AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೂ ಒಪ್ಪದ ಕೆಲಸ ಮಾಡಿದ ಜಾನ್ವಿ ಆ್ಯಂಡ್ ಟೀಂ; ಬಿಗ್ ಬಾಸ್ ದೊಡ್ಡ ಶಿಕ್ಷೆ  

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಜಾನ್ವಿ ಅವರು ಕಾಫಿ ಪುಡಿಯನ್ನು ಕದ್ದು ಇಟ್ಟುಕೊಂಡಿದ್ದರು. ಜಾನ್ವಿ ಹಾಗೂ ಟೀಂ ಹಾಲನ್ನು ಬಿಸಿ ಮಾಡಿಕೊಂಡು ಕಾಫಿ ಪೌಡರ್ ಮಿಕ್ಸ್ ಮಾಡಿ ಕುಡಿಯುತ್ತಿದ್ದರು. ಈ ವಿಚಾರ ರಿವೀಲ್ ಆಗಿದೆ. ಧನುಷ್ ಅವರಿಗೆ ಈ ವಿಷಯ ಗೊತ್ತಾಗಿದೆ. ಅವರು ಹೋಗಿ ಕ್ಯಾಪ್ಟನ್ ರಘು ಬಳಿ ಈ ವಿಚಾರ ಹೇಳಿದರು. ಆ ಕ್ಷಣಕ್ಕೆ ರಘು ಹೋಗಿ ತನಿಖೆಗೆ ಇಳಿದರು.

ಯಾರೂ ಒಪ್ಪದ ಕೆಲಸ ಮಾಡಿದ ಜಾನ್ವಿ ಆ್ಯಂಡ್ ಟೀಂ; ಬಿಗ್ ಬಾಸ್ ದೊಡ್ಡ ಶಿಕ್ಷೆ  
ಜಾನ್ವಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 15, 2025 | 9:37 PM

Share

‘ಬಿಗ್ ಬಾಸ್’ ಮನೆಯಲ್ಲಿ ಬರುವ ದಿನಸಿ ವಿಚಾರ ಸಾಕಷ್ಟು ತುಂಬಾನೇ ಮುಖ್ಯವಾಗುತ್ತದೆ. ಮನೆಯಲ್ಲಿ ಸದಸ್ಯರು ಹೆಚ್ಚಿರುತ್ತಾರೆ. ಹೀಗಾಗಿ, ಬೇಕಾದಾಗ, ಬೇಕಾದಷ್ಟನ್ನು ತಿನ್ನಲು ಸಾಧ್ಯವಿಲ್ಲ. ಈ ಕಾರಣಕ್ಕೆ ಯಾವುದೇ ವಸ್ತು ಬಂದರೂ ಅದನ್ನು ಸರಿಯಾಗಿ ಬಳಕೆ ಮಾಡಬೇಕು. ಆದರೆ, ಈ ಬಾರಿಯ ಸೀಸನ್​ನಲ್ಲಿ ಕಳ್ಳತನ ಶುರುವಾಗಿದೆ. ಜಾನ್ವಿ ಅವರು ಯಾರೂ ಒಪ್ಪದ ಕೆಲಸ ಮಾಡಿದರು. ಪರೋಕ್ಷವಾಗಿ ಬಿಗ್ ಬಾಸ್ ದೊಡ್ಡ ಶಿಕ್ಷೆ ನೀಡಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಜಾನ್ವಿ ಅವರು ಕಾಫಿ ಪುಡಿಯನ್ನು ಕದ್ದು ಇಟ್ಟುಕೊಂಡಿದ್ದರು. ಜಾನ್ವಿ ಹಾಗೂ ಟೀಂ ಹಾಲನ್ನು ಬಿಸಿ ಮಾಡಿಕೊಂಡು ಕಾಫಿ ಪೌಡರ್ ಮಿಕ್ಸ್ ಮಾಡಿ ಕುಡಿಯುತ್ತಿದ್ದರು. ಈ ವಿಚಾರ ರಿವೀಲ್ ಆಗಿದೆ. ಧನುಷ್ ಅವರಿಗೆ ಈ ವಿಷಯ ಗೊತ್ತಾಗಿದೆ. ಅವರು ಹೋಗಿ ಕ್ಯಾಪ್ಟನ್ ರಘು ಬಳಿ ಈ ವಿಚಾರ ಹೇಳಿದರು. ಆ ಕ್ಷಣಕ್ಕೆ ರಘು ಹೋಗಿ ತನಿಖೆಗೆ ಇಳಿದರು.

ಯಾರೊಬ್ಬರೂ ಕಾಫಿ ಪೌಡರ್ ಕದಿದ್ದೇನೆ ಎಂದು ಒಪ್ಪಿಕೊಳ್ಳಲು ರೆಡಿ ಇರಲೇ ಇಲ್ಲ. ಇದೇ ಸಮಯಕ್ಕೆ ಬಿಗ್ ಬಾಸ್ ಒಂದು ಶಿಕ್ಷೆ ಕೊಟ್ಟರು. ಜೈಲಿನಲ್ಲಿರುವ ವ್ಯಕ್ತಿಯ ಹೊರತಾಗಿ ಬೇರೆಯವರು (ರಕ್ಷಿತಾ) ತರಕಾರಿ ಕತ್ತರಿಸಿದ್ದರು. ಈ ಕಾರಣಕ್ಕೆ ಕಾಫಿ ಪೌಡರ್ ಎಲ್ಲವನ್ನೂ ಹಿಂದಿರುಗಿಸುವಂತೆ ಬಿಗ್ ಬಾಸ್ ಸೂಚಿಸಿದರು. ಆಗ ರಘು ಅವರು ಹೋಗಿ ಕದ್ದಿಟ್ಟ ಕಾಫಿ ಪೌಡರ್ ಕೊಡುವಂತೆ ಹೇಳಿದರು.

ಇದನ್ನೂ ಓದಿ: ಸುದೀಪ್​ ಅವರನ್ನೇ ಮ್ಯಾನ್ಯುಪಲೇಷನ್ ಮಾಡಲು ಹೋದ ಜಾನ್ವಿ; ಆಮೇಲೇನಾಗುತ್ತೆ ಗೊತ್ತಲ್ಲ

ಆಗ ಜಾನ್ವಿ ಅವರು ತಾವು ಕದ್ದಿಟ್ಟ ಕಾಫಿ ಪೌಡರ್ ನೀಡಿದರು. ‘ಇಷ್ಟೆಲ್ಲ ಕದ್ದಿಟ್ಟಿದ್ರಾ’ ಎಂದು ಜಾನ್ವಿಗೆ ರಘು ಪ್ರಶ್ನೆ ಮಾಡಿದರು. ಆ ಬಳಿಕ ಜಾನ್ವಿ ಅವರು ಅಶ್ವಿನಿ, ರಾಶಿಕಾ ಮೊದಲಾದವರ ಹೆಸರನ್ನು ತೆಗೆದುಕೊಂಡರು. ನಂತರ ಹಾಲು ಕದ್ದ ವಿಚಾರವೂ ಬೆಳಕಿಗೆ ಬಂತು. ‘ಜಾನ್ವಿ ಅವರು ಎರಡು ಬಾಟಲಿ ಹಾಲನ್ನು ಕದ್ದಿದ್ದಾರೆ’ ಎಂದು ರಿಷಾ ಗೌಡ ಹೇಳಿದರು. ಇದರಿಂದ ಜಾನ್ವಿ ಉರಿದುಕೊಂಡರು. ‘ನೀವು ನಾನು ಕದ್ದ ಹಾಲಲ್ಲಿ ಕಾಫಿ ಕುಡಿದಿದ್ದೀರಿ’ ಎಂದು ನೇರವಾಗಿ ಆರೋಪಿಸಿದರು. ‘ನೀವೇ ಕೆಟ್ಟದಾಗಿ ಕಾಣ್ಸೋದು ನಾನಲ್ಲ’ ಎಂದು ಜಾನ್ವಿ ಹೇಳಿದ ಮಾತು ತುಂಬಾನೇ ಹಾಸ್ಯಾಸ್ಪದವಾಗಿ ಕಾಣಿಸಿದ್ದಂತೂ ನಿಜ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದ ಡಿಕೆಶಿ: ಹೇಳಿದ್ದೇನು ನೋಡಿ!
ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದ ಡಿಕೆಶಿ: ಹೇಳಿದ್ದೇನು ನೋಡಿ!
ಮಾ.03 ಚಂದ್ರಗ್ರಹಣ; ವೃಶ್ಚಿಕ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ವೃಶ್ಚಿಕ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಇದು ಕೆಸರು ಗದ್ದೆಯಲ್ಲ, ಹಾವೇರಿ-ಶಿರಸಿ ರಾಜ್ಯ ಹೆದ್ದಾರಿ!
ಇದು ಕೆಸರು ಗದ್ದೆಯಲ್ಲ, ಹಾವೇರಿ-ಶಿರಸಿ ರಾಜ್ಯ ಹೆದ್ದಾರಿ!
ಎಐಎಡಿಎಂಕೆಯ ಉಚ್ಚಾಟಿತ ನಾಯಕ ಪನ್ನೀರ್​​ಸೆಲ್ವಂ ಡಿಎಂಕೆಗೆ ಸೇರ್ಪಡೆ
ಎಐಎಡಿಎಂಕೆಯ ಉಚ್ಚಾಟಿತ ನಾಯಕ ಪನ್ನೀರ್​​ಸೆಲ್ವಂ ಡಿಎಂಕೆಗೆ ಸೇರ್ಪಡೆ
ಜಿಮ್ ಸೇರಿದ ವಾರದಲ್ಲೇ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಹೃದಯಾಘಾತದಿಂದ ಸಾವು
ಜಿಮ್ ಸೇರಿದ ವಾರದಲ್ಲೇ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಹೃದಯಾಘಾತದಿಂದ ಸಾವು
ಮಾ.03ರ ಚಂದ್ರಗ್ರಹಣದ ಬಳಿಕ ಈ ರಾಶಿಗೆ ಹಣ, ಸಂಪತ್ತು, ಖ್ಯಾತಿ ಅರಸಿ ಬರಲಿದೆ!
ಮಾ.03ರ ಚಂದ್ರಗ್ರಹಣದ ಬಳಿಕ ಈ ರಾಶಿಗೆ ಹಣ, ಸಂಪತ್ತು, ಖ್ಯಾತಿ ಅರಸಿ ಬರಲಿದೆ!
ರಸ್ತೆ ದಾಟುತ್ತಿದ್ದ ಹಸುವಿಗೆ ಗುದ್ದಿದ ಬೈಕ್
ರಸ್ತೆ ದಾಟುತ್ತಿದ್ದ ಹಸುವಿಗೆ ಗುದ್ದಿದ ಬೈಕ್