಂಡ್ ವಿತ್ ರಮೇಶ್ ಅತಿಥಿಗಳು ಇವರೇ
ವೀಕೆಂಡ್ ವಿತ್ ರಮೇಶ್
ಮಂಜುನಾಥ ಸಿ.
|

Updated on: May 26, 2023 | 9:22 PM

Share

ವೀಕೆಂಡ್ ವಿತ್ ರಮೇಶ್ (Weekend With Ramesh) ಐದನೇ ಸೀಸನ್ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದ್ದ ಬೆನ್ನಲ್ಲೆ ಕಳೆದ ಭಾನುವಾರ ಅಭಿಮಾನಿಗಳಿಗೆ ನಿರಾಸೆ ಮೂಡಿಸಿತ್ತು. ಶನಿವಾರದ ಎಪಿಸೋಡ್​ನಲ್ಲಿ ಸ್ಯಾಂಡಲ್​ವುಡ್​ನ ಜನಪ್ರಿಯ ಗೀತ ಸಾಹಿತಿ ನಾಗೇಂದ್ರ ಪ್ರಸಾದ್ (Nagendra Prasad) ಅವರ ಜೀವನ ಪರಿಚಯಿಸಿದ್ದು ವೀಕೆಂಡ್ ವಿತ್ ರಮೇಶ್, ಭಾನುವಾರ ಪ್ರಸಾರವೇ ಆಗಲಿಲ್ಲ. ಇದು ಹಲವರಿಗೆ ಆಶ್ಚರ್ಯ ತಂದಿತ್ತು. ಮಾತ್ರವಲ್ಲದೆ, ಈ ವಾರವೂ ಸಹ ಬಹಳ ತಡವಾಗಿ ಅತಿಥಿಗಳ ಕುರಿತು ಪ್ರೋಮೋ ಬಿಡುಗಡೆ ಮಾಡಿದೆ.

ಈ ವಾರ ಒಬ್ಬರು ಹೆಸರಾಂತ ಸಾಹಿತಿ ಹಾಗೂ ಮತ್ತೊಬ್ಬರು ಹಿರಿಯ ನಟರನ್ನು ಅತಿಥಿಗಳನ್ನಾಗಿ ಆಹ್ವಾನಿಸಲಾಗಿದೆ. ಶನಿವಾರದ ಎಪಿಸೋಡ್​ಗೆ ಸಾಹಿತಿ ದೊಡ್ಡರಂಗೇಗೌಡರು ಅತಿಥಿಯಾಗಿದ್ದರೆ ಭಾನುವಾರದ ಎಪಿಸೋಡ್​ಗೆ ನಟ, ನಿರ್ಮಾಪಕ, ನಿರ್ದೇಶಕ ಜೈ ಜಗದೀಶ್ ಅತಿಥಿಯಾಗಿದ್ದಾರೆ. ಇಬ್ಬರು ಅತಿಥಿಗಳ ಎಪಿಸೋಡ್ ಪ್ರೋಮೋಗಳನ್ನು ಜೀ ಕನ್ನಡ ವಾಹಿನಿ ಈಗಾಗಲೇ ಹಂಚಿಕೊಂಡಿದೆ.

ದೊಡ್ಡರಂಗೇಗೌಡರು ನಾಡಿನ ಹೆಸರಾಂತ ಸಾಹಿತಿಗಳಾಗಿರುವ ಜೊತೆಗೆ ಚಿತ್ರರಂಗದೊಂದಿಗೂ ಗಾಢ ನಂಟು ಹೊಂದಿದ್ದಾರೆ. ಕೆಲವು ಅವಿಸ್ಮರಣೀಯ ಹಾಡುಗಳನ್ನು ದೊಡ್ಡರಂಗೇಗೌಡರು ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ. ನೋಟದಾಗೆ ನಗೆಯ ಬೀರಿ, ಅಲೆಮನೆ ಸಿನಿಮಾದ ನಮ್ಮೂರ ಮಂದಾರ ಹೂವೆ, ತೇರಾ ಏರಿ ಅಂಬರದಾಗೆ ಹಾಡುಗಳು ಸೇರಿದಂತೆ ಸುಮಾರು 500 ಕ್ಕೂ ಹೆಚ್ಚು ಹಾಡುಗಳನ್ನು ದೊಡ್ಡರಂಗೇಗೌಡರು ಬರೆದಿದ್ದಾರೆ. 10 ಸಿನಿಮಾಕ್ಕೆ ಸಂಭಾಷಣೆ ಹಾಗೂ 100ಕ್ಕೂ ಹೆಚ್ಚು ಕಿರು-ಧಾರಾವಾಹಿಗಳಿಗೆ ಚಿತ್ರಕತೆ ಬರೆದಿದ್ದಾರೆ.

ಪದ್ಮಶ್ರೀ ಪುರಸ್ಕೃತರೂ ನಾಗಿರುವ ದೊಡ್ಡರಂಗೇಗೌಡರು ವೀಕೆಂಡ್ ವಿತ್ ರಮೇಶ್​ ಕಾರ್ಯಕ್ರಮದಲ್ಲಿ ತಮ್ಮ ಬಾಲ್ಯ, ಶಿಕ್ಷಣ, ಸಾಹಿತ್ಯ ರಚನೆ, ಕನ್ನಡದ ಮೇಲಿನ ಪ್ರೇಮ ಇನ್ನೂ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಅಂದಹಾಗೆ ದೊಡ್ಡರಂಗೇಗೌಡರು ಹಾಗೂ ಇನ್​ಫೋಸಿಸ್​ನ ನಾರಾಯಣಮೂರ್ತಿಯರು ಶಾಲಾ ದಿನಗಳಲ್ಲಿ ಸಹಪಾಠಿಗಳಾಗಿದ್ದವರು. ಈ ಬಗ್ಗೆಯೂ ದೊಡ್ಡರಂಗೇಗೌಡರು ಮಾತನಾಡಿದ್ದಾರೆ.

ಇನ್ನು ಭಾನುವಾರದ ಅತಿಥಿ ಜೈ ಜಗದೀಶ್, ಕನ್ನಡದ ಜನಪ್ರಿಯ ನಟ. ಪುಟ್ಟಣ್ಣ ಕಣಗಾಲ್​ರಿಂದ 1976 ರಲ್ಲಿ ಚಿತ್ರರಂಗಕ್ಕೆ ಪರಿಚಯಿಸಲ್ಪಟ್ಟ ಜೈ ಜಗದೀಶ್ ಐದು ದಶಕಗಳಿಂದಲೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ನಾಯಕನಾಗಿ, ಪೋಷಕ ನಟನಾಗಿ, ವಿಲನ್ ಆಗಿ ಎಲ್ಲ ರೀತಿಯ ಪಾತ್ರಗಳಲ್ಲಿಯೂ ನಟಿಸಿರುವ ಜೈ ಜಗದೀಶ್, ಶಿವರಾಜ್ ಕುಮಾರ್ ನಟನೆಯ ಭೂಮಿ ತಾಯಿ ಚೊಚ್ಚಲ ಮಗ ಸಿನಿಮಾ ಮೂಲಕ ನಿರ್ಮಾಣಕ್ಕೂ ಕೈ ಹಾಕಿದರು. ಕೆಲವು ಸಿನಿಮಾಗಳ ನಿರ್ದೇಶನವನ್ನೂ ಜೈ ಜಗದೀಶ್ ಮಾಡಿದ್ದಾರೆ. ಅವರ ನಟನೆಯ ಬಂಧನ, ಬೆಂಕಿಯಲ್ಲಿ ಅರಳಿದ ಗುಲಾಬಿ, ಮದುವೆ ಮಾಡು ತಮಾಷೆ ನೋಡಿ, ಗರ್ಜನೆ ಇನ್ನೂ ಹಲವು ಸಿನಿಮಾಗಳು ಕನ್ನಡ ಸಿನಿ ಪ್ರೇಮಿಗಳ ನೆನಪಿನಲ್ಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..