AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೂ ಒಪ್ಪದ ಕೆಲಸ ಮಾಡಿದ ಜಾನ್ವಿ ಆ್ಯಂಡ್ ಟೀಂ; ಬಿಗ್ ಬಾಸ್ ದೊಡ್ಡ ಶಿಕ್ಷೆ  

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಜಾನ್ವಿ ಅವರು ಕಾಫಿ ಪುಡಿಯನ್ನು ಕದ್ದು ಇಟ್ಟುಕೊಂಡಿದ್ದರು. ಜಾನ್ವಿ ಹಾಗೂ ಟೀಂ ಹಾಲನ್ನು ಬಿಸಿ ಮಾಡಿಕೊಂಡು ಕಾಫಿ ಪೌಡರ್ ಮಿಕ್ಸ್ ಮಾಡಿ ಕುಡಿಯುತ್ತಿದ್ದರು. ಈ ವಿಚಾರ ರಿವೀಲ್ ಆಗಿದೆ. ಧನುಷ್ ಅವರಿಗೆ ಈ ವಿಷಯ ಗೊತ್ತಾಗಿದೆ. ಅವರು ಹೋಗಿ ಕ್ಯಾಪ್ಟನ್ ರಘು ಬಳಿ ಈ ವಿಚಾರ ಹೇಳಿದರು. ಆ ಕ್ಷಣಕ್ಕೆ ರಘು ಹೋಗಿ ತನಿಖೆಗೆ ಇಳಿದರು.

ಯಾರೂ ಒಪ್ಪದ ಕೆಲಸ ಮಾಡಿದ ಜಾನ್ವಿ ಆ್ಯಂಡ್ ಟೀಂ; ಬಿಗ್ ಬಾಸ್ ದೊಡ್ಡ ಶಿಕ್ಷೆ  
ಜಾನ್ವಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 15, 2025 | 9:37 PM

Share

‘ಬಿಗ್ ಬಾಸ್’ ಮನೆಯಲ್ಲಿ ಬರುವ ದಿನಸಿ ವಿಚಾರ ಸಾಕಷ್ಟು ತುಂಬಾನೇ ಮುಖ್ಯವಾಗುತ್ತದೆ. ಮನೆಯಲ್ಲಿ ಸದಸ್ಯರು ಹೆಚ್ಚಿರುತ್ತಾರೆ. ಹೀಗಾಗಿ, ಬೇಕಾದಾಗ, ಬೇಕಾದಷ್ಟನ್ನು ತಿನ್ನಲು ಸಾಧ್ಯವಿಲ್ಲ. ಈ ಕಾರಣಕ್ಕೆ ಯಾವುದೇ ವಸ್ತು ಬಂದರೂ ಅದನ್ನು ಸರಿಯಾಗಿ ಬಳಕೆ ಮಾಡಬೇಕು. ಆದರೆ, ಈ ಬಾರಿಯ ಸೀಸನ್​ನಲ್ಲಿ ಕಳ್ಳತನ ಶುರುವಾಗಿದೆ. ಜಾನ್ವಿ ಅವರು ಯಾರೂ ಒಪ್ಪದ ಕೆಲಸ ಮಾಡಿದರು. ಪರೋಕ್ಷವಾಗಿ ಬಿಗ್ ಬಾಸ್ ದೊಡ್ಡ ಶಿಕ್ಷೆ ನೀಡಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಜಾನ್ವಿ ಅವರು ಕಾಫಿ ಪುಡಿಯನ್ನು ಕದ್ದು ಇಟ್ಟುಕೊಂಡಿದ್ದರು. ಜಾನ್ವಿ ಹಾಗೂ ಟೀಂ ಹಾಲನ್ನು ಬಿಸಿ ಮಾಡಿಕೊಂಡು ಕಾಫಿ ಪೌಡರ್ ಮಿಕ್ಸ್ ಮಾಡಿ ಕುಡಿಯುತ್ತಿದ್ದರು. ಈ ವಿಚಾರ ರಿವೀಲ್ ಆಗಿದೆ. ಧನುಷ್ ಅವರಿಗೆ ಈ ವಿಷಯ ಗೊತ್ತಾಗಿದೆ. ಅವರು ಹೋಗಿ ಕ್ಯಾಪ್ಟನ್ ರಘು ಬಳಿ ಈ ವಿಚಾರ ಹೇಳಿದರು. ಆ ಕ್ಷಣಕ್ಕೆ ರಘು ಹೋಗಿ ತನಿಖೆಗೆ ಇಳಿದರು.

ಯಾರೊಬ್ಬರೂ ಕಾಫಿ ಪೌಡರ್ ಕದಿದ್ದೇನೆ ಎಂದು ಒಪ್ಪಿಕೊಳ್ಳಲು ರೆಡಿ ಇರಲೇ ಇಲ್ಲ. ಇದೇ ಸಮಯಕ್ಕೆ ಬಿಗ್ ಬಾಸ್ ಒಂದು ಶಿಕ್ಷೆ ಕೊಟ್ಟರು. ಜೈಲಿನಲ್ಲಿರುವ ವ್ಯಕ್ತಿಯ ಹೊರತಾಗಿ ಬೇರೆಯವರು (ರಕ್ಷಿತಾ) ತರಕಾರಿ ಕತ್ತರಿಸಿದ್ದರು. ಈ ಕಾರಣಕ್ಕೆ ಕಾಫಿ ಪೌಡರ್ ಎಲ್ಲವನ್ನೂ ಹಿಂದಿರುಗಿಸುವಂತೆ ಬಿಗ್ ಬಾಸ್ ಸೂಚಿಸಿದರು. ಆಗ ರಘು ಅವರು ಹೋಗಿ ಕದ್ದಿಟ್ಟ ಕಾಫಿ ಪೌಡರ್ ಕೊಡುವಂತೆ ಹೇಳಿದರು.

ಇದನ್ನೂ ಓದಿ: ಸುದೀಪ್​ ಅವರನ್ನೇ ಮ್ಯಾನ್ಯುಪಲೇಷನ್ ಮಾಡಲು ಹೋದ ಜಾನ್ವಿ; ಆಮೇಲೇನಾಗುತ್ತೆ ಗೊತ್ತಲ್ಲ

ಆಗ ಜಾನ್ವಿ ಅವರು ತಾವು ಕದ್ದಿಟ್ಟ ಕಾಫಿ ಪೌಡರ್ ನೀಡಿದರು. ‘ಇಷ್ಟೆಲ್ಲ ಕದ್ದಿಟ್ಟಿದ್ರಾ’ ಎಂದು ಜಾನ್ವಿಗೆ ರಘು ಪ್ರಶ್ನೆ ಮಾಡಿದರು. ಆ ಬಳಿಕ ಜಾನ್ವಿ ಅವರು ಅಶ್ವಿನಿ, ರಾಶಿಕಾ ಮೊದಲಾದವರ ಹೆಸರನ್ನು ತೆಗೆದುಕೊಂಡರು. ನಂತರ ಹಾಲು ಕದ್ದ ವಿಚಾರವೂ ಬೆಳಕಿಗೆ ಬಂತು. ‘ಜಾನ್ವಿ ಅವರು ಎರಡು ಬಾಟಲಿ ಹಾಲನ್ನು ಕದ್ದಿದ್ದಾರೆ’ ಎಂದು ರಿಷಾ ಗೌಡ ಹೇಳಿದರು. ಇದರಿಂದ ಜಾನ್ವಿ ಉರಿದುಕೊಂಡರು. ‘ನೀವು ನಾನು ಕದ್ದ ಹಾಲಲ್ಲಿ ಕಾಫಿ ಕುಡಿದಿದ್ದೀರಿ’ ಎಂದು ನೇರವಾಗಿ ಆರೋಪಿಸಿದರು. ‘ನೀವೇ ಕೆಟ್ಟದಾಗಿ ಕಾಣ್ಸೋದು ನಾನಲ್ಲ’ ಎಂದು ಜಾನ್ವಿ ಹೇಳಿದ ಮಾತು ತುಂಬಾನೇ ಹಾಸ್ಯಾಸ್ಪದವಾಗಿ ಕಾಣಿಸಿದ್ದಂತೂ ನಿಜ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ