AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆನ್ಸಾರ್ ಮಂಡಳಿ ವಿರುದ್ಧದ ಅರ್ಜಿ ಹಿಂಪಡೆದ ‘ಜನ ನಾಯಗನ್’; ಮುಂದಿನ ನಡೆ ಏನು?

ವಿಜಯ್ ನಟನೆಯ 'ಜನ ನಾಯಗನ್' ಸಿನಿಮಾ ರಿಲೀಸ್‌ಗೆ ಸಾಕಷ್ಟು ಅಡಚಣೆಗಳು ಎದುರಾಗಿವೆ. ಮದ್ರಾಸ್ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಕೆವಿಎನ್ ಸಂಸ್ಥೆ ಹಿಂದಕ್ಕೆ ಪಡೆದಿದೆ. ಇದೀಗ ಚಿತ್ರ ತಂಡ ಸೆನ್ಸಾರ್ ಪ್ರಮಾಣಪತ್ರಕ್ಕಾಗಿ ಪರಿಷ್ಕರಣಾ ಸಮಿತಿ ಮೊರೆ ಹೋಗಲು ನಿರ್ಧರಿಸಿದೆ. ಫೆಬ್ರವರಿ 25ರೊಳಗೆ ಪ್ರಮಾಣಪತ್ರ ಸಿಕ್ಕರೆ ರಿಲೀಸ್ ಸಾಧ್ಯತೆ.

ಸೆನ್ಸಾರ್ ಮಂಡಳಿ ವಿರುದ್ಧದ ಅರ್ಜಿ ಹಿಂಪಡೆದ ‘ಜನ ನಾಯಗನ್’; ಮುಂದಿನ ನಡೆ ಏನು?
ಜನ ನಾಯಗನ್
ರಾಜೇಶ್ ದುಗ್ಗುಮನೆ
|

Updated on: Feb 10, 2026 | 2:28 PM

Share

‘ಜನ ನಾಯಗನ್’ ಸಿನಿಮಾ (Jana Nayagan Movie) ರಿಲೀಸ್ ಆಗಲು ಸಾಕಷ್ಟು ಅಡಚಣೆ ಉಂಟಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್​​​ನಲ್ಲಿ ಕೆವಿಎನ್ ಸಂಸ್ಥೆ ಅರ್ಜಿ ಸಲ್ಲಿಕೆ ಮಾಡಿತ್ತು. ಆದರೆ, ಈಗ ಅರ್ಜಿಯನ್ನು ಕೆವಿಎನ್ ಸಂಸ್ಥೆ ಹಿಂದಕ್ಕೆ ಪಡೆದಿದೆ. ಈ ಮೂಲಕ ತಂಡದ ಮುಂದಿನ ನಡೆ ಏನು ಎಂಬ ಕುತೂಹಲ ಮೂಡಿದೆ. ಸಿನಿಮಾ ಶೀಘ್ರವೇ ತೆರೆಗೆ ಬರುತ್ತದೆಯೇ ಎಂಬ ಪ್ರಶ್ನೆ ಕಾಡುತ್ತಿದೆ.

ಜನವರಿ 9ರಂದು ವಿಜಯ್ ನಟನೆಯ ‘ಜನ ನಾಯಗನ್’ ರಿಲೀಸ್ ಆಗಬೇಕಿತ್ತು. ಹೀಗಾಗಿ ಸೆನ್ಸಾರ್ ಪ್ರಮಾಣ ಪತ್ರಕ್ಕಾಗಿ ಡಿಸೆಂಬರ್​​ನಲ್ಲೇ ಅರ್ಜಿ ಸಲ್ಲಿಕೆ ಮಾಡಿತ್ತು. ಆದರೆ, ತಂಡಕ್ಕೆ ಸೆನ್ಸಾರ್ ಪ್ರಮಾಣಪತ್ರ ಸಿಕ್ಕಿರಲಿಲ್ಲ. ಸಿನಿಮಾ ರಿಲೀಸ್​​ಗೆ ಕೆಲವೇ ದಿನ ಬಾಕಿ ಇರುವಾಗ ನಿರ್ಮಾಣ ಸಂಸ್ಥೆ ಕೆವಿಎನ್ ಮದ್ರಾಸ್ ಹೈಕೋರ್ಟ್​​ನಲ್ಲಿ ತುರ್ತು ಅರ್ಜಿ ಸಲ್ಲಿಕೆ ಮಾಡಿತ್ತು.

ಜನವರಿ 9ರಂದು ‘ಸೆನ್ಸಾರ್ ಪ್ರಮಾಣ ಪತ್ರ ನೀಡಿ’ ಎಂದು ಕೋರ್ಟ್​ ಸೆನ್ಸಾರ್ ಮಂಡಳಿಗೆ ಆದೇಶ ನೀಡಿತ್ತು. ಅದೇ ದಿನ ಸಂಜೆ ಮುಖ್ಯ ನ್ಯಾಯಮೂರ್ತಿ ಎಂಎಂ ಶ್ರೀವಾಸ್ತವ ಮತ್ತು ನ್ಯಾಯಮೂರ್ತಿ ಅರುಲ್ ಮುರುಗನ್ ಅವರು ಈ ಆದೇಶಕ್ಕೆ ತಡೆ ನೀಡಿದರು.

ಈಗ ಪ್ರಕರಣ ಕೋರ್ಟ್​​ನಲ್ಲೇ ಇದ್ದು ತಿಂಗಳಾಗಿದೆ. ಆದರೆ, ಈವರೆಗೆ ಆದೇಶ ಹೊರ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿಯನ್ನು ಕೆವಿಎನ್ ಹಿಂಪಡೆದಿದೆ. ಅಲ್ಲದೆ, ಈ ವಿಷಯವಾಗಿ ತಂಡ ಪರಿಷ್ಕರಣಾ ಸಮಿತಿ ಮೆಟ್ಟಿಲು ಹತ್ತಲಿದೆ. ಅಲ್ಲಿ ಸಿನಿಮಾ ವೀಕ್ಷಣೆ ಆದ ಬಳಿಕ ಸಿನಿಮಾ ರಿಲೀಸ್ ಮಾಡುವ ಆಲೋಚನೆ ತಂಡಕ್ಕೆ ಇದೆ.

ಇದನ್ನೂ ಓದಿ: ಕೊನೆಗೂ ಮಂಡಿಯೂರಿದ ‘ಜನ ನಾಯಗನ್’; ರಿಲೀಸ್ ಮತ್ತಷ್ಟು ವಿಳಂಬ?

ವಿಮರ್ಷೆ ಸಮಿತಿಗೆ ಸಿನಿಮಾ ಸಲ್ಲಿಕೆ ಆದ ಬಳಿಕ 15 ದಿನಗಳಲ್ಲಿ ಸಿನಿಮಾ ರಿವ್ಯೂ ಆಗಿ ಸೆನ್ಸಾರ್ ಪ್ರಮಾಣಪತ್ರ ನೀಡಬೇಕು. ಹೀಗಾಗಿ, ಫೆಬ್ರವರಿ 25ರವೇಳೆಗೆ ಸಿನಿಮಾ ಪ್ರಮಾಣ ಪತ್ರ ಕೈ ಸೇರಿದರೆ ಆ ಬಳಿಕ ಸಿನಿಮಾ ರಿಲೀಸ್ ಆಗುವ ಸಾಧ್ಯತೆ ಇದೆ. ಈ ಮಧ್ಯೆ ತಂಡಕ್ಕೆ ಮತ್ತೊಂದು ಭಯ ಕೂಡ ಇದೆ. ತಮಿಳುನಾಡಲ್ಲಿ ಶೀಘ್ರವೇ ವಿಧಾನಸಭೆ ಚುನಾವಣೆ ನಡೆಯಲಿದೆ. ಅದರ ದಿನಾಂಕ ಘೋಷಣೆ ಆದರೆ, ‘ಜನ ನಾಯಗನ್’ ರಿಲೀಸ್ ಮತ್ತಷ್ಟು ವಿಳಂಬ ಆಗಲಿದೆ. ವಿಜಯ್ ಅವರು ರಾಜಕೀಯಕ್ಕೆ ಕಾಲಿಟ್ಟಿದ್ದು, ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಚಿತ್ರರಂಗಕ್ಕೆ 93 ವರ್ಷ: ನಡೆದು ಬಂದ ಹಾದಿಯ ನೆನೆದ ಜಯಮಾಲ
ಚಿತ್ರರಂಗಕ್ಕೆ 93 ವರ್ಷ: ನಡೆದು ಬಂದ ಹಾದಿಯ ನೆನೆದ ಜಯಮಾಲ
ಮುದ್ದು ಮಗಳ ಹುಟ್ಟುಹಬ್ಬಕ್ಕೆ ಮುದ್ದಾದ ವಿಡಿಯೋ ಹಂಚಿಕೊಂಡ ರಿಷಬ್ ಶೆಟ್ಟಿ
ಮುದ್ದು ಮಗಳ ಹುಟ್ಟುಹಬ್ಬಕ್ಕೆ ಮುದ್ದಾದ ವಿಡಿಯೋ ಹಂಚಿಕೊಂಡ ರಿಷಬ್ ಶೆಟ್ಟಿ