AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ವಿನಿ ಸಹವಾಸ ಬಿಟ್ಟು ನೆಗೆಟಿವ್ ಶೇಡ್​ನಿಂದ ಹೊರ ಬಂದ ಜಾನ್ವಿ

ಬಿಗ್ ಬಾಸ್ ಕನ್ನಡ 12 ರಲ್ಲಿ ಜಾನ್ವಿ ಅಶ್ವಿನಿ ಗೌಡ ಸಹವಾಸದಿಂದ ದೂರವಾದ ನಂತರ ಸಕಾರಾತ್ಮಕ ಬದಲಾವಣೆ ಕಂಡಿದ್ದಾರೆ. ಅವರ ಆರಂಭದ ದಿನಗಳಲ್ಲಿ ಅಶ್ವಿನಿ ಜೊತೆಗಿನ ನಿಕಟ ಬಾಂಧವ್ಯದಿಂದ ನಕಾರಾತ್ಮಕ ಇಮೇಜ್ ಸೃಷ್ಟಿಯಾಗಿತ್ತು. ಈಗ ಜಾನ್ವಿ ಹೊಸ ಗೆಳೆಯರೊಂದಿಗೆ ಬೆರೆತು, ಸಾಮಾಜಿಕ ಮಾಧ್ಯಮದಲ್ಲಿ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದ್ದಾರೆ.

ಅಶ್ವಿನಿ ಸಹವಾಸ ಬಿಟ್ಟು ನೆಗೆಟಿವ್ ಶೇಡ್​ನಿಂದ ಹೊರ ಬಂದ ಜಾನ್ವಿ
ಜಾನ್ವಿ-ಅಶ್ವಿನಿ
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Nov 04, 2025 | 8:12 AM

Share

ಬಿಗ್ ಬಾಸ್ (Bigg Boss) ಮನೆಯಲ್ಲಿ ಯಾವಾಗ ಯಾರು ಹೇಗೆ ಬದಲಾಗುತ್ತಾರೆ ಎಂದು ಹೇಳಲು ಸಾಧ್ಯವೇ ಇಲ್ಲ. ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿಯೂ ಹಾಗೆಯೇ ಆಗಿದೆ. ಅಶ್ವಿನಿ ಗೌಡ ಹಾಗೂ ಜಾನ್ವಿ ಅವರು ಒಟ್ಟಿಗೆ ಇರುತ್ತಿದ್ದರು. ಇವರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದ್ದನ್ನು ನೀವು ಕಾಣಬಹುದು. ಆದರೆ, ಈಗ ಇವರು ಬೇರೆ ಆಗಿದ್ದಾರೆ. ಇದಕ್ಕೆ ಕಾರಣ ಏನು ಎಂಬುದು ಎಲ್ಲರಿಗೂ ಗೊತ್ತಿದೆ. ಅವರ ಸಹವಾಸ ಬಿಟ್ಟ ಬಳಿಕ ಅವರು ನೆಗೆಟಿವ್ ಶೇಡ್​ನಿಂದ ಹೊರಕ್ಕೆ ಬಂದಿದ್ದಾರೆ ಎಂಬ ಅಭಿಪ್ರಾಯ ಸೋಶಿಯಲ್ ಮೀಡಿಯಾದಲ್ಲಿ ವ್ಯಕ್ತವಾಗಿದೆ.

ಬಿಗ್ ಬಾಸ್​ಗೆ ಬಂದಾಗ ಅಶ್ವಿನಿ ಗೌಡ ಹಾಗೂ ಜಾನ್ವಿ ಒಟ್ಟಾಗಿ ಸುತ್ತಾಡಿದ್ದನ್ನು ನೀವು ಕಾಣಬಹುದು. ದಿಗಳನು ಉರುಳಿದಂತೆ ಇವರ ಮಧ್ಯೆ ಬಾಂಧವ್ಯ ಹೆಚ್ಚಿತು. ಜೊತೆಗೆ ಚೇಷ್ಟೆ ಕೂಡ ಹೆಚ್ಚಿದವು. ಅಶ್ವಿನಿ ಗೌಡ ಹಾಗೂ ಜಾನ್ವಿ ಇಬ್ಬರೂ ಸೇರಿಕೊಂಡು ರಕ್ಷಿತಾ ಶೆಟ್ಟಿಗೆ ತೊಂದರೆ ಕೊಟ್ಟಿದ್ದನ್ನು ನೀವು ಕಂಡಿರಬಹುದು. ಇದರಿಂದಾಗಿ ಸುದೀಪ್ ಅವರು ಜಾನ್ವಿಗೆ ಪಾಠ ಹೇಳಿದರು.

ಆ ಬಳಿಕವೂ ಅವರು ಅಶ್ವಿನಿ ಸಹವಾಸನ್ನು ಬಿಟ್ಟಿಲ್ಲ ಎಂಬುದು ಇಲ್ಲಿ ಗಮನಿಸಲೇಬೇಕಾದ ವಿಚಾರ ಆಗಿತ್ತು. ಕೊನೆಗೂ ಎಚ್ಚೆತ್ತುಕೊಂಡ ಅವರು ಅಶ್ವಿನಿ ಸಹವಾಸದಿಂದ ದೂರ ಬಂದರು. ಕಡಿಮೆ ದಿನ ಇದ್ದರೂ ತೊಂದರೆ ಇಲ್ಲ, ಬಿಗ್ ಬಾಸ್ ಅಲ್ಲಿ ನೆಗೆಟಿವ್ ಆಗಿ ಕಾಣಿಸಿಕೊಳ್ಳಬೇಡ ಎಂದು ಜಾನ್ವಿಗೆ ಮನೆಯಲ್ಲಿ ಕಿವಿ ಮಾತು ಹೇಳಿದ್ದರಂತೆ. ಇದನ್ನು ನೆನೆದು ಜಾನ್ವಿ ಅವರು ಬೇಸರ ಮಾಡಿಕೊಂಡರು. ನಾನು ಹೇಗೆಲ್ಲ ಕಂಡಿರಬಹುದು ಎಂದು ಅವರಿಗೆ ಅನಿಸಿತು.

ಈಗ ಅಶ್ವಿನಿ ಗೌಡ ಅವರ ಸಹವಾಸವನ್ನು ಜಾನ್ವಿ ಅವರು ಸಂಪೂರ್ಣವಾಗಿ ತೊರೆದಿದ್ದಾರೆ. ಈ ಕಾರಣಕ್ಕೆ ಅವರು ಹೆಚ್ಚು ಹೈಲೈಟ್ ಆಗುತ್ತಿಲ್ಲ ನಿಜ. ಆದರೆ, ಅವರು ನೆಗೆಟಿವ್ ಶೇಡ್​ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಅವರು ಸ್ಪಂದನಾ, ಕಾವ್ಯಾ ಇತರರ ಜೊತೆ ಬೆರೆಯುತ್ತಿದ್ದಾರೆ. ಇದು ಅನೇಕರ ಖುಷಿಗೆ ಕಾರಣ ಆಗಿದೆ.

ಇದನ್ನೂ ಓದಿ: ‘ನಿಮ್ಮನ್ನು ಕಳಿಸಿಯೇ ನಾನು ಹೋಗೋದು’; ಅಶ್ವಿನಿ ಎದುರು ಶಪಥ ಮಾಡಿದ ರಕ್ಷಿತಾ

ಜಾನ್ವಿ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪಾಸಿಟಿವ್ ಮಾತುಗಳನ್ನು ನೀವು ಕಾಣಬಹುದು. ಅವರು ಇನ್ನಷ್ಟು ದಿನ ದೊಡ್ಮನೆಯಲ್ಲಿ ಇರಲಿ ಎಂಬುದು ಅವರ ಫ್ಯಾನ್ಸ್ ಕೋರಿಕೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ